Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಚೀನಾ ನ್ಯೂಮೋನಿಯಾ ಬಗ್ಗೆ ಎಚ್ಚರವಿರಲಿ

by KM Shivaraju November 29, 2023
written by KM Shivaraju November 29, 2023 0 comments 2 minutes read
5FacebookTwitterPinterestEmail
140
ಆತಂಕಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ಚೀನಾದಲ್ಲಿ ಕಾಣಿಸಿಕೊಂಡಿರುವ ನ್ಯೂಮೋನಿಯಾ ಸಾಂಕ್ರಾಮಿಕ ರೋಗದ ಬಗ್ಗೆ ಎಚ್ಚರವಿರಲಿ. ಆದರೆ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಸರ್ಕಾರ ರೋಗಕ್ಕೆ ಸಂಬಂಧಿಸಿದಂತೆ ನೀಡಿರುವ ಮಾರ್ಗಸೂಚಿಗಳ ಅನ್ವಯ ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಸೋಂಕು ಕಂಡುಬಂದಿಲ್ಲ

ಇದುವರೆಗೂ ಕರ್ನಾಟಕದ ಯಾವುದೇ ಭಾಗದಲ್ಲಿ ಇಂತಹ ಸೋಂಕು ಕಂಡುಬಂದಿಲ್ಲ. ಆದರೆ, ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶ ಮಾಡಿದ್ದೇವೆ.

ಚೀನಾ ಸೋಂಕು ಮತ್ತು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಇಲಾಖಾ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯೂಮೋನಿಯಾ ಬಗ್ಗೆ ಕೆಲವು ಸಂಶಯ ಪ್ರಕರಣಗಳು ವರದಿಯಾಗಿದ್ದು ಅವುಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ.

ಕೇಂದ್ರದ ಮಾರ್ಗಸೂಚಿಯಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಯಾರಲ್ಲಿಯೇ ತೀವ್ರ ಜ್ವರ ಕಂಡುಬಂದಲ್ಲಿ ತಕ್ಷಣವೇ ವೈದ್ಯರ ಬಳಿ ತೆರಳಿ ವಿವಿಧ ಪರೀಕ್ಷೆಗೆ ಒಳಪಡಬೇಕು, ಈ ಶೀತ ಜ್ವರ ಸಾಮಾನ್ಯವಾಗಿ ಐದು ದಿನಗಳವರೆಗೆ ಇರುತ್ತದೆ.

ಮಕ್ಕಳು ಹಾಗೂ ವೃದ್ಧರು ಎಚ್ಚರಿಕೆಯಿಂದ ಇರಬೇಕು. ಅಲ್ಲದೆ, ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರದಿಂದ ಬಾಯಿ-ಮೂಗು ಮುಚ್ಚಿಕೊಳ್ಳಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿದರೆ ಒಳ್ಳೆಯದು. ಹಾಗೆಯೇ ಆಗಿಂದಾಗ್ಯೆ ಸೋಪಿನಿಂದ ಕೈಗಳನ್ನು ಸ್ವಚ್ಛ ಮಾಡಿಕೊಳ್ಳಿ.

ಮುಂಜಾಗ್ರತಾ ಕ್ರಮ ವಹಿಸಿ

ಸೋಂಕಿಗೆ ಸಂಬಂಧಿಸಿದಂತೆ ಪ್ರತಿನಿತ್ಯ ಅಧಿಕಾರಿಗಳು ನಿಗಾವಹಿಸಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ. ಇಷ್ಟರ ನಡುವೆಯೂ ಸೋಂಕಿನ ಬಗ್ಗೆ ಎಚ್ಚರವಿರಲಿ, ಆದರೆ, ಆತಂಕ ಬೇಡ ಎಂದರು.

ಮಂಡ್ಯ-ಮೈಸೂರಿನಲ್ಲಿ ಪತ್ತೆಯಾದ ಭ್ರೂಣಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಪೋಲೀಸ್ ಇಲಾಖೆ ಜಂಟಿಯಾಗಿ ಕಣ್ಗಾವಲು ಇಡಬೇಕು ಎಂದು ಸೂಚಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇನ್ನು ಮುಂದೆ ರಾಜ್ಯದ ಆಸ್ಪತ್ರೆಗಳಲ್ಲಿ ನಿಯಮಿತವಾಗಿ ಸ್ಕ್ಯಾನಿಂಗ್ ಯಂತ್ರಗಳನ್ನು ಪರಿಶೀಲಿಸಬೇಕು. ಗರ್ಭಪಾತದಂತಹ ಪ್ರಕರಣಗಳ ಮೇಲೆ ಕಣ್ಣಿಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಸಭೆ

ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಬೇಕು. ಮೂರು ತಿಂಗಳಿಗೊಮ್ಮೆ ಆರೋಗ್ಯ ಇಲಾಖೆಯ ಆಯುಕ್ತರು ಸಭೆ ನಡೆಸಿ ಇದರ ಮೇಲೆ ಕಣ್ಣಿಡಬೇಕು ಎಂದ ಅವರು, ಆರು ತಿಂಗಳಿಗೊಮ್ಮೆ ಆರೋಗ್ಯ ಸಚಿವರು ಖುದ್ದಾಗಿ ಸಭೆ ನಡೆಸಿ ಪರಿಶೀಲನೆ ನಡೆಸುವುದಾಗಿ ವಿವರಿಸಿದರು.

ಈಗ ಪತ್ತೆಯಾದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಇಂತಹ ಭ್ರೂಣಹತ್ಯೆಯ ಪ್ರಕರಣಗಳು ಮಂಡ್ಯ, ಮೈಸೂರು ಮಾತ್ರವಲ್ಲದೆ ರಾಜ್ಯದ ಎಲ್ಲ ಭಾಗಗಳಲ್ಲಿ ನಡೆದಿರುವ ಸಾಧ್ಯತೆ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ಇದು ಪುನರಾವರ್ತನೆಯಾಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು.

ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದು ನಮ್ಮ ಕಣ್ಣು ತೆರಸಿದೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ತಡೆಗೆ ಕಟ್ಟುನಿಟ್ಟಿನ ಸೂಚನೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ನಿಯಂತ್ರಣವಾಗದಿದ್ದರೆ ಅಧಿಕಾರಗಳ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ರಾಜ್ಯಾದ್ಯಂತ ಈ ಜಾಲ ಹರಡಿರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಲಿಂಗಾನುಪಾತ ಗಮನಿಸಿದರೆ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಈಗ ಪತ್ತೆಯಾಗಿರುವ ಪ್ರಕರಣವನ್ನು ಗಮನಿಸಿದರೆ ಭ್ರೂಣಹತ್ಯೆಯೇ ಲಿಂಗಾನುಪಾತದಲ್ಲಿ ಅಸಮಾನತೆ ಕಾಣಲು ಮುಖ್ಯ ಕಾರಣ ಎಂದು ಅವರು ಅಭಿಪ್ರಾಯಪಟ್ಟರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cautionchina pneumoniadinesh gunduraokmskmskannadno need to worry
5 FacebookTwitterPinterestEmail
KM Shivaraju

previous post
ವಂದಿತಾ ಶರ್ಮಾ ಅವರಿಗೆ ಬೀಳ್ಕೊಡುಗೆ
next post
5000 ಬಸ್ ನಲ್ಲಿ ಕಣ್ಗಾವಲು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ