Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯವಿಶ್ಲೇಷಣೆ

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು

by admin March 8, 2024
written by admin March 8, 2024 0 comments 1 minutes read
0FacebookTwitterPinterestEmail
180

ಮಾರ್ಚ್ 12 ರೊಳಗೆ ಪಟ್ಟಿ ಪ್ರಕಟ ಸಾಧ್ಯತೆ

ಬೆಂಗಳೂರು: ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಚಾರ ಬಿಜೆಪಿಯಲ್ಲಿ ಕಗ್ಗಂಟಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ವರಿಷ್ಠರು ರಾಜ್ಯ ನಾಯಕರೊಂದಿಗೆ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಕಸರತ್ತು ನಡೆಸಿದ್ದರೂ ಅಂತಿಮವಾಗಿಲ್ಲ.

ರಾಜ್ಯ ನಾಯಕರಿಂದ ಎಲ್ಲಾ ಕ್ಷೇತ್ರಗಳ ಬಗ್ಗೆ  ಅಗತ್ಯ ಮಾಹಿತಿ ಪಡೆದು ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಪಡೆದುಕೊಂಡಿದ್ದಾರೆ. ಆದರೆ, ರಾಜ್ಯ ನಾಯಕರು ನೀಡಿರುವ ಪಟ್ಟಿಗೂ ಚುನಾವಣಾ ಪೂರ್ವ ಸಮೀಕ್ಷೆ ವರದಿಗೂ ಕೆಲವು ಕ್ಷೇತ್ರಗಳಲ್ಲಿ ತಾಳೆಯಾಗುತ್ತಿಲ್ಲ.

ಈ ನಡುವೆ ಕರ್ನಾಟಕದಲ್ಲಿ ಎನ್ ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ವರಿಷ್ಠರು ಸಮಾಲೋಚನೆ ಮಾಡಬೇಕಾಗಿದೆ.

ಕುಮಾರಸ್ವಾಮಿ ಅವರನ್ನು ಯಾವುದೇ ಕ್ಷಣದಲ್ಲಿ ಬಿಜೆಪಿ ವರಿಷ್ಠರು ದೆಹಲಿಗೆ ಕರೆಸಿಕೊಳ್ಳಲಿದ್ದಾರೆ. ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ ನಂತರ ಅಂದರೆ, ಮಾರ್ಚ್ 12ರ ವೇಳೆಗೆ ಪಟ್ಟಿ ಸಿದ್ಧಗೊಂಡು ಬಿಡುಗಡೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

10ರಿಂದ 14 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ಈ ಮಧ್ಯೆ ಕಾಂಗ್ರೆಸ್ ಕೂಡ ರಾಜ್ಯ 28 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ದೆಹಲಿಯಲ್ಲಿ ಮಾತುಕತೆ ಅಂತಿಮಗೊಂಡಿದೆ.  ಮೊದಲ ಹಂತದಲ್ಲಿ 10ರಿಂದ 14 ಕ್ಷೇತ್ರಗಳ ಅಭ್ಯರ್ಥಿಗಳನ್ನು ಎಐಸಿಸಿ ಪ್ರಕಟಿಸಲಿದೆ.

ಕೇಂದ್ರ ಚುನಾವಣಾ ಸಮಿತಿಯ ಮುಂದೆ ಅಭಿಪ್ರಾಯವನ್ನು ವ್ಯಕ್ತಪಡಿಸಿದ ನಂತರ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಶೀಘ್ರವೇ ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಬಿಡುಗಡೆ

ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ. ನಾವು ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ, “ಅವರು ಎಐಸಿಸಿ ಅಧ್ಯಕ್ಷರು. ಅನೇಕರು ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಅವರ ಕ್ಷೇತ್ರದಲ್ಲಿ ಬೇರೆ ಹೆಸರು ಪ್ರಸ್ತಾಪಿಸಿಲ್ಲ. ಅವರು ದೇಶದಾದ್ಯಂತ ಪ್ರವಾಸ ಮಾಡಬೇಕಿದೆ. ಹೀಗಾಗಿ ಅಂತಿಮವಾಗಿ ಅಧ್ಯಕ್ಷರೇ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಚಿವ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಒಳ್ಳೆಯದಾಗಲಿ, ಆಸೆ ಪಡುವುದರಲ್ಲಿ ತಪ್ಪಿಲ್ಲ. ಯಾರ್ಯಾರೋ ಏನೇನೋ ಆಸೆ ಪಡುತ್ತಾರೆ. ಮಹದೇವಪ್ಪ ಅವರು ಆಸೆಪಡುವುದರಲ್ಲಿ ತಪ್ಪಿಲ್ಲ” ಎಂದು ತಿಳಿಸಿದ್ದಾರೆ.

ಸಚಿವರ ಸ್ಪರ್ಧೆ ಬಗ್ಗೆ ಚರ್ಚೆ ಆಗಿದೆಯೇ ? ಮುಖ್ಯಮಂತ್ರಿ ಪುತ್ರ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ “ಆ ಬಗ್ಗೆ ಚರ್ಚೆ ಆಗಿಲ್ಲ” ಎಂದು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
28 Lok SabhabjpcandidatescongressconstituenciesDeputy Chief MinisterdifficultDKkarnatakaMarch 12publishedSelectionShivakumar
0 FacebookTwitterPinterestEmail
admin

previous post
ದಿನ ಭವಿಷ್ಯ : ಶುಕ್ರವಾರ, 8 ಮಾರ್ಚ್ 2024
next post
ಕರ್ನಾಟಕದಲ್ಲಿ 27,067  ಉದ್ಯೋಗಗಳ ಸೃಷ್ಟಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ