Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಸರ್ವಾಂಗೀಣ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ

by admin January 26, 2024
written by admin January 26, 2024 2 comments 2 minutes read
1FacebookTwitterPinterestEmail
256

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

ಬೆಂಗಳೂರು: ಕರ್ನಾಟಕದ ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ನಗರದ ಮಾಣಿಕ್ ಷಾ ಮೈದಾನದಲ್ಲಿ ನಡೆದ ರಾಜ್ಯಮಟ್ಟದ 75ನೇ ಗಣರಾಜ್ಯೋತ್ಸವದಲ್ಲಿ ಭಾಷಣ ಮಾಡಿದ ಅವರು, ಯುಗಯುಗಾಂತರಗಳಿಂದ ಮಾನವೀಯತೆ ನೆಲೆಸಿರುವ ರಾಷ್ಟ್ರ ನಮ್ಮ ಭಾರತ. ಇದು ವಿಭಿನ್ನ ಧರ್ಮ, ಸಮಾಜ, ಸಂಸ್ಕೃತಿ ಮತ್ತು ಭಾಷೆಗಳಿಂದ ಆಶೀರ್ವದಿಸಲ್ಪಟ್ಟಿರುವ ದೇಶವಾಗಿದೆ ಎಂದರು.

ಎಲ್ಲವೂ ಪರಸ್ಪರ ಸೌಹಾರ್ದತೆಯಿಂದ ಪರಸ್ಪರ ಸಂಬಂಧ ಹೊಂದಿದೆ. ಇಡೀ ಜಗತ್ತಿಗೆ “ವಿವಿಧತೆಯಲ್ಲಿ ಏಕತೆ” ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ನಾವು ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬೇಕು ಮತ್ತು ನಮ್ಮ ರಾಷ್ಟ್ರೀಯ ಏಕತೆಯ ಬಲವರ್ಧನೆ ಮತ್ತು ಐಕ್ಯಮತ್ಯಕ್ಕಾಗಿ ನಾವು ಶ್ರಮಿಸಬೇಕು ಎಂದು ಕರೆ ನೀಡಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು

ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಯ ಅವಕಾಶವನ್ನು ಒದಗಿಸುವುದರೊಂದಿಗೆ, ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧೈಯವನ್ನು ಹೊಂದಿದೆ.

 ಆ ಮೂಲಕ ನಾಗರೀಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ  ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಈ ಆಶಯಗಳನ್ನು ಸಾಕಾರಗೊಳಿಸಲು ನನ್ನ ಸರ್ಕಾರ ಶ್ರಮಿಸುತ್ತಿದೆ ಎಂದರು.

ಐದು ಗ್ಯಾರಂಟಿ ಅನುಷ್ಠಾನದ ಬದ್ಧತೆಯನ್ನು ಮೆರೆದಿದೆ

ಕರ್ನಾಟಕ ಸರ್ಕಾರವು ಐದು ಗ್ಯಾರಂಟಿಗಳಾದ ಶಕ್ತಿಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ನಾವು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಬದ್ಧತೆಯನ್ನು ಮೆರೆದಿದೆ ಎಂದು ತಿಳಿಸಿದರು.

ಬರಗಾಲ ಘೋಷಿತ ತಾಲ್ಲೂಕುಗಳಲ್ಲಿ ಪ್ರತಿ ರೈತನಿಗೆ 2000 ರೂ. ವರೆಗಿನ ಇನ್‌ಪುಟ್ ಸಬ್ಸಿಡಿಯನ್ನು ಮಧ್ಯಂತರ ಪರಿಹಾರವಾಗಿ ಆಧಾರ್ ಲಿಂಕ್ ಮಾಡಲಾದ ರೈತರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರದಿಂದ ನೇರವಾಗಿ ಬಿಡುಗಡೆ ಮಾಡಲಾಗುತ್ತಿದೆ. ಸುಮಾರು 30 ಲಕ್ಷ ರೈತರಿಗೆ ರೂ.580 ಕೋಟಿ ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಕುಮಾರಸ್ವಾಮಿ-ಜಾರಕಿಹೊಳಿ ಆಪರೇಷನ್ ಯಶಸ್ವಿ

ತಾಲ್ಲೂಕು ಮಟ್ಟದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ನಿರ್ವಹಣೆಗೆ ಹಾಗೂ ಬರ ಪರಿಹಾರ ಕ್ರಮಗಳ ಮೇಲ್ವಿಚಾರಣೆಗಾಗಿ ಮಾನ್ಯ ಶಾಸಕರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಕಾರ್ಯಪಡೆಗಳನ್ನು ರಚಿಸಲಾಗಿದೆ.  

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜನವರಿ 2023 ರಿಂದ ಡಿಸೆಂಬರ್ 2023ರ ಅಂತ್ಯದವರೆಗೆ 37.03 ಲಕ್ಷ ಕುಟುಂಬಗಳ 63.13 ಲಕ್ಷ ಜನರಿಗೆ ಕೆಲಸ ಒದಗಿಸಲಾಗಿದೆ.

 ಡಾ|| ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಸಾರ್ವಜನಿಕ ಸ್ಥಳಗಳಲ್ಲಿ ಹಠಾತ್ ಹೃದಯಾಘಾತದಿಂದ ಸಂಭವಿಸುವ ಮರಣಗಳನ್ನು ತಡೆಗಟ್ಟಲು ಸಾರ್ವಜನಿಕ ದಟ್ಟಣೆಯ ಸ್ಥಳ, ಬಸ್ಸು ನಿಲ್ದಾಣ, ರೈಲು ನಿಲ್ದಾಣ ಮತ್ತು ಸರ್ಕಾರಿ ಕಛೇರಿಗಳಲ್ಲಿ AED (Automated ಸಾಧನಗಳನ್ನು ರೂಪಿಸಲಾಗುತ್ತಿದೆ.

ಲೋಕಾ ಚುನಾವಣೆಗೂ ಮುನ್ನ ದೊಡ್ಡ ರಾಜಕೀಯ ಬೆಳವಣಿಗೆ

ರಾಜ್ಯಾದ್ಯಂತ 168 ಡಯಾಲಿಸಿಸ್‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 3,685 ರೋಗಿಗಳಿಗೆ 2,82,439 ಸೈಕಲ್‌ಗಳ ಡಯಾಲಿಸಿಸ್ ಸೇವೆಯನ್ನು ಉಚಿತವಾಗಿ ನೀಡಲಾಗಿದ್ದು, ಪ್ರಸ್ತುತವಿರುವ ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುತ್ತಿದೆ. 108 ಆರೋಗ್ಯ ಕವಚ ಯೋಜನೆಯಡಿ ತುರ್ತು ಆಂಬುಲೆನ್ಸ್ ಸೇವೆಗಳಿಗೆ ಹೊಸದಾಗಿ 262 ಹೊಸ ಆಂಬುಲೆನ್ಸ್ ಗಳನ್ನು  ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ಮುಖ್ಯ ರಸ್ತೆಗಳ ಸುಸ್ಥಿರ ಅಭಿವೃದ್ಧಿಗಾಗಿ ಸುಮಾರು 2000 ರೂಪಾಯಿಗಳ ಯೋಜನೆಯನ್ನು ರೂಪಿಸಿ ಪ್ರಮುಖ ರಸ್ತೆಗಳ ವೈಟ್ ಟಾಪಿಂಗ್‌ಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆಗೆ ಚಾಲನ ನೀಡಲಾಗಿರುತ್ತದೆ.

ಸುರಂಗ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ

ಬೆಂಗಳೂರು ನಗರದ ದಟ್ಟಣೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ಹಿತದೃಷ್ಟಿಯಿಂದ ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ.  ಪ್ರಾಯೋಗಿಕವಾಗಿ 2 ಕಿ.ಮೀ ವಿಸ್ತೀರ್ಣದ ಸುರಂಗ ರಸ್ತೆಯ ನಿರ್ಮಾಣಕ್ಕಾಗಿ ಅಂತರಾಷ್ಟ್ರೀಯ ಏಜೆನ್ಸಿಯ ನೆರವಿನಿಂದ ಡಿ.ಪಿ.ಆರ್ ತಯಾರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿರುತ್ತದೆ ಎಂದು ರಾಜ್ಯಪಾಲರು ತಿಳಿಸಿದರು.

ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳು ಪಡೆಯುವ ಸಾಲಕ್ಕೆ ಶೇಕಡ 6ರ ಬಡ್ಡಿದರದಲ್ಲಿ ರೂ.10.00 ಕೋಟಿಗಳವರೆಗೆ ಸಹಾಯಧನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಗಾಗಿ ಕಾವೇರಿ 2.0 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು ಇದು ರೂ.10483. ಕೋಟಿಗಳ ಹೆಚ್ಚುವರಿ ಆದಾಯಕ್ಕೆ ಗಮನಾರ್ಹ ಕೊಡುಗೆ ನೀಡಿದೆ.

ಪ್ರೀತಿಯ ಹೂಮಳೆಯಲ್ಲಿ ಮುಳುಗಿಸಿದರು

ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ಕಾಮಗಾರಿಗಳು ಮತ್ತು ವಿದ್ಯುತ್ ಪೂರೈಕೆ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಗುರುತ್ವ ಕಾಲುವೆಯ 42.00 ಕಿ.ಮೀ.ವರೆಗೆ ಯೋಜಿಸಲಾಗಿದೆ. ಹರಿಸಿ ಚಾಲನೆಗೊಳಿಸಲು ಯೋಜಿಸಲಾಗಿದೆ.

ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಪರಿಹಾರಕ ಅರಣ್ಯವೃದ್ಧಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಹಾಗೂ ಯೋಜನಾ ಕಾಮಗಾರಿಗಳನ್ನು ಮತ್ತು ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bangalorecommitmentexceededFive Guaranteesgovernorimplementationoverall developmentThawarchand GehlotTunnel Roadswork together
1 FacebookTwitterPinterestEmail
admin

previous post
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು
next post
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ