Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂವಿಧಾನ ಬದಲಿಸಿದರೆ ದೇಶದಲ್ಲಿ ರಕ್ತಪಾತ!

by admin March 11, 2024
written by admin March 11, 2024 0 comments 2 minutes read
0FacebookTwitterPinterestEmail
168

ಬೆಂಗಳೂರು:ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನದ ಕುರಿತು ನೀಡಿರುವ ಹೇಳಿಕೆ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಉಂಟು ಮಾಡಿದೆ.

ಇವರ ಹೇಳಿಕೆ ಹೊರಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ, ಸರ್ವಾಧಿಕಾರ ಧೋರಣೆಯಲ್ಲಿ ನಂಬಿಕೆ ಇರಿಸಿದ್ದು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ಮಾಡಿದ್ದಾರೆ ಎಂದು ಗುಡುಗಿದ್ದಾರೆ.

ಅಷ್ಟೇ ಅಲ್ಲ, ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ನರೇಂದ್ರ ಮೋದಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ್ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದರು.

ಅನಂತಕುಮಾರ್ ಹೇಳಿಕೆಗೆ ತೀವ್ರ ಟೀಕೆ

ಅನಂತಕುಮಾರ್ ಅವರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಒಳಗಾಗುತ್ತಿದ್ದಂತೆ, ಹೆಗಡೆ ಅವರ ಹೇಳಿಕೆ ವೈಯಕ್ತಿಕ ವಿಚಾರ, ಅದಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಸಂಬಂಧ ಬಿಜೆಪಿ ಹೇಳಿಕೆ ನೀಡಿ, ರಾಷ್ಟ್ರೀಯ ನಾಯಕರು ಅದನ್ನು ಗಮನಿಸಿ ಹೆಗಡೆ ಅವರಿಂದ ಸ್ಪಷ್ಟನೆ ಕೇಳಿದ್ದಾರೆ.

ಹೆಗಡೆ ಹೇಳಿಕೆ ದೊಡ್ಡದು ಮಾಡುತ್ತಿದ್ದಾರೆ

ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಅವರನ್ನು ಅವಹೇಳನ ಮಾಡುತ್ತಾರೆ, ಹೆಗಡೆ ನೀಡಿದ ಹೇಳಿಕೆಯನ್ನೇ ದೊಡ್ಡದು ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಮುಂದುವರೆದು ಮಾತನಾಡಿದ ಮುಖ್ಯಮಂತ್ರಿ ಅವರು, ಹೆಗಡೆಯವರು ಈ ಮುಂಚೆ ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ.

ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತರಬೇಕಾದರೆ ಸರ್ಕಾರಕ್ಕೆ ಮೂರನೇ ಎರಡರಷ್ಟು ಬಹುಮತವಿರಬೇಕು. ದೇಶ ಹಾಗೂ ಬಡವರ ಏಳಿಗೆಗೆ ಬಿಜೆಪಿಯವರಿಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ ಎಂದು ಕಿಡಿಕಾರಿದರು.

ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು. ಆದ್ದರಿಂದ ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು ಎಂದರು.

ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಕಟ್ಟಡ ನಿರ್ಮಾಣಕ್ಕೆ ’ನಂಬಿಕೆ ನಕ್ಷೆ’ ಯೋಜನೆ ಜಾರಿ
ಹೆಗಡೆ ಮುಖವಾಡ ಅಷ್ಟೆ

ಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್.

ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ, ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ.

ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ಧವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು.

ದಮ್ಮು, ತಾಖತ್ ಇಲ್ಲ

ಈ ಹೇಳಿಕೆ ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್‌ಎಸ್‌ಎಸ್ ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಖತ್ ಇಲ್ಲ ಅಷ್ಟೆ.

ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp says it's hegade's personal statementcm siddaramaiah challenges bjptake action aganist anant kumar hegade
0 FacebookTwitterPinterestEmail
admin

previous post
ಲಂಚ, ಅಲೆದಾಟ ಇಲ್ಲದೆ ಕಟ್ಟಡ ನಕ್ಷೆ ಮನೆ ಬಾಗಿಲಿಗೆ
next post
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಸ್ಪರ್ಧೆ : ಕುಮಾರಸ್ವಾಮಿ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ