Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯಸಭಾ ಚುನಾವಣೆ: ವಲಸಿಗರಿಗೆ ಕಾಂಗ್ರೆಸ್ ಟಿಕೆಟ್

by KM Shivaraju February 13, 2024
written by KM Shivaraju February 13, 2024 1 comment 1 minutes read
2FacebookTwitterPinterestEmail
152

ಬೆಂಗಳೂರು:ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾವಾದಿ ಅಭಿಷೇಕ್ ಸಿಂಘ್ವಿ, ಎಐಸಿಸಿ ವಕ್ತಾರ ಅಜಯ್ ಮಾಕೆನ್, ಇವರಿಬ್ಬರಲ್ಲಿ ಒಬ್ಬರು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ.

ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ ೨೭ ರಂದು ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಸಂಖ್ಯಾಬಲದ ಮೇಲೆ ಮೂರು ಸ್ಥಾನಗಳು ಲಭ್ಯವಾಗಲಿವೆ.

ಹೊಸಮುಖಗಳಿಗೆ ಅವಕಾಶ

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿರುವ ಎಐಸಿಸಿ, ಹೊಸಮುಖಗಳಿಗೆ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗಿದೆ.

ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಬೆಳಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದ್ದು ಒಂದು ಸ್ಥಾನವನ್ನು ಎಐಸಿಸಿ ದೆಹಲಿ ನಾಯಕರಿಗೆ ಮೀಸಲಿಟ್ಟಿದ್ದು ಉಳಿದ ಎರಡನ್ನು ರಾಜ್ಯದವರಿಗೆ ಬಿಟ್ಟುಕೊಟ್ಟಿದೆ.

ರಾಷ್ಟ್ರದ ವಿವಿಧ ರಾಜ್ಯಗಳಿಂದ ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳು ಲಭ್ಯವಾಗುತ್ತಿಲ್ಲ.

ಒಂದು ಸ್ಥಾನ ಎಐಸಿಸಿ ಪ್ರಮುಖರಿಗೆ

ಹೀಗಾಗಿ ಕರ್ನಾಟಕದಿಂದ ಒಂದು ಸ್ಥಾನಕ್ಕೆ ಎಐಸಿಸಿಯ ಪ್ರಮುಖರಿಗೆ ಅವಕಾಶ ಮಾಡಿಕೊಡುತ್ತಿದೆ. ಈ ಎರಡು ಸ್ಥಾನಗಳಿಗೆ ಹಲವರ ಹೆಸರುಗಳು ಕೇಳಿ ಬಂದಿದ್ದು, ಪ್ರಸ್ತುತ ನಿವೃತ್ತಿಯಾಗಲಿರುವ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಮತ್ತು ಎಲ್.ಹನುಮಂತಯ್ಯ ಅವರು ಪುನಃ ಟಿಕೆಟ್‌ಗಾಗಿ ಲಾಬಿ ನಡೆಸಿದ್ದರೂ ಪಕ್ಷದ ವರಿಷ್ಟರು ಅವರಿಗೆ ಮಣೆ ಹಾಕುವ ಸಾಧ್ಯತೆ ಕಡಿಮೆ.

ನಾಸಿರ್ ಹುಸೇನ್ ಅವರು ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದು ಈ ಆಧಾರ ಮೇಲೆ ಮರಳಿ ಟಿಕೆಟ್‌ಗೆ ಲಾಬಿ ಮಾಡುತ್ತಿರುವರಾದರೂ ದೆಹಲಿ ಮೂಲಗಳ ಪ್ರಕಾರ, ಈ ಯತ್ನಕ್ಕೆ ಮನ್ನಣೆ ದೊರೆಯುವ ಸಾಧ್ಯತೆ ಕಡಿಮೆ ಇದೆ.

ಹದಗೆಟ್ಟ ಕಾನೂನು ಸುವ್ಯವಸ್ಥೆ: ವಿಧಾನಸಭೆಯಲ್ಲಿ ಕೋಲಾಹಲ

ಈ ಮಧ್ಯೆ ಹಿರಿಯ ನಾಯಕ, ಮಾಜಿ ಸಚಿವ ಬಿ.ಎಲ್.ಶಂಕರ್ ಅವರಿಗೆ ರಾಜ್ಯಸಭಾ ಟಿಕೆಟ್ ನೀಡುವಂತೆ ಹಲವು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದು, ಈ ವಿಷಯದಲ್ಲಿ ತಮಗೆ ಒಲವು ಇದೆಯಾದರೂ ವರಿಷ್ಠರ ತೀರ್ಮಾನ ಅಂತಿಮ ಎಂದು ಹೇಳಿದ್ದಾರೆ.

ಮೂರು ಸ್ಥಾನಗಳಿಗೆ ಲಾಬಿ

ರಾಜ್ಯಸಭೆಯ ಮೂರು ಸ್ಥಾನಗಳಿಗೆ ಕಾಂಗ್ರೆಸ್‌ನಲ್ಲಿ ಲಾಬಿ ನಡೆಯುತ್ತಿರುವ ಬೆನ್ನಲ್ಲೇ ಇಂದು ನಗರಕ್ಕೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

ರಾಜ್ಯಸಭೆಯ ಮೂರು ಸ್ಥಾನಗಳಿಗೆ ಯಾರು ಅಭ್ಯರ್ಥಿಗಳಾಗಬೇಕು ಎಂಬ ಸಂಬಂಧ ಈ ನಾಯಕರು ನಡೆಸಲಿರುವ ಚರ್ಚೆ ನಂತರ ಪಕ್ಷದ ವರಿಷ್ಠರಿಗೆ ಶಿಫಾರಸು ಪಟ್ಟಿ ರವಾನೆಯಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aiccfight to get ticket among congres leadersmallikarjuna khargeone congres ticket to outsiderrajya sabha election
2 FacebookTwitterPinterestEmail
KM Shivaraju

previous post
ಹದಗೆಟ್ಟ ಕಾನೂನು ಸುವ್ಯವಸ್ಥೆ: ವಿಧಾನಸಭೆಯಲ್ಲಿ ಕೋಲಾಹಲ
next post
ಆಸ್ಟ್ರೇಲಿಯಾ ಟೆನಿಸ್: ಪುರುಷರ ಡಬಲ್ಸ್ ಪ್ರಶಸ್ತಿ ಗೆದ್ದ ರೋಹನ್ ಬೋಪಣ್ಣ ಅವರಿಗೆ ಮುಖ್ಯಮಂತ್ರಿ ಅಭಿನಂದನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ