Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕೆ!

by KM Shivaraju March 9, 2024
written by KM Shivaraju March 9, 2024 0 comments 1 minutes read
1FacebookTwitterPinterestEmail
226

ಬೆಂಗಳೂರು:ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಬಹುತೇಕ ಖಚಿತ.

ದೆಹಲಿ ರಾಜಕಾರಣದಲ್ಲಿ ಆಸಕ್ತಿ ಇಲ್ಲದಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯನ್ನು ತಳ್ಳಿಹಾಕಲಾಗದೆ ಚುನಾವಣಾ ಕಣ್ಕಕಳಿಯಲು ಮುಂದಾಗಿದ್ದಾರೆ.

ಮಂಡ್ಯ ಸೇರಿದಂತೆ ಮೂರು ಕ್ಷೇತ್ರಗಳಿಂದ ಕಣಕ್ಕಿಳಿಯಲು ಕುಮಾರಸ್ವಾಮಿ ಅವರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಒತ್ತಡವಿದೆ.

ರಾಮನಗರ ಬಿಡಲು ಆಸಕ್ತಿ ಇಲ್ಲ

ಆದರೆ, ತಮಗೆ ರಾಜಕೀಯ ಬದುಕು ಕೊಟ್ಟ ರಾಮನಗರ ಜಿಲ್ಲೆ ಬಿಟ್ಟು ಚುನಾವಣಾ ಕಣಕ್ಕಿಳಿಯುವ ಆಸಕ್ತಿ ಇಲ್ಲ.

ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರಿದ ನಂತರ ಪ್ರಧಾನಿ ಅವರನ್ನು ಭೇಟಿ ಮಾಡಿದ ಸಂದರ್ಭದಲೆಲ್ಲಾ ಕೇಂದ್ರ ರಾಜಕಾರಣಕ್ಕೆ ಬರುವಂತೆ ಸಲಹೆ ನೀಡಿರುವುದಲ್ಲದೆ, ಬಹಿರಂಗ ಪಡಿಸಲಾಗದ ಕೆಲವು ವಿಚಾರಗಳನ್ನು ಮುಂದಿಟ್ಟಿದ್ದಾರೆ.

ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಕೂಟಕ್ಕೆ ಯಾವ ಕ್ಷೇತ್ರಗಳು ಎಂಬುದು ನಿಗದಿಯಾಗಿವೆ. ತಮ್ಮ ಪಕ್ಷಕ್ಕೆ ದಕ್ಕಿರುವ ಕ್ಷೇತ್ರಗಳಲ್ಲಿ ಹಾಸನ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಚುನಾವಣಾ ಸಭೆಗಳನ್ನು ನಡೆಸಿದ್ದಾರೆ.

ಸ್ಥಳೀಯ ಮುಖಂಡರೊಂದಿಗೆ ಸಮಾಲೋಚನೆ

ಮಂಡ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೂರು ಬಾರಿ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚನೆ ಮಾಡಿರುವ ಕುಮಾರಸ್ವಾಮಿ ಅಭ್ಯರ್ಥಿ ಹೆಸರು ಬಹಿರಂಗ ಪಡಿಸಿಲ್ಲ.

ಅವರ ಮನಸ್ಸಿನಲ್ಲಿ ಪಾಂಡವಪುರದ ಮಾಜಿ ಸಂಸದ ಪುಟ್ಟರಾಜು ಅವರನ್ನು ಕಣಕ್ಕಿಳಿಸಬೇಕೆಂಬ ಇಚ್ಛೆ ಇದೆ. ಆದರೆ, ಪ್ರಧಾನಿ ಅವರ ಮಾತನ್ನು ತಳ್ಳಿಹಾಕಲು ಸಾಧ್ಯವಾಗುತ್ತಿಲ್ಲ.

ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ಪಾಲಿನ ಕ್ಷೇತ್ರಗಳ ಬಗ್ಗೆ ಮೂರು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದಾರೆ. ಅದರಲ್ಲಿ ಮಂಡ್ಯದಲ್ಲಿ ಕಣಕ್ಕಿಳಿದರೆ ದೊಡ್ಡ ಅಂತರದಲ್ಲಿ ಗೆಲ್ಲುತ್ತೇನೆಂಬ ವರದಿಗಳಿವೆ.

ರಾಮೇಶ್ವರಂ ಕೆಫೆ ಸ್ಫೋಟ ಪಾತಕಿ ಸುಳಿವು!
ತಾವು ಕಣಕ್ಕಳಿದರೆ ಗೆಲುವು ಸುಲಭ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಜಯ ಗಳಿಸಿದ್ದರೂ, ತಾವು ಕಣಕ್ಕಳಿದರೆ ಗೆಲುವು ಸುಲಭ ಎಂಬ ಮಾಹಿತಿ ಇದೆ.

ಯಾರೇ ನಿಂತರೂ ಒಮ್ಮತದಿಂದ ಚುನಾವಣಾ ಹೋರಾಟ ನಡೆಸಿ ಅಭ್ಯರ್ಥಿ ಗೆಲ್ಲಿಸಿ, ಅವರು ಸ್ಥಳೀಯರೇ ಆಗಬಹುದು ಇಲ್ಲವೇ ಆಕಸ್ಮಿಕ ಅಭ್ಯರ್ಥಿಯೂ ಆಗಿರಬಹುದು ಎಂಬ ವಿಚಾರ ಸಭೆಯ ಮುಂದಿಟ್ಟಿದ್ದಾರೆ.

ಪ್ರಧಾನಿ ಮತ್ತು ತಮ್ಮ ನಡುವೆ ನಡೆದಿರುವ ಮಾತುಕತೆಯನ್ನು ಮುಖಂಡರ ಗಮನಕ್ಕೆ ತಂದಿರುವುದಲ್ಲದೆ, ಮೋದಿ ಅವರು ಹೇಳಿರುವ ಎಲ್ಲಾ ವಿಷಯವನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ನನ್ನನ್ನು ಮತ್ತೆ ದೆಹಲಿಗೆ ಆಹ್ವಾನಿಸಿದ್ದಾರೆ, ಚರ್ಚೆ ಸಂದರ್ಭದಲ್ಲಿ ದೆಹಲಿ ರಾಜಕಾರಣಕ್ಕೆ ಬರಲೇಬೇಕೆಂದಾದರೆ, ನಾನು ಒಂದೆಡೆ ಕಣಕ್ಕಿಳಿಯಬೇಕಾಗುತ್ತದೆ.

ಅಂತಹ ಸಂದರ್ಭ ಬಂದರೆ ನಿಮಗಾರಿಗೂ ಅನ್ಯಾಯ ಮಾಡುವುದಿಲ್ಲ, ನಿಮಗೆ ದಕ್ಕಬೇಕಾದ ಸ್ಥಾನಮಾನಗಳನ್ನು ಕೊಡಿಸುತ್ತೇನೆ, ಎಲ್ಲರೂ ಕೈಜೋಡಿಸಿ ಕೆಲಸ ಮಾಡೋಣ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
kumara swamy from mandya loka sabha!meeting with constituency leadrespm also shown interest in contest of kumara swamy
1 FacebookTwitterPinterestEmail
KM Shivaraju

previous post
ರಾಮೇಶ್ವರಂ ಕೆಫೆ ಸ್ಫೋಟ ಪಾತಕಿ ಸುಳಿವು!
next post
ವಾರ ಭವಿಷ್ಯ : ಭಾನುವಾರ, 10 ಮಾರ್ಚ್ 2024

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ