Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗ

14,497 ಉದ್ಯೋಗ ಸೃಷ್ಟಿ

by admin January 12, 2024
written by admin January 12, 2024 0 comments 1 minutes read
4FacebookTwitterPinterestEmail
414
₹3,935 ಕೋಟಿ ಹೂಡಿಕೆಯ 73 ಕೈಗಾರಿಕಾ ಯೋಜನೆಗಳಿಗೆ ಅಸ್ತು

ಬೆಂಗಳೂರು: ರಾಜ್ಯದಲ್ಲಿ 3,935 ಕೋಟಿ ರೂ.ಗೂ ಹೆಚ್ಚಿನ ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ‘ಅನುಮೋದನೆ ನೀಡಿರುವ ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ.

ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ’ ಎಂದರು.

ಈ ಕಂಪನಿಗಳು ದೇವನಹಳ್ಳಿ, ಸಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ಹೂಡಿಕೆ ಮಾಡಲಿದ್ದು, ಒಟ್ಟು 9,200 ಉದ್ಯೋಗಗಳನ್ನು ಸೃಷ್ಟಿಸಲಿವೆ.

ಮೇಲ್ಕಂಡ ಉದ್ದಿಮೆಗಳು ಕನಿಷ್ಠ 96 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 490.50 ಕೋಟಿ ರೂ.ವರೆಗೂ ಬಂಡವಾಳ ತೊಡಗಿಸಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಕನಿಷ್ಠ 15 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ.

ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ, ಹೆಚ್ಚುವರಿ ಬಂಡವಾಳ ಹೂಡಿಕೆಯ 5 ಯೋಜನೆಗಳಿಗೂ ಅನುಮೋದನೆ ಕೊಟ್ಟಿದ್ದು, ಇದರಿಂದ 87.67 ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಉದ್ಯಮಸ್ನೇಹಿಯಾಗಿದ್ದು, ಹೂಡಿಕೆದಾರರಿಗೆ ಸುಗಮ ಒಪ್ಪಿಗೆ ಸಿಗುವಂತೆ ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದಿದೆ.

ಹೂಡಿಕೆದಾರರನ್ನು ಉತ್ತೇಜಿಸವಂತಹ ಹಲವು ಅಂಶಗಳನ್ನು 2020-25ರ ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದ್ದು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ಕೊಡಲಾಗಿದೆ. ಇದರಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೂ ಗಮನ ಹರಿಸಲಾಗಿದ್ದು, ರಾಜ್ಯದ ಎಲ್ಲ ಭಾಗಗಳಲ್ಲೂ ಹೂಡಿಕೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಪಾಟೀಲ ವಿವರಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
000 jobs900 croreapproves 73 proposalsMinister-led clearance committeeOnus equitable development stateprojects to create 15worth over ₹3
4 FacebookTwitterPinterestEmail
admin

previous post
ಸಿಂಹಕ್ಕೆ ಆನೆ ಬಲ
next post
ವಚನ ಭ್ರಷ್ಟರಲ್ಲ; ನುಡಿದಂತೆ ನಡೆದಿದ್ದೇವೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

August 11, 2026

ವಾಹನಗಳಿಗೆ ರಾಜ್ಯ ಸರ್ಕಾರಿ ಸಂಸ್ಥೆ ವಿಮೆ ಕಡ್ಡಾಯ

August 7, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ