Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕರ್ನಾಟಕದಲ್ಲಿ ಏಪ್ರಿಲ್ 26 – ಮೇ 7ರಂದು ಮತದಾನ

by admin March 16, 2024
written by admin March 16, 2024 0 comments 2 minutes read
0FacebookTwitterPinterestEmail
250
ಜೂನ್ 4 ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ; ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

ಬೆಂಗಳೂರು:ಲೋಕಸಭಾ ಚುನಾವಣೆ ದಿನಾಂಕಗಳು ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 26 ರಂದು ಮೊದಲ ಹಂತದಲ್ಲಿ ಮತ್ತು ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ, ಜೂನ್ 4ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಹಾಗೂ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ಮೊದಲ ಹಂತದ 14 ಕ್ಷೇತ್ರಗಳು

ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು-ಕೊಡಗು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಸೇರಿವೆ.

ಕರ್ನಾಟಕದಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಮಾರ್ಚ್ 28 ರಂದು ಹೊರಬೀಳಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಏಪ್ರಿಲ್ 5 ರಂದು ನಡೆಯಲಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಏಪ್ರಿಲ್ 26 ರಂದು ಮತದಾನ ನಿಗದಿಯಾಗಿದೆ.

ಎರಡನೇ ಹಂತದ 14 ಕ್ಷೇತ್ರಗಳು

ಎರಡನೇ ಹಂತದಲ್ಲಿ ಮೇ 7 ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಬೀದರ್, ಚಿಕ್ಕೋಡಿ, ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾವೇರಿ-ಗದಗ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಉತ್ತರ ಕನ್ನಡ ಸೇರಿವೆ.

ಇದರೊಂದಿಗೆ ಮೇ 7 ರಂದು ಎರಡನೇ ಹಂತದಲ್ಲಿ ನಡೆಯುವ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲೇ ಶಾಸಕ ರಾಜಾವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿರುವ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯೂ ನಡೆಯಲಿದೆ.

ಕರ್ನಾಟಕದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಅಧಿಸೂಚನೆ ಏಪ್ರಿಲ್ 12 ರಂದು ಹೊರಬೀಳಲಿದ್ದು, ನಾಮಪತ್ರ ಸಲ್ಲಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಏಪ್ರಿಲ್ 20 ರಂದು ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದೆ.

ರಾಷ್ಟ್ರಾದ್ಯಂತ 7 ಹಂತದ ಚುನಾವಣೆ

ರಾಷ್ಟ್ರಾದ್ಯಂತ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೇ ಹಂತ ಏಪ್ರಿಲ್ 19 ಮತ್ತು ಎರಡನೇ ಹಂತ ಏಪ್ರಿಲ್ 26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25 ಮತ್ತು ಏಳನೇ ಹಾಗೂ ಕೊನೆಯ ಹಂತ ಜೂನ್ 1 ರಂದು ಮತದಾನ ನಡೆಯಲಿದೆ.

ಒಟ್ಟು 96.8 ಕೋಟಿ ಮತದಾರರಿದ್ದು, ಪುರುಷ ಮತದಾರರ ಸಂಖ್ಯೆ 49.71 ಕೋಟಿಯಾಗಿದ್ದು, ಮಹಿಳಾ ಮತದಾರರ ಸಂಖ್ಯೆ 47.1 ಕೋಟಿಯಾಗಿದೆ. 1.8 ಕೋಟಿ ಹೊಸ ಮತದಾರರು ಈ ಬಾರಿ ಮತದಾನದ ಹಕ್ಕು ಪಡೆದಿದ್ದಾರೆ.

ಚುನಾವಣಾ ಕಾರ್ಯಕ್ಕೆ 1.5 ಕೋಟಿ ಸಿಬ್ಬಂದಿ ನೇಮಕವಾಗಲಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಒಟ್ಟು 2,100 ಮುಖ್ಯ ಚುನಾವಣಾ ವೀಕ್ಷಕರನ್ನು ನೇಮಿಸಿದೆ.

85 ವರ್ಷ ಮೀರಿದ ಮತದಾರರು ಮತಗಟ್ಟೆಗೆ ಬರಲು ಸಾಧ್ಯವಾಗದೆ, ಮನೆಯಿಂದಲೇ ಮತದಾನ ಮಾಡಲು ಇಚ್ಛಿಸಿದರೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗುವುದು.

ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿಶೇಷಚೇತನರಿಗೆ ರ‍್ಯಾಂಪ್, ಗಾಲಿ ಕುರ್ಚಿ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.

ಚುನಾವಣಾ ಬಾಂಡ್ ಹಗರಣ: ಸುಪ್ರೀಂಕೋರ್ಟ್‌ನ ಉನ್ನತಾಧಿಕಾರ ಸಮಿತಿ ತನಿಖೆಗೆ ಒತ್ತಾಯ
ಮತದಾರರಿಗೆ ಆಮಿಷ ವಿರುದ್ಧ ಕಠಿಣ ಕ್ರಮ

ಚುನಾವಣಾ ಮಾರ್ಗಸೂಚಿಗಳ ಪಾಲನೆ ಬಗ್ಗೆ ನಿಗಾ ವಹಿಸಲು ಈ ಬಾರಿ ಡ್ರೋನ್ ಬಳಸಲಾಗುತ್ತಿದೆ. ಮತದಾರರಿಗೆ ಆಮಿಷ ಒಡ್ಡುವಂತಹ ಉಡುಗೊರೆ ನೀಡುವುದು, ಫೋನ್ ಪೇ ಮತ್ತು ಗೂಗಲ್ ಪೇ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು.

ಮಾದರಿ ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದ್ದು, ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸುವಂತೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
7 fhases electioncounting on june 4thloka sabha election 2024
0 FacebookTwitterPinterestEmail
admin

previous post
ಚುನಾವಣಾ ಬಾಂಡ್ ಹಗರಣ: ಸುಪ್ರೀಂಕೋರ್ಟ್‌ನ ಉನ್ನತಾಧಿಕಾರ ಸಮಿತಿ ತನಿಖೆಗೆ ಒತ್ತಾಯ
next post
ಲೋಕಸಭೆ ಚುನಾವಣೆ ಧರ್ಮ ಯುದ್ಧ: ಡಾ. ಮಂಜುನಾಥ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ