Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯುವಜನರಿಗೆ ಯುವನಿಧಿ ಜೊತೆ ಉದ್ಯೋಗ ಸೃಷ್ಟಿ

by admin February 26, 2024
written by admin February 26, 2024 0 comments 2 minutes read
1FacebookTwitterPinterestEmail
128

ರಾಜ್ಯ ಸರ್ಕಾರ ಕೌಶಲ್ಯವನ್ನೂ ನೀಡುತ್ತಿದೆ

ಬೆಂಗಳೂರು:ನಿರುದ್ಯೋಗಿ ಯುವಜನರಿಗೆ ಯುವನಿಧಿ ಜೊತೆಗೆ ಉದ್ಯೋಗ ಸೃಷ್ಟಿ ಮತ್ತು ಉದ್ಯೋಗಕ್ಕೆ ಅಗತ್ಯ ತರಬೇತಿಯನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ.

ಬೃಹತ್ ಯುವಸಮೃದ್ಧಿ ಸಮ್ಮೇಳನ ಮತ್ತು ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿಯಡಿ ನಿರುದ್ಯೋಗ ಭತ್ಯೆ ನೀಡುತ್ತಿದೆ, ಜೊತೆಗೆ ಉದ್ಯೋಗಗಳ ಸೃಷ್ಟಿ ಅಲ್ಲದೆ, ಉದ್ಯೋಗಕ್ಕೆ ಅಗತ್ಯವಿರುವ ಕೌಶಲ್ಯ ತರಬೇತಿಯನ್ನೂ ನೀಡಲಾಗುತ್ತಿದೆ, ಇದು ಸರ್ಕಾರ ಯುವಜನರಿಗೆ ನೀಡುವ ಅಭಯ ಎಂದರು.

ಇನ್ನಷ್ಟು ತರಬೇತಿ ಕೇಂದ್ರಗಳ ಸ್ಥಾಪನೆ

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ಅದಕ್ಕೆ ಅಗತ್ಯವಿರುವ ತರಬೇತಿಯನ್ನೂ ಸರ್ಕಾರ ನೀಡುತ್ತಿದ್ದು, ಈ ಗುರಿ ಸಾಧನೆಗೆ ಈಗಿರುವ ಸರ್ಕಾರಿ ತರಬೇತಿ ಕೇಂದ್ರಗಳ ಜೊತೆಗೆ ಹೊಸದಾಗಿ ಇನ್ನಷ್ಟು ಡಿಜಿಟಲೀಕೃತ ಸರ್ಕಾರಿ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಿದರು.

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ, ಪ್ರತಿ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಿದ್ದು ಶೇ.8.40 ಗೆ ಏರಿಕೆಯಾಗಿದೆ.

ಇದ್ದ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ

ಪ್ರಧಾನಿ ನರೇಂದ್ರ ಮೋದಿ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ 2014 ರಲ್ಲಿ ಭರವಸೆ ನೀಡುವ ಮೂಲಕ ಯುವ ಸಮೂಹದ ಮತ ಗಳಿಸಿದರು, ಇದುವರೆಗೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು, ಆದರೆ, ಇದ್ದ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ ಎಂದು ಟೀಕಿಸಿದರು.

ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಹತೆ ಹೊಂದಿದ ಉದ್ಯೋಗಾಕಾಂಕ್ಷಿಗಳಿಗೆ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದರು.

ಇತಿಹಾಸದಲ್ಲೇ ಚಾರಿತ್ರಿಕ ದಾಖಲೆ

ನಿರುದ್ಯೋಗಿ ಯುವಜನರಿಗೆ ಸ್ಥಳದಲ್ಲೇ ಉದ್ಯೋಗ ನೀಡಬೇಕು ಎಂಬುದು ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿದ್ದು, ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನರಿಗೆ ಸ್ಥಳದಲ್ಲೇ ಉದ್ಯೋಗ ಒದಗಿಸಲು ಯುವಜನ ಸಮೃದ್ಧಿ ಸಮ್ಮೇಳನ ಏರ್ಪಡಿಸಿರುವುದು ರಾಜ್ಯದ ಇತಿಹಾಸದಲ್ಲೇ ಚಾರಿತ್ರಿಕ ದಾಖಲೆಯಾಗಲಿದೆ. ಉದ್ಯೋಗ ನಿರೀಕ್ಷಿಸಿ ಮೇಳದಲ್ಲಿ 75 ಸಾವಿರ ಯುವಜನರು ಹೆಸರು ನೋಂದಣಿ ಮಾಡಿಸಿಕೊಂಡಿರುವುದು ದೇಶದ ಇತಿಹಾಸದಲ್ಲೇ ದಾಖಲೆಯಾಗಿದೆ.

ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರದವರೆಗೂ ವಿವಿಧ ವಿದ್ಯಾರ್ಹತೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಿದ್ದು, ಒಂದು ಲಕ್ಷ ಉದ್ಯೋಗಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ, ಇದು ಸಹಾ ದಾಖಲೆಯಾಗಿದೆ.

ಸೋಮಣ್ಣ ಸುತ್ತ ಚಕ್ರವ್ಯೂಹ

ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆ ನಿರುದ್ಯೋಗಿ ಯುವ ಸಮುದಾಯದ ಬೆನ್ನೆಲುಬಾಗಿದೆ, 1.40 ಲಕ್ಷ ಪದವೀಧರರು ಹಾಗೂ ಡಿಪ್ಲೊಮಾದಾರರ ಬ್ಯಾಂಕ್ ಖಾತೆಗಳಿಗೆ ಯೋಜನೆಯ ಹಣ ಸಂದಾಯವಾಗುತ್ತಿದೆ. ಸರ್ಕಾರ ಯುವ ಸಮುದಾಯದ ಜೊತೆಗಿದೆ ಎಂದು ಭರವಸೆ ನೀಡಿದರು.

ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಸಿಕೊಂಡವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ, ಇದರೊಂದಿಗೆ ಉದ್ಯೋಗಿಗಳ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು, ಇದು ನೆಪಮಾತ್ರದ ಉದ್ಯೋಗ ಮೇಳವಲ್ಲ, ಎಲ್ಲರಿಗೂ ಉದ್ಯೋಗ ಕೊಡಿಸಲಾಗುತ್ತಿದೆ.

ಕೌಶಲ್ಯ ಅಭಿವೃದ್ಧಿಗೆ ಆದ್ಯತೆ

ಮೇಳದಲ್ಲಿ ಉದ್ಯೋಗ ದೊರೆಯದ ನೋಂದಾಯಿತರ ದತ್ತಾಂಶಗಳನ್ನು ಆಧರಿಸಿ, ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ತರಬೇತಿ ಹಾಗೂ ಕೌಶಲ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು, ದೇಶದ ಎಲ್ಲಾ ರಾಜ್ಯಕ್ಕಿಂತ ಕರ್ನಾಟಕ ಮಾದರಿಯಾಗಿ ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳುತ್ತಿದೆ.

ಎರಡು ದಿನಗಳ ಉದ್ಯೋಗ ಮೇಳದಲ್ಲಿ ಯುವಜನರ ಸಮಸ್ಯೆಗಳಿಗೆ ಸರ್ಕಾರಿ ಯಂತ್ರ ಸ್ಪಂದಿಸಲಿದೆ, ಮುಖ್ಯಮಂತ್ರಿ ಅವರು ಬಜೆಟ್‌ನಲ್ಲಿ ಶಿಕ್ಷಣಕ್ಕಿಂತಲೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ, ಮುಂದಿನ ದಿನಗಳಲ್ಲಿ ಯುವಜನರ ಸಮಗ್ರ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ರೂಪಿಸಲಾಗುವುದು ಎಂದರು.

ಮೇಳದಲ್ಲಿ ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯುವಸಮೃದ್ಧಿ ಲಾಂಛನ ಅನಾವರಣಗೊಳಿಸಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
industries minister mb patiljob melaover 80 thousand unemployed attended melasiddaramaiah assures jobs to youthstwo days job mela at bengaluru palace ground
1 FacebookTwitterPinterestEmail
admin

previous post
ವಿಧಾನಮಂಡಲ ಅಧಿವೇಶನ ಮತ್ತೆ ಒಂದು ದಿನಕ್ಕೆ ವಿಸ್ತರಣೆ
next post
ಹಾಲಿ ಬಿಜೆಪಿ ಸಂಸದರಿಗೆ ಲೋಕಸಭಾ ಟಿಕೆಟ್!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ