Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೋಕಸಭೆ ಚುನಾವಣೆ: ಯಾರಿಗೆ ಯಾವ ಕ್ಷೇತ್ರ ಗೋತ್ತೆ?

by admin December 29, 2023
written by admin December 29, 2023 1 comment 1 minutes read
3FacebookTwitterPinterestEmail
202

ಜೆಡಿಎಸ್-ಬಿಜೆಪಿ ಹಂಚಿಕೆ ಅಂತಿಮ: ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆ ಮೊರೆ

ಬೆಂಗಳೂರು: ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿರುವ ಜೆಡಿಎಸ್ ಉಳಿದ 24 ಕ್ಷೇತ್ರಗಳಲ್ಲಿ ಮಿತ್ರ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸಲಿವೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕಳೆದ ವಾರ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಸೀಟು ಹೊಂದಾಣಿಕೆ ಅಂತಿಮಗೊಳಿಸಲಾಗಿದ್ದು, ಆದರೆ, ಬಹಿರಂಗ ಪಡಿಸಲಾಗಿಲ್ಲ.

ದೆಹಲಿಯಿಂದ ಹಿಂತಿರುಗುತ್ತಿದ್ದಂತೆ ಕುಮಾರಸ್ವಾಮಿ ತಮ್ಮ ಪಾಲಿಗೆ ಬಂದಿರುವ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಆ ಕ್ಷೇತ್ರಗಳಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ್ದಾರೆ. ಪ್ರತಿನಿತ್ಯ ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಶಾಸಕರು, ಮುಖಂಡರು, ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ನಿರಂತರ ಚರ್ಚೆಯಲ್ಲಿದ್ದಾರೆ.

ಅಭ್ಯರ್ಥಿಗಳ ಆಯ್ಕೆಗೆ ಪ್ರತ್ಯೇಕ ಸಮೀಕ್ಷೆ

ಈ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಯಾರಾಗಬೇಕು ಎಂಬುದಕ್ಕೆ ಬಿಜೆಪಿ ಜೊತೆ ಕೈಜೋಡಿಸಿ ಪ್ರತ್ಯೇಕ ಸಮೀಕ್ಷೆಯನ್ನು ಆರಂಭಿಸಿದ್ದಾರೆ. ಬಿಜೆಪಿ ಈಗಾಗಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಪ್ರತ್ಯೇಕ ಸಮೀಕ್ಷೆಗಳನ್ನು ನಡೆಸಿ ವರದಿ ಪಡೆದಿದ್ದರೂ ಮತ್ತೆ ಸರ್ವೆ ಕಾರ್ಯ ನಡೆಸುತ್ತಿದೆ. ಜೆಡಿಎಸ್ ಕೈಗೊಂಡಿರುವ ಸಮೀಕ್ಷಾ ವರದಿ ಜನವರಿ ಮಧ್ಯಭಾಗದ ವೇಳೆಗೆ ಕೈಸೇರಲಿದ್ದು, ಇದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಇದಕ್ಕೂ ಮುನ್ನ ಕುಮಾರಸ್ವಾಮಿ, ಸ್ವತಃ ತಮ್ಮ ಬಿಡದಿ ತೋಟದಲ್ಲಿ ಕುಳಿತು ಕಾರ್ಯಕರ್ತರಿಂದ, ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.

ಸದ್ದಿಲ್ಲದೆ ಆಪರೇಷನ್ ಕಮಲ

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ವಿಶ್ವಾಸಕ್ಕೆ

ಈ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಏನಾದರೂ ಭಿನ್ನಾಭಿಪ್ರಾಯವಿದ್ದರೆ, ಅದನ್ನು ಬಗೆಹರಿಸುವಲ್ಲಿ ನಿರತರಾಗಿದ್ದಾರೆ. ದೆಹಲಿಯಿಂದ ಬಂದ ನಂತರ ಸಮಯವನ್ನು ವ್ಯರ್ಥ ಮಾಡದೆ, ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದು, ತಮ್ಮ ಕುಟುಂಬದ ಯಾರೂ ಹಸ್ತಕ್ಷೇಪ ಮಾಡದಂತೆ ಎಚ್ಚರ ವಹಿಸಿದ್ದಾರೆ. ತುಮಕೂರು ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷದ ಕಾರ್ಯಕರ್ತರ ಜೊತೆಗೆ ಬಿಜೆಪಿ ಮುಖಂಡರ ಜೊತೆಯೂ ಸಂಪರ್ಕದಲ್ಲಿದ್ದು, ಸಂಘಟನೆ ಮತ್ತು ಚುನಾವಣೆ ಸಂಬಂಧ ಸಹಕಾರ ಪಡೆದುಕೊಳ್ಳುತ್ತಿದ್ದಾರೆ.

ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ

ಈ ಕ್ಷೇತ್ರಗಳಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕಾರ್ಯವನ್ನು ಜನವರಿ ಮಧ್ಯಭಾಗದೊಳಗೆ ಪೂರ್ಣಗೊಳಿಸಿ ಸಂಕ್ರಾಂತಿ ನಂತರ ಚುನಾವಣಾ ಪ್ರಚಾರವನ್ನು ಆರಂಭಿಸಲು ತೀರ್ಮಾನಿಸಿದ್ದಾರೆ. ತಾವು ಪ್ರಚಾರ ಕೈಗೊಳ್ಳುವ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗದುಕೊಳ್ಳುವ ಜೊತೆಗೆ ಅವರನ್ನೂ ಈ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಲಿದ್ದಾರಂತೆ. ಜೆಡಿಎಸ್ ಬಯಸಿದಲ್ಲಿ ಬೆಂಗಳೂರು ಗ್ರಾಮಾಂತರ ಸೇರಿದಂತೆ ಹೈದರಾಬಾದ್ ಕರ್ನಾಟಕದಲ್ಲಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರೇ ಆಸಕ್ತಿ ತೋರಿದ್ದರು. ಆದರೆ, ಕುಮಾರಸ್ವಾಮಿ ನಾಲ್ಕು ಕ್ಷೇತ್ರಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpbjp-jds seat sharingLok Sabha Election
3 FacebookTwitterPinterestEmail
admin

previous post
ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ
next post
ರಾಜ್ಯಾದ್ಯಂತ ಏಕರೂಪ ತೆರಿಗೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ