Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೂವರು ಉಪಮುಖ್ಯಮಂತ್ರಿ ನೇಮಿಸಿ

by KM Shivaraju December 25, 2023
written by KM Shivaraju December 25, 2023 0 comments 1 minutes read
4FacebookTwitterPinterestEmail
154

ಕಾಂಗ್ರೆಸ್ ವರಿಷ್ಠರ ಮೇಲೆ ಮತ್ತೆ ಒತ್ತಡ

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟವನ್ನು ಪುನರ್ ರಚಿಸಿ ಹೊಸದಾಗಿ ಮೂವರು ಉಪಮುಖ್ಯಮಂತ್ರಿಗಳಿಗೆ ಅವಕಾಶ ಮಾಡಿಕೊಡುವಂತೆ ಕಾಂಗ್ರೆಸ್ ವರಿಷ್ಠರ ಮೇಲೆ ಮತ್ತೆ ಒತ್ತಡ ಹಾಕಲಾಗುತ್ತಿದೆ.

ಚುನಾವಣೆ ಸಮಯದಲ್ಲಿ ಮೌನವಾಗಿದ್ದ ಕೆಲವು ಮುಖಂಡರು ಮತ್ತೆ ಉಪಮಖ್ಯಮಂತ್ರಿ ನೇಮಕಾತಿಯನ್ನು ಮುನ್ನೆಲೆಗೆ ತಂದಿದ್ದಾರೆ.

ಸತೀಶ್ ಜಾರಕಿಹೊಳಿ ವರಿಷ್ಠರ ಮೇಲೆ ಒತ್ತಡ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ನಿಲುವನ್ನು ಮುಂದಿಟ್ಟುಕೊಂಡು ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದು ಇದಕ್ಕೆ ಕಾಂಗ್ರೆಸ್‌ನ ಕೆಲವು ಶಾಸಕರು ಬೆನ್ನೆಲುಬಾಗಿ ನಿಂತಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪರಿಶಿಷ್ಟ ಜಾತಿ, ವರ್ಗ ಹಾಗೂ ವೀರಶೈವ ಸಮುದಾಯದ ತಲಾ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ವರಿಷ್ಠರ ಮೇಲೆ ಸತೀಶ್ ಒತ್ತಡ ಹೇರಿದ್ದಾರೆ.

ಸಚಿವ ಸ್ಥಾನದಿಂದ ಬಡ್ತಿಗೆ ಮನವಿ

ತಮ್ಮ ಆಪ್ತರ ಜೊತೆಗೂಡಿ ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಬಿಡಾರ ಹೂಡಿದ್ದ ಸತೀಶ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಕೆಲವು ಮುಖಂಡರನ್ನು ಭೇಟಿ ಮಾಡಿ ತಮಗೆ ಸಚಿವ ಸ್ಥಾನದಿಂದ ಬಡ್ತಿ ನೀಡುವಂತೆ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನೀವು ನೀಡಿರುವ ಗುರಿ ಮುಟ್ಟಲು ಕರ್ನಾಟಕದಲ್ಲಿ ಜಾತಿ ಸಮೀಕರಣ ಅಗತ್ಯವಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆ ಜೊತೆಗೆ ಜಾತಿಗಳ ಸಮೀಕರಣದಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕಾದರೆ ಈ ಮೂರು ವರ್ಗಗಳಿಗೆ ಸೇರಿದ ಹಿರಿಯ ಶಾಸಕರಲ್ಲಿ ತಲಾ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ.

ಕನಿಷ್ಠ 20 ಸ್ಥಾನ ಗೆಲ್ಲಲು ಸಾಧ್ಯ

ಇದರಿಂದ ನಮಗೆ ಮತ ಗಳಿಕೆ ಹೆಚ್ಚಿ 28 ರಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸದಾ ಕತ್ತಿ ಮಸೆಯುತ್ತಿರುವ ಜಾರಕಿಹೊಳಿ ಕುಟುಂಬ ಇದೀಗ ಸಿದ್ದರಾಮಯ್ಯ ಸಂಪುಟದಲ್ಲಿ ಅವರ ಬಲವನ್ನು ಕುಗ್ಗಿಸಲು ಹೊರಟಿದೆ.

ಸರ್ಕಾರದಲ್ಲಿ ಶಿವಕುಮಾರ್ ಪ್ರಾಬಲ್ಯ ಸಾಧಿಸಿ ಮುಖ್ಯಮಂತ್ರಿ ಅವರ ಮೇಲೆಯೇ ಹಿಡಿತ ಸಾಧಿಸಲು ಹೊರಟಿರುವುದು ಜಾರಕಿಹೊಳಿ ಕುಟುಂಬಕ್ಕೆ ಸಹಿಸಲಾಗುತ್ತಿಲ್ಲ.

ಶಿವಕುಮಾರ್ ಅಧಿಕಾರ ಕುಗ್ಗಿಸುವ ಉದ್ದೇಶ

ಶಿವಕುಮಾರ್ ಅಧಿಕಾರವನ್ನು ಕುಗ್ಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ ಮೂರು ಉಪಮುಖ್ಯಮಂತ್ರಿ ಸ್ಥಾನಗಳನ್ನು ಸೃಷ್ಠಿಸಿ ಎಂದು ಜಾರಕಿಹೊಳಿ ರಾಜಕೀಯ ದಾಳ ಹಾಕಿದ್ದಾರೆ.

ಸತೀಶ್ ಹಿಂದೆ ಸರ್ಕಾರದಲ್ಲಿರುವ ಮತ್ತು ರಾಜ್ಯ ಕಾಂಗ್ರೆಸ್ ಪ್ರಭಾವಿಗಳು ಬೆನ್ನೆಲುಬಾಗಿ ನಿಂತಿರುವುದು ವರಿಷ್ಠರಿಗೆ ನುಂಗಲಾರದ ತುತ್ತಾಗಿದೆ.

ಸತೀಶ್ ದೆಹಲಿಗೆ ತೆರಳುವುದಕ್ಕೂ ಮುನ್ನ ಪರಿಶಿಷ್ಟ ಜಾತಿ ಹಾಗೂ ವರ್ಗದ ಪಕ್ಷದ ಶಾಸಕರ ಜೊತೆ ಮತ್ತು ತಮ್ಮ ಹೋರಾಟಕ್ಕೆ ತೆರೆಮರೆಯಲ್ಲಿ ಬೆಂಬಲವಾಗಿ ನಿಂತವರ ಜೊತೆಯಲ್ಲೂ ಸಭೆಗಳನ್ನು ನಡೆಸಿದ್ದರು ಎನ್ನಲಾಗಿದೆ.

ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಎಐಸಿಸಿ, ಸತೀಶ್ ದಾಳವನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongressdk shivakumarkarnatakakmskmskannadanewspoliticsSiddaramaiah
4 FacebookTwitterPinterestEmail
KM Shivaraju

previous post
ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ
next post
ಬಿಎಂಟಿಸಿಗೆ 1400 ಎಲೆಕ್ಟ್ರಿಕ್ ಬಸ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ