Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಶಾಸಕರಿಗೆ ಕೊಲೆ ಬೆದರಿಕೆ

by admin February 14, 2024
written by admin February 14, 2024 1 comment 2 minutes read
2FacebookTwitterPinterestEmail
127

ಬೆಂಗಳೂರು:ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಪದ್ಮರಾಜ್ ಅವರನ್ನು ಬಂಧಿಸಲಾಗಿದೆ.

ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ, ತಮಗೆ ಪ್ರಾಣ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು, ಕ್ಷೇತ್ರದ ಕಾಂಗ್ರೆಸ್ ಮುಖಂಡರೊಬ್ಬರು ತಮ್ಮನ್ನು ನಿಂದಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ ಎಂದು ದೂರಿದರು.

ಸದಸ್ಯರ ಪ್ರಸ್ತಾವ ಮತ್ತು ವಿವರಣೆ ಕೇಳುತ್ತಿದ್ದಂತೆ ಸಭಾಧ್ಯಕ್ಷ ಯು.ಟಿ. ಖಾದರ್, ಸದನದ ಸದಸ್ಯರನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದವರನ್ನು ಸಂಜೆ ವೇಳೆಗೆ ಬಂಧಿಸಬೇಕು ಇಲ್ಲದಿದ್ದರೆ, ದೂರು ದಾಖಲು ಮಾಡಿಕೊಂಡಿರುವ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡುವಂತೆ ಕಟು ಆದೇಶ ಮಾಡಿದರು.

ವಿಧಾನಸಭೆಯ ನಡಾವಳಿ ಗೃಹ ಇಲಾಖೆಗೆ ತಲುಪುತ್ತಿದ್ದಂತೆ ಎಚ್ಚತ್ತ ಪೊಲೀಸರು, ಅಡಿವಿಕೊಂಡಿದ್ದ ಆರೋಪಿ ಪದ್ಮರಾಜ್ ಮನೆ ಬಾಗಿಲು ಒಡೆದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸದನದಲ್ಲಿ ಪ್ರಶ್ನೋತ್ತರದ ಬಳಿಕ ಶೂನ್ಯ ವೇಳೆಯಲ್ಲಿ ಗೋಪಾಲಯ್ಯ ಅವರು ವಿಷಯ ಪ್ರಸ್ತಾಪಿಸಿ, ನಿನ್ನೆ ರಾತ್ರಿ 11 ಗಂಟೆ 1 ನಿಮಿಷಕ್ಕೆ ಬಿಬಿಎಂಪಿಯ ಮಾಜಿ ಸದಸ್ಯ ಪದ್ಮರಾಜ್ ತಮಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಆ ಪದಗಳನ್ನು ಇಲ್ಲಿ ಹೇಳಲು ಸಾಧ್ಯವಿಲ್ಲ, ನನಗೆ ಮತ್ತು ನನ್ನ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದರು.

ಪಾನಮತ್ತನಾಗಿ ಬೆದರಿಕೆ ಕರೆ

ಬಸವೇಶ್ವರ ನಗರದಲ್ಲಿ ಕ್ಲಬ್ ನಡೆಸುವ ಈ ವ್ಯಕ್ತಿ ರಾತ್ರಿಯಾಗುತ್ತಿದ್ದಂತೆ ಪಾನಮತ್ತನಾಗಿ ನನ್ನನ್ನೂ ಸೇರಿದಂತೆ ಕುಟುಂಬದ ಅನೇಕರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ.

ಸುರೇಶ್‌ಕುಮಾರ್ ಅವರಂತಹ ಶಾಸಕರು ಶಕ್ತಿಯಿಲ್ಲದೆ ದೂರು ನೀಡಿಲ್ಲ, ಸದರಿ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ರಾತ್ರಿಯಿಡೀ ಏಳೆಂಟು ಗಂಟೆ ಅವರ ಮನೆ ಎದುರು ಕಾವಲು ಕಾದಿದ್ದಾರೆ. ಬಾಗಿಲು ತೆರೆದು ಹೊರಬರದೇ ಒಳಗಿದ್ದ ವ್ಯಕ್ತಿ ಬೆಳಗ್ಗೆ 10 ಗಂಟೆಗೆ ನಿಶೆ ಇಳಿದ ಮೇಲೆ ಹೊರಹೋಗಿದ್ದಾನೆ. ಇಂತಹವರು ಸಮಾಜಕ್ಕೆ ಬೇಕೇ ಎಂದು ಪ್ರಶ್ನಿಸಿದರು.

ಸದರಿ ವ್ಯಕ್ತಿಯನ್ನು ಬಂಧಿಸಿ 6 ತಿಂಗಳ ಕಾಲ ಗಡಿಪಾರು ಮಾಡಬೇಕು, ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು, ಬೆಂಗಳೂರಿನಲ್ಲಿ ಅನೈತಿಕವಾಗಿ ನಡೆಯುತ್ತಿರುವ ಕ್ಲಬ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಶಾಸಕ ಸುರೇಶ್‌ಕುಮಾರ್ ಮಾತನಾಡಿ, ಸದನದಲ್ಲಿ ಶಾಸಕರಿಗೆ ರಕ್ಷಣೆ ಇಲ್ಲ ಎಂದಾದರೆ ಜನರಿಗೆ ತಪ್ಪು ಸಂದೇಶ ಹೋಗುತ್ತದೆ, ರಾತ್ರಿ ದೂರು ಕೊಟ್ಟರೂ ಈವರೆಗೂ ಏಕೆ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಿಂದ ತಾಯಿ-ಮಗ ಪಲಾಯನ

ಸದರಿ ವ್ಯಕ್ತಿಯ ನಡವಳಿಕೆಗೆ ನಾನು ಮತ್ತು ಅಶೋಕ್‌ರವರು ಫಲಾನುಭವಿಗಳಾಗಿದ್ದೇವೆ, ಪೊಲೀಸರು ಆತನ ಮನೆಬಾಗಿಲಿಗೆ ಹೋದಾಗ ಒಳಗಿನಿಂದಲೇ ಆತ ಪ್ರಭಾವಿಗಳಿಗೆ ಕರೆ ಮಾಡಿ ಶಿಫಾರಸ್ಸು ಮಾಡುತ್ತಿದ್ದಾನೆ, ಗೋಪಾಲಯ್ಯ ಅವರಿಗೆ ಬೆದರಿಕೆ ಹಾಕಿದ್ದಾನೆ ಎಂದಾದರೆ ಆತನ ಉದ್ಧಟತನದ ಮಟ್ಟವನ್ನು ಅಂದಾಜಿಸಬಹುದು ಎಂದು ಆರೋಪಿಸಿದರು.

ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಬೆದರಿಕೆ ಹಾಕಿದ ವ್ಯಕ್ತಿ ಕುಡಿದಿದ್ದಾನೆ. ಆತನ ನಿಶೆ ಇಳಿಯಲಿ ಎಂದು ಪೊಲೀಸರು ಕಾದು ಕುಳಿತಿರುವುದು ಹಾಸ್ಯಾಸ್ಪದ, ಈ ರೀತಿ ಕಾನೂನಿನಲ್ಲಿ ವಿನಾಯಿತಿ ನೀಡಲು ಅವಕಾಶವಿದೆಯೇ, ಪೊಲೀಸ್ ಠಾಣೆಯಿಂದ ಸ್ವಲ್ಪವೇ ದೂರದಲ್ಲಿದ್ದರೂ ಏಕೆ ಬಂಧಿಸಿಲ್ಲ, ಆರೋಪಿಗಳಿಗೆ ಪೊಲೀಸರು ರಾಜಾತಿಥ್ಯ ನೀಡುವುದು ಅಗತ್ಯವೇ, ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಶಾಸಕರನ್ನು ಅವಹೇಳನ ಮಾಡಿರುವ ವ್ಯಕ್ತಿ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತಾರತಮ್ಯ ಇಲ್ಲದೆ ಸೂಕ್ತ ಕ್ರಮದ ಭರವಸೆ

ಸರ್ಕಾರದ ಪರವಾಗಿ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ, ಸದಸ್ಯರ ಚರ್ಚೆಗಳನ್ನು ಗೃಹಸಚಿವರ ಗಮನಕ್ಕೆ ತಂದು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು, ಕಾನೂನು ಪಾಲನೆಯ ವಿಷಯದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡುವುದಿಲ್ಲ, ಆ ವ್ಯಕ್ತಿ ಬಿಜೆಪಿಯಲ್ಲಿದ್ದರು, ಕಾಂಗ್ರೆಸ್‌ಗೆ ಬಂದಿದ್ದರು, ಈಗ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ, ರಾಜಕೀಯ ಹೊರತಾಗಿ ಸರ್ಕಾರ ಕ್ರಮ ಜರುಗಿಸಲಿದೆ ಎಂದು ಭರವಸೆ ನೀಡಿದರು.

ಈ ಹಂತದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ನಿನ್ನೆ ರಾತ್ರಿ ಘಟನೆ ನಡೆದರೂ ಇವರನ್ನು ಏಕೆ ಬಂಧಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಆರೋಪಿಯನ್ನು ಇಂದು ಮಧ್ಯಾಹ್ನ ಇಲ್ಲ ಸಂಜೆಯೊಳಗೆ ಬಂಧಿಸಬೇಕು, ಇಲ್ಲವಾದರೆ ಸದರಿ ಠಾಣೆಯ ಇನ್ಸ್‌ಪೆಕ್ಟರ್ ಅನ್ನು ಅಮಾನತು ಮಾಡಿ ಎಂದು ಸೂಚನೆ ನೀಡಿದರು.

ಸಭಾಧ್ಯಕ್ಷರು ಆದೇಶ ನೀಡುತ್ತಿದ್ದಂತೆ ಸದನದೊಳಗೆ ಧಾವಿಸಿದ ಗೃಹ ಸಚಿವ ಪರಮೇಶ್ವರ್, ಗೋಪಾಲಯ್ಯ ಅವರ ದೂರು ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಂಧಿಸಲು ಈಗಲೂ ಅವರ ಮನೆ ಮುಂದೆ ಕಾಯುತ್ತಿದ್ದಾರೆ. ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆಗೆಯುತ್ತಿಲ್ಲ. ಅನಿವಾರ್ಯವಾದರೆ ಬಾಗಿಲು ಒಡೆದು ಒಳಹೋಗಿ ಬಂಧಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಆ ವೇಳೆಗೆ ಅಧಿಕಾರಿಗಳ ಗ್ಯಾಲರಿಯಿಂದ ಬಂದ ಸಂದೇಶ ಪಡೆದು ಸ್ಪಷ್ಟನೆ ನೀಡಿದ ಗೃಹಸಚಿವರು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಸದನಕ್ಕೆ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
acused arrestedcomplaint to speakermla gopalaiahorderd to take actionspeaker ut khadarthreat to a mlavidhana sabha
2 FacebookTwitterPinterestEmail
admin

previous post
ಉತ್ತರ ಪ್ರದೇಶದಿಂದ ತಾಯಿ-ಮಗ ಪಲಾಯನ
next post
ಕರ್ನಾಟಕ ಅಪರಾಧದ ನಾಡಾಗುತ್ತಿದೆ: ಅಶೋಕ್ ಆರೋಪ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ