Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಒಕ್ಕಲಿಗರು ಉದ್ಯಮದಲ್ಲಿಯೂ ಸಾಧಿಸಬೇಕು 

by admin January 21, 2024
written by admin January 21, 2024 0 comments 2 minutes read
1FacebookTwitterPinterestEmail
188

ಜ್ಞಾನ ಇರುವವರು ಜಗತ್ತನ್ನು ಆಳುತ್ತಾರೆ 

ಬೆಂಗಳೂರು: ಒಕ್ಕಲಿಗ ಸಮುದಾಯ ಕೃಷಿಯಲ್ಲಿ ಬೆವರು ಸುರಿಸಿ ಸಾಧನೆ ಮಾಡುತ್ತಿದ್ದು, ಉದ್ಯಮದಲ್ಲಿಯೂ ಸಾಧನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಅರಮನೆ ಮೈದಾನದಲ್ಲಿ ನಡೆದ ಉದ್ಯಮಿ ಒಕ್ಕಲಿಗ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು  ಮಾತನಾಡಿದ ಅವರು, ಒಂದು ಕಾಲ ಇತ್ತು ಯಾರ ಬಳಿ ಭೂಮಿ ಇತ್ತೊ ಅವರು ಜಗತ್ತನ್ನು ಆಳುತ್ತಿದ್ದರು. ಅದಕ್ಕಾಗಿ ರಾಜ ಮಹಾರಾಜರು ಭೂಮಿ ಪಡೆಯಲು ಯುದ್ದಗಳನ್ನು ಮಾಡುತ್ತಿದ್ದರು ಎಂದರು. 

ಅಲೆಕ್ಸಾಂಡರ್ ಜಗತ್ತನ್ನು ಗೆಲ್ಲಲು ಹೋರಾಟ ಮಾಡಿದ. ಅವರ ಗುರು ಅರಿಸ್ಟಾಟಲ್ ಭಾರತವನ್ನು ಗೆದ್ದರೆ ವಿಶ್ವ ಗೆದ್ದಂತೆ ಅಂತ ಹೇಳಿದರು. ನಂತರ ವ್ಯಾಪಾರ ಮಾಡುವವರು ಜಗತ್ತನ್ನು ಆಳುತ್ತಿದ್ದರು. ಈಗ ಜ್ಞಾನ ಇರುವವರು ಜಗತ್ತನ್ನು ಆಳುತ್ತಾರೆ. ಬಿಲ್ ಕ್ಲಿಂಟನ್ ಮತ್ತು ಬಿಲ್ ಗೇಟ್ ನಡುವೆ ಪೈಪೋಟಿ ನಡೆದಾಗ ಬಿಲ್ ಗೇಟ್ ಹೆಚ್ಚು ಜನಪ್ರೀಯ ಅಂತ ಸರ್ವೆ ಆಯಿತು ಎಂದು ಹೇಳಿದರು. 

ಕಾಡಿನಿಂದ ಐಸ್ ಕ್ರೀಮ್ ವರೆಗೆ ಸೀತಾಫಲದ ಮಹಿಮೆ…!

ಕೃಷಿಯು ಕೂಡ ಒಂದು ಉದ್ಯಮ. ಕೃಷಿ ಇಲ್ಲದಿದ್ದರೆ ನಾವು ಬದುಕಲು ಆಗುವುದಿಲ್ಲ. ಕೃಷಿಯಲ್ಲಿ ಶೇ 1 ರಷ್ಟು ಬೆಳವಣಿಗೆ ಆದರೆ, ಉದ್ಯಮ ವಲಯ ಶೇ 4 ರಷ್ಟು ಬೆಳೆಯುತ್ತದೆ. ಸೇವಾ ವಲಯ ಶೇ 10 ರಷ್ಟು ಬೆಳೆಯುತ್ತದೆ. ಎಲ್ಲ ಬೆಳವಣಿಗೆಗೂ ಮೂಲ ಕೃಷಿ ಎಂದರು. ಕೃಷಿ ಉದ್ಯಮವಾಗಿ ಬೆಳವಣಿಗೆಯಾಗಿಲ್ಲ.

ಭೂಮಿ ಇದ್ದಷ್ಟೇ ಇದೆ. ಉತ್ಪಾದನೆ ಹೆಚ್ಚಾಗಿದೆ. ಆದರೆ, ರೈತನ ಆದಾಯ ಹೆಚ್ಚಾಗಿಲ್ಲ. ಒಕ್ಕಲಿಗರು ಕೇವಲ ಕೃಷಿ ಮಾಡಿದರೆ ಅಭಿವೃದ್ಧಿ ಆಗಲು ಸಾಧ್ಯವಿಲ್ಲ. ಕೃಷಿ ಜೊತೆಗೆ ವ್ಯಾಪಾರ, ಉದ್ಯೋಗ ಮಾಡುವ ಮೂಲಕ ಹೊರ ಜಗತ್ತಿಗೆ ತೆರೆದುಕೊಳ್ಳುವ ಕೆಲಸ ಮಾಡಬೇಕು. ಒಕ್ಕಲಿಗರು ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಯೋಜನಾ ಬದ್ದವಾಗಿ ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.

ಜ್ಞಾನ ಇದ್ದರೆ ಬಂಡವಾಳ ನಿಮ್ಮ ಹಿಂದೆ ಬರುತ್ತದೆ 

ಒಕ್ಕಲಿಗರು ಜಮೀನು ಮಾರಿ ಎಲೆಕ್ಷನ್ ನಿಲ್ಲುವವರು ಹೆಚ್ಚಾಗಿದ್ದಾರೆ. ನಿಮಗೆ ಉದ್ಯಮದ ಕೌಶ್ಯಲದ ಅಗತ್ಯ ಇದೆ. ಅಗಕ್ಕೆ ಆತ್ಮಸ್ತೈರ್ಯ ಮುಖ್ಯ. ಕೆಲವು ಸಮುದಾಯಗಳು ದುಡ್ಡನ್ನೇ ನಂಬಿವೆ. ನಾವು ದುಡಿಮೆಯನ್ನು ನಂಬಿದವರು. ನಿಮ್ಮ ಬಳಿ ಜ್ಞಾನ ಇದ್ದರೆ ಬಂಡವಾಳ ನಿಮ್ಮ ಹಿಂದೆ ಬರುತ್ತದೆ. ನಾನು ಮಾಡೇ ತೀರುತ್ತೇನೆ ಎನ್ನುವ ಛಲ ಇದ್ದರೆ ಬಂಡವಾಳ ಬರುತ್ತದೆ. ಹೊಟ್ಟೆ ತುಂಬಿದರಿಂದ ಏನೂ ಸಾಧನೆ ಮಾಡಲು ಆಗುವುದಿಲ್ಲ.

ಬಿಜೆಪಿ –ಜೆಡಿಎಸ್ ನಾಯಕರ ಚುನಾವಣೆ ಸಮಾಲೋಚನೆ

ಹಸಿದವರಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಊಟದ ಹಸಿವಲ್ಲ, ಸಾಧನೆಯ ಹಸಿವು ಇದ್ದಾಗ ಸಾಧನೆ ಮಾಡಲು ಸಾಧ್ಯ. ಒಕ್ಕಲಿಗರು ಉದ್ಯಮದಲ್ಲಿಯೂ ಸಾಧನೆ ಮಾಡಬೇಕು. ಉದ್ಯಮದಲ್ಲಿಯೂ ನಮ್ಮ ಸಂಸ್ಕೃತಿ ಪ್ರಮುಖ ಪಾತ್ರ ವಹಿಸುತ್ತದೆ. ನಾವು ಸರಿ ದಾರಿಯಲ್ಲಿ ನಡೆದರೆ ಸಮಾಜ ನಮ್ಮನ್ನು ಗೌರವಿಸುತ್ತದೆ ಎಂದು  ಅವರು ಹೇಳಿದರು. 

ಮನಸು ಮಾಡಿದರೆ ಜಗತ್ತು ಒಕ್ಕಲಿಗರ ಕಡೆಗೆ ಬರುತ್ತದೆ.

 ಕೃಷಿಯಲ್ಲಿ ಬೆವರು ಹಾಕಿ ಉತ್ಪಾದನೆ ಮಾಡಲು ಒಕ್ಕಲಿಗರನ್ನು ಮೀರಲು ಯಾರಿಗೂ ಸಾಧ್ಯವಿಲ್ಲ. ಒಕ್ಕಲಿಗ ಸಮುದಾಯದ ಬಗ್ಗೆ ಅಪಾರ ಗೌರವ ಹಾಗೂ ಪ್ರೀತಿ ಇದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಮಾಜಿ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಪ್ರಮುಖ ಪಾತ್ರ ವಹಿಸಿದ್ದರು ಎಂದರು.  

ಒಕ್ಕಲಿಗರು ಕಾಲಭೈರವನ ಆಶೀರ್ವಾದ ಪಡೆದವರು. ನೀವು ಮನಸು ಮಾಡಿದರೆ, ಜಗತ್ತು ನಿಮ್ಮ ಕಡೆಗೆ ಬರುತ್ತದೆ. ನನಗೆ ಯುವಕರ ಮೇಲೆ ವಿಶ್ವಾಸ ಇದೆ. ಅವರು ಜಗತ್ತು ನೋಡಿದ್ದಾರೆ. ಬೆಂಗಳೂರನ್ನು ಕೆಂಪೇಗೌಡರು ಕಟ್ಟಿದ್ದಾರೆ. ನವ ಭವಿಷ್ಯದ ಬೆಂಗಳೂರನ್ನು ಕೆಂಪೇಗೌಡರ ಮಕ್ಕಳೇ ಕಟ್ಟಬೇಕು ಎಂದು ಆಶಯ ವ್ಯಕ್ತಪಡಿಸಿದರು. 

ರಾಮಪ್ರಾಣ ಪ್ರತಿಷ್ಠಾಪನೆಗೆ ಕರ್ನಾಟಕದಲ್ಲಿಲ್ಲ ರಜೆ

ಕಾರ್ಯಕ್ರಮದಲ್ಲಿ  ಸ್ಪಟಿಕಪುರಿ ಸಂಸ್ಥಾನ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಡಿಸಿಎಂ ಡಾ. ಅಶ್ಬತ್ಥ್ ನಾರಾಯಣ, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಮಾಜಿ ಸಭಾಪತಿ ಬಿ.ಎಲ್. ಶಂಕರ್ ಹಾಗೂ ಇತರ ಗಣ್ಯರು ಪಾಲ್ಗೊಂಡಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
achieve businessbasavaraja bommaiFormer Chief Ministerknowledge rule the worldOkkaligasthe world will come to Okkaligas
1 FacebookTwitterPinterestEmail
admin

previous post
ಬಿಜೆಪಿ –ಜೆಡಿಎಸ್ ನಾಯಕರ ಚುನಾವಣೆ ಸಮಾಲೋಚನೆ
next post
ಅಯೋಧ್ಯೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ