Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಆಸ್ತಿ ತೆರಿಗೆ ಕಡಿತಕ್ಕೆ ಚಿಂತನೆ

by admin January 16, 2024
written by admin January 16, 2024 1 comment 2 minutes read
5FacebookTwitterPinterestEmail
224

ಮನೆ ಬಾಗಿಲಿಗೇ ಸ್ವತ್ತಿನ ದಾಖಲೆ ಉಚಿತ ರವಾನೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ಬರುತ್ತಿದ್ದು, 30 x 40 ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

“ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಬಡವರಿಗೆ ಒಂದು ಲಕ್ಷ ಮನೆ ಕಟ್ಟಿಕೊಡುವುದಾಗಿ ಹೇಳಿದ್ದು, ಯಾರಿಗೂ ಮನೆ ಸಿಕ್ಕಿಲ್ಲ. ಈ ಬಗ್ಗೆ ಅನೇಕರು ಮನವಿ ಸಲ್ಲಿಸಿದ್ದು, ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ವಸತಿ ಹಂಚಿಕೆ ಮಾಡಲಾಗುವುದು, ಕೆಲವರು ಹಣ ಕಟ್ಟಿದ್ದು, ಮತ್ತೆ ಕೆಲವರು ಹಣ ಕಟ್ಟದೆ ವಿನಾಯಿತಿ ಕೇಳುತ್ತಿದ್ದಾರೆ ತಿಳಿಸಿದ್ದಾರೆ.

ದಂಡ ಎಷ್ಟು ಸಾಧ್ಯವೋ ಅಷ್ಟು ಕಡಿಮೆ

ಆಸ್ತಿ ತೆರಿಗೆ ವಿಚಾರದಲ್ಲಿ ಸಮಸ್ಯೆ ಆಗಿದೆ ಎಂಬ ಅನೇಕ ದೂರುಗಳು ಬಂದಿವೆ. ಕಾಲಮಿತಿಯೊಳಗೆ ತೆರಿಗೆ ಪಾವತಿಸಿ ಎಂದು ನೋಟೀಸ್ ಬಂದಿರುವುದರ ಬಗ್ಗೆ ಗಾಬರಿಯಾಗಬೇಡಿ. ದಂಡವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ. ಈ ಕಾರ್ಯಕ್ರಮ ನಡೆದ ಎಲ್ಲಾ ಕ್ಷೇತ್ರಗಳಲ್ಲೂ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

2020ರಲ್ಲಿ ಜಾರಿಗೆ ಬಂದ ಆಸ್ತಿ ತೆರಿಗೆ ಕಾಯ್ದೆಯಿಂದಾಗಿ ಜನರಿಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಅದಕ್ಕೆ ತಿದ್ದುಪಡಿ ತರಬೇಕಿದೆ, ಕೆಲವೇ ದಿನಗಳಲ್ಲಿ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗುವುದು. ಸರ್ಕಾರವೇ ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೇ ನಿಮ್ಮ ಸ್ವತ್ತಿನ ದಾಖಲೆಗಳನ್ನು ಉಚಿತವಾಗಿ ತಂದು ಕೊಡಲಾಗುವುದು.

ಆಸ್ತಿ ತೆರಿಗೆ ಪಾವತಿ ಬಗ್ಗೆ ಜನರ ಮೇಲೆ ಒತ್ತಡ ಹೇರಬೇಡಿ ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಯಾರು ಎಷ್ಟು ತೆರಿಗೆ ಕಟ್ಟುತ್ತಿರುವರೋ, ಅವರಿಂದ ಅಷ್ಟನ್ನೇ ಕಟ್ಟಿಸಿಕೊಳ್ಳಿ. ಯಾರಾದರೂ ಹೆಚ್ಚುವರಿ ತೆರಿಗೆ ಪಾವತಿ ಮಾಡಿದ್ದರೆ ಮುಂದಿನ ವರ್ಷ ಅದನ್ನು ಸರಿದೂಗಿಸಲು ಸೂಚಿಸಬೇಕಾಗಿದೆ.

ಜನರಿಗೂ ಅನುಕೂಲ, ಪಾಲಿಕೆಗೂ ಆದಾಯ

ಎಲ್ಲರೂ ಆಸ್ತಿ ತೆರಿಗೆ ವ್ಯಾಪ್ತಿಗೆ ಬರಬೇಕು, ಜನರಿಗೂ ಅನುಕೂಲ ಆಗಬೇಕು, ಪಾಲಿಕೆಗೂ ಆದಾಯ ಬರಬೇಕು, ತೆರಿಗೆ ಹಣವಿಲ್ಲದೆ ಬೆಂಗಳೂರು ಅಭಿವೃದ್ಧಿ ಅಸಾಧ್ಯ, ಇಷ್ಟು ದಿನ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿ ಅಳವಡಿಸಿಕೊಂಡು ಬಂದಿದ್ದೇವೆ.

ಈ ವ್ಯವಸ್ಥೆಯಲ್ಲಿ ಆಸ್ತಿಗೆ ತಕ್ಕಂತೆ ಜನ ತೆರಿಗೆ ಪಾವತಿ ಮಾಡುತ್ತಿಲ್ಲ, ಮೂರು ಅಂತಸ್ತಿನ ಮನೆ ಇದ್ದರೆ ಒಂದು ಅಂತಸ್ತು ಎಂದು ತೋರಿಸಿ ಕಡಿಮೆ ತೆರಿಗೆ ಕಟ್ಟುತ್ತಿದ್ದಾರೆ, ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಪತ್ರ ಬರೆದಿದ್ದಾರೆ.

ಅಧಿಕಾರಿಗಳು ತೆರಿಗೆದಾರರಿಗೆ ಸಹಕಾರ ನೀಡದ ಕಾರಣ ನಮ್ಮ ಬಳಿ ಬರುತ್ತೀರಿ, ನಿಮ್ಮ ವೈಯಕ್ತಿಕ ಸಮಸ್ಯೆ, ಪ್ರದೇಶದ ಸಮಸ್ಯೆ ಹೊತ್ತು ತಂದಿದ್ದೀರಿ. ಎಲ್ಲರ ಸಮಸ್ಯೆ ಆಲಿಸುತ್ತೇವೆ. ನಿಮ್ಮ ಅಹವಾಲುಗಳನ್ನು ನೋಂದಣಿ ಮಾಡಿಕೊಳ್ಳಿ. ನಿಮ್ಮ ಹೆಸರು, ಸಮಸ್ಯೆ ಹಾಗೂ ದೂರವಾಣಿ ಸಂಖ್ಯೆ ನಮೂದಿಸಿ.

ಅಹವಾಲು ಬಗೆಹರಿಸಲು ಪ್ರತ್ಯೇಕ ತಂಡ ರಚಿಸುತ್ತೇವೆ. ನಿಮ್ಮ ಅರ್ಜಿಗಳನ್ನು ವಿಂಗಡಿಸಿ, ಕಾನೂನು ವ್ಯಾಪ್ತಿಯಲ್ಲಿ ಬಗೆಹರಿಸುತ್ತೇವೆ, ನಿಮ್ಮ ದೂರವಾಣಿ ಸಂಖ್ಯೆಗೆ ಪಾಲಿಕೆ ಅಧಿಕಾರಿಗಳು ಸಂಪರ್ಕಿಸುತ್ತಾರೆ.

ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು, ರಸ್ತೆಗಳಿಗೆ ೨ ಸಾವಿರ ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಬೆಂಗಳೂರಿನಲ್ಲಿ ನಿತ್ಯ 55 ಲಕ್ಷ ವಾಹನ ಸಂಚಾರ ಮಾಡುತ್ತಿವೆ.

ಆಸ್ತಿ ತೆರಿಗೆ ಮತ್ತು ಪಾದಚಾರಿ ಮಾರ್ಗ ವಿಚಾರವಾಗಿ ಹೈಕೋರ್ಟ್ ಆದೇಶ ಇದೆ, ಆದೇಶ ಪಾಲನೆ ಆಗದಿದ್ದರೆ ಪಾಲಿಕೆ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ.

ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಸಿಕೊಂಡು, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಬೇಕು. ಪಾದಚಾರಿ ಮಾರ್ಗದಲ್ಲಿ ಅಂಗಡಿ ಹಾಕಿಕೊಂಡರೆ ಜನ ಸಾಮಾನ್ಯರು ಎಲ್ಲಿ ಓಡಾಡಬೇಕು ಎಂದು ಪ್ರಶ್ನಿಸಿದರು.

ಹೊಸ ಜಾಹೀರಾತು ನೀತಿ

ಅನಧಿಕೃತ ಜಾಹೀರಾತು ಫ್ಲೆಕ್ಸ್ ವಿರುದ್ಧ ಪ್ರಕರಣ ದಾಖಲಿಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಯಾವುದೇ ಪಕ್ಷದವರಾಗಿರಲಿ, ಎಲ್ಲ ಅನಧಿಕೃತ ಫ್ಲೆಕ್ಸ್ ತೆರವು ಮಾಡಬೇಕು, ಮುಂದೆ ದಿನಗಳಲ್ಲಿ ಇದರ ನಿಯಂತ್ರಣಕ್ಕೆ ಹೊಸ ಜಾಹೀರಾತು ನೀತಿ ತರಲಾಗುವುದು.

ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಬದ್ಧರಾಗಿದ್ದೇವೆ, ಇದರ ಹಿಂದಿರುವ ಮಾಫಿಯಾವನ್ನು ಹತೋಟಿಗೆ ತರಬೇಕಿದೆ. ಕಸ ವಿಲೇವಾರಿ ಹಾಗೂ ಸಂಚಾರ ದಟ್ಟಣೆ ನಿಯಂತ್ರಣ ಮಾಡಿದರೆ ಎಲ್ಲವೂ ಹತೋಟಿಗೆ ಬರುತ್ತದೆ ಎಂದರು.

ಬಡವರಿಗೆ ವಸತಿ ನೀಡಲು ಸರ್ಕಾರ ಬದ್ಧವಾಗಿದೆ, ವಸತಿ ಕೋರಿ ಬಂದಿರುವ ಅರ್ಜಿಗಳನ್ನು ಲೆಕ್ಕ ಹಾಕಿ ಅರ್ಹರ ಬಗ್ಗೆ ಪರಿಶೀಲನೆ ಮಾಡಲಾಗುವುದು.

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದವರು, ಈಗ ಅವರೇ ಗ್ಯಾರಂಟಿ ಪ್ರಚಾರ ಪಡೆಯುತ್ತಿದ್ದಾರೆ ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DCM DK Shivakumarguarentee scheemtax reduction
5 FacebookTwitterPinterestEmail
admin

previous post
ವರ್ಗಾವಣೆಗೆ ಜಾತಿ ಬಳಕೆ ಅತ್ಯಂತ ಕೆಟ್ಟದ್ದು
next post
ಫೆಬ್ರವರಿ 16ರಂದು ಮತದಾನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ