Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೇಶ ದ್ರೋಹಿ ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದು

by admin March 4, 2024
written by admin March 4, 2024 0 comments 1 minutes read
2FacebookTwitterPinterestEmail
142

ಬೆಂಗಳೂರು:ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ವೇಳೆ ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್ ಹುಸೇನ್ ಪರ ವಿಧಾನಸೌಧದ ಆವರಣದೊಳಗೆ ನಡೆದ ಸಂಭ್ರಮಾಚರಣೆ ಸಂದರ್ಭದಲ್ಲಿ ’ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಫ್‌ಎಸ್‌ಎಲ್ ವರದಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಸಂಬಂಧ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾನೂನು ಸುವ್ಯವಸ್ಥೆ ಎಲ್ಲಿದೆ?

ಬಿ.ವೈ. ವಿಜಯೇಂದ್ರ ಟ್ವೀಟ್‌ನಲ್ಲಿ, ಸಿದ್ದರಾಮಯ್ಯನವರೇ, ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನಸೌಧ ಪ್ರವೇಶಿಸಿ, ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗುವಷ್ಟರ ಮಟ್ಟಿಗೆ ದೇಶದ್ರೋಹಿಗಳು ಧೈರ್ಯತೋರುತ್ತಾರೆ, ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಫೋಟವಾಗುತ್ತದೆ, ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ ಎಂದಿದ್ದಾರೆ.

ರಾಜ್ಯದ ಜನತೆ ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದಿದೆ, ಪ್ರಕರಣದ ಎಫ್‌ಎಸ್‌ಎಲ್ ವರದಿ ತಲುಪಿದರೂ ಸುಳ್ಳು ಹೇಳುತ್ತಿದ್ದೀರಿ, ಇದು ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಭೂಗತ ಶಕ್ತಿಗಳಿಗೆ ಸ್ವಾತಂತ್ರ್ಯ ದೊರೆತ ವಾತಾವರಣ ನಿರ್ಮಾಣವಾಗಿದೆ.

ಲಂಚ ಸಾಬೀತಾದರೆ ರಾಜಕೀಯ ನಿವೃತ್ತಿ: ಮುಖ್ಯಮಂತ್ರಿ ಸವಾಲು
ನಾವು ಕೈಕಟ್ಟಿ ಕೂರಬೇಕೇ

‘ಬೆಂದ ಮನೆಯಲ್ಲಿ ಗಳ ಹಿರಿಯುವ’ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ, ವಿಧಾನಸೌಧದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೇಳಿಬಂದರೆ ನಾವು ಕೈಕಟ್ಟಿ ಕೂರಬೇಕೇ, ಮಾಧ್ಯಮಗಳ ವರದಿಯನ್ನೂ ನೀವು ನಂಬಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನೂ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ ಎಂದು ಟೀಕಿಸಿದ್ದಾರೆ.

ಖಾಸಗಿ ಎಫ್‌ಎಸ್‌ಎಲ್ ವರದಿ ಈಗಾಗಲೇ ಪ್ರಕರಣ ಕುರಿತು ಧೃಡೀಕರಣ ನೀಡಿದೆ, ಸರ್ಕಾರಿ ವರದಿ ಸಹಾ ಸರ್ಕಾರದ ಕೈ ಸೇರಿದೆ, ಆದರೂ, ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ ಎಂದು ವಿಜಯೇಂದ್ರ ಟ್ವೀಟ್‌ನಲ್ಲಿ ಕುಟುಕಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp state president by vijayendrafsl reportwe will not sit quite
2 FacebookTwitterPinterestEmail
admin

previous post
ಬರ ನಿರ್ವಹಣೆ ಪರಿಶೀಲನೆ: ನಾಳೆ ಮುಖ್ಯಮಂತ್ರಿ ವಿಡಿಯೊ ಸಂವಾದ
next post
ಕುಮಾರಸ್ವಾಮಿ ಸ್ಪರ್ಧೆ: ದೆಹಲಿಯಲ್ಲಿ ನಿರ್ಧಾರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ