Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಮಲಕ್ಕೆ ಕೈಕೊಟ್ಟ ಶಾಸಕರು

by KM Shivaraju December 14, 2023
written by KM Shivaraju December 14, 2023 3 comments 2 minutes read
2FacebookTwitterPinterestEmail
215
ಕಾಂಗ್ರೆಸ್ ಸಭೆಯಲ್ಲಿ ಸೋಮಶೇಖರ್, ಹೆಬ್ಬಾರ್, ವಿಶ್ವನಾಥ್


ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು, ಉತ್ತರ ಕನ್ನಡ ಕ್ಷೇತ್ರಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಆಕಾಂಕ್ಷಿಗಳಾಗಿರುವ ಬಿಜೆಪಿಯ ಶಾಸಕರಾದ ಎಚ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಎಚ್. ವಿಶ್ವನಾಥ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲೇ ಬಿಜೆಪಿಯಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದಾರೆ.

ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ಬಹಿರಂಗವಾಗಿಯೇ ಬಿಜೆಪಿ ಮತ್ತು ಅದರ ನಾಯಕರನ್ನು ಟೀಕಿಸುತ್ತಾ, ಕಾಂಗ್ರೆಸ್ ನಾಯಕರನ್ನು ಹೊಗಳುತ್ತಾ ಆ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕರಿಂದಲೂ ಹಸಿರು ನಿಶಾನೆ

ಅಧಿಕಾರ ಕಳೆದುಕೊಂಡ ತಕ್ಷಣವೇ ಬಿಜೆಪಿಯ ನಾಯಕರನ್ನು ನಿಂದಿಸಿ ಆ ಪಕ್ಷದ ಕಾರ್ಯಕ್ರಮಗಳಿಗೂ ಹೋಗದೆ, ಕಾಂಗ್ರೆಸ್ ಮುಖಂಡರ ಜೊತೆ ಬೆರೆಯುತ್ತಿರುವ ಸೋಮಶೇಖರ್ ಹಾಗೂ ಹೆಬ್ಬಾರ್ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರಿಂದಲೂ ಹಸಿರು ನಿಶಾನೆ ದೊರೆತಂತಿದೆ.

ನಿನ್ನೆ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಕಾಣಿಸಿಕೊಂಡು ನಂತರ ಡಿ.ಕೆ. ಶಿವಕುಮಾರ್ ಕರೆದಿದ್ದ ಔತಣಕೂಟ ಹಾಗೂ ಸಾಧು ಕೋಕಿಲ ಅವರ ಮನರಂಜನಾ ಕಾರ್ಯಕ್ರಮದಲ್ಲಿ ಇತರ ಶಾಸಕರ ಜೊತೆ ಸ್ಟೆಪ್ ಹಾಕಿದ್ದಾರೆ.

ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು

ಮುಖ್ಯಮಂತ್ರಿ ಅವರಿಗೆ ತಮ್ಮ ತವರು ಜಿಲ್ಲೆಯ ಲೋಕಸಭಾ ಕ್ಷೇತ್ರವನ್ನು ಪಕ್ಷದ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದಾರೆ.

ಯಡಿಯುರಪ್ಪ ಮತ್ತು ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿದ್ದ ಸೋಮಶೇಖರ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ವಹಿಸಲಾಗಿತ್ತು, ಆ ಸಂದರ್ಭದಲ್ಲಿ ಅವರು ಜಿಲ್ಲಾ ಜನರಿಗೆ ಚಿರಪರಿಚಿತರಾಗಿದ್ದರು, ಇದಕ್ಕೂ ಮಿಗಿಲಾಗಿ ಅವರು ಒಕ್ಕಲಿಗ ಸಮಯದಾಯಕ್ಕೆ ಸೇರಿದವರಾಗಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸೋಮಶೇಖರ್ ಅವರಿಗೆ ಜೆಡಿಎಸ್ ಮುಖಂಡರ ಬೆಂಬಲವೂ ದೊರೆಯಬಹುದು.

ಅಲ್ಪಸಂಖ್ಯಾತರು, ಪರಿಶಿಷ್ಟ ಹಾಗೂ ಹಿಂದುಳಿದ ಸಮಯದಾಯ ಸೇರಿದಂತೆ ಒಂದಿಷ್ಟು ಒಕ್ಕಲಿಗ ಮತಗಳನ್ನೂ ಪಡೆದರೆ ಈ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಬಹುದು ಎಂಬುದು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಅಭಿಪ್ರಾಯವಾಗಿದೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ

ಈ ಕಾರಣದಿಂದಲೇ ಸೋಮಶೇಖರ್ ಅವರನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಮುಂದಾಗಿದ್ದಾರೆ. ಇದರ ಮಧ್ಯೆ ವಿಶ್ವನಾಥ್ ಕೂಡ ಇದೇ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸತ್ ಪ್ರವೇಶಿಸಲು ಆಸಕ್ತಿ ತೋರಿರುವ ಹೆಬ್ಬಾರ್ ಕಾಂಗ್ರೆಸ್ ಟಿಕೆಟ್ ಬಯಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಸದಸ್ಯ ಆರ್.ವಿ. ದೇಶಪಾಂಡೆ ಪುತ್ರನಿಗೆ ಈ ಬಾರಿ ಬಿಜೆಪಿ ಟಿಕೆಟ್ ದೊರೆಯಲಿದೆ ಎಂಬ ಮಾತು ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ದೇಶಪಾಂಡೆ ಮಗನ ವಿರುದ್ಧ ಕಣಕ್ಕಿಳಿಯಲು ಹೆಬ್ಬಾರ್, ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ, ಇದಕ್ಕೆ ಕಾಂಗ್ರೆಸ್ ನಾಯಕರ ಬೆಂಬಲವೂ ಇದೆ ಎನ್ನಲಾಗಿದೆ.

ಬಿಜೆಪಿ ಶಾಸಕಾಂಗ ಸಭೆಯಿಂದ ದೂರ

ಸೋಮಶೇಖರ್ ಮತ್ತು ಹೆಬ್ಬಾರ್ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದರು.

ಆದರೆ ನಿನ್ನೆ ನಡೆದ ಕಾಂಗ್ರೆಸ್‌ನ ಸಭೆ ಮತ್ತು ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗವಹಿಸುವ ಮೂಲಕ ರಾಜಕೀಯ ಅಂಗಳದಲ್ಲಿ ನಡೆಯುತ್ತಿರುವ ಚರ್ಚೆಗೆ ಪುಷ್ಟಿ ಕೊಟ್ಟಿದ್ದಾರೆ.

ಬಿಜೆಪಿ ಸದಸ್ಯರು ಪಕ್ಷದ ಔತಣಕೂಟ ಮತ್ತು ಸಭೆಯಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ಶಾಸಕರಾದ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ನಿನ್ನೆ ರಾತ್ರಿ ಪಕ್ಷದ ಸಭೆಗೆ ಬಂದಿಲ್ಲ. ನಾವು ಆಹ್ವಾನ ನೀಡಿದ್ದ ಭೋಜನಕೂಟಕ್ಕೆ ಬಂದಿದ್ದರು ಎಂದು ತಿಳಿಸಿದ್ದಾರೆ.

ವಿಶ್ವನಾಥ್ ಅವರು ಸೇರಿದಂತೆ ಅನ್ಯ ಪಕ್ಷದ 10 ಶಾಸಕರು ಉಪಹಾರ ಕೂಟಕ್ಕೆ ಬಂದಿದ್ದರು, ನಮ್ಮ ಶಾಸಕಾಂಗ ಸಭೆಗೆ ಏಕೆ ಬರುತ್ತಾರೆ. ಅವರು ನಮ್ಮ ಪಕ್ಷದ ಶಾಸಕರಲ್ಲ. ಹೀಗಾಗಿ ಅವರು ನಮ್ಮ ಶಾಸಕಾಂಗ ಸಭೆಗೆ ಬಂದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavibengalurubjp. congressindiakarnatakakmskmskannadapolitics
2 FacebookTwitterPinterestEmail
KM Shivaraju

previous post
ಅಕ್ರಮ-ಸಕ್ರಮ
next post
ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ವಿಸ್ತರಣೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ