Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್-ಬಿಜೆಪಿ/ಜೆಡಿಎಸ್ ನಡುವೆ ನೇರ ಹಣಾಹಣಿ

by KM Shivaraju April 8, 2024
written by KM Shivaraju April 8, 2024 0 comments 2 minutes read
1FacebookTwitterPinterestEmail
328

ಬೆಂಗಳೂರು:ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಎನ್‌ಡಿಎ ಮೈತ್ರಿಕೂಟದ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾದ ಇಂದು ಮೂರೂ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು

ಮೊದಲ ಹಂತದಲ್ಲಿ ಚುನಾವಣೆಯ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡುವ ಸ್ಥಿತಿಯಲ್ಲಿಲ್ಲ.

ಕಾಂಗ್ರೆಸ್ 14 ಕ್ಷೇತ್ರಗಳಲ್ಲೂ ತನ್ನ ಉಮೇದುವಾರರನ್ನು ನಿಲ್ಲಿಸಿದ್ದರೆ, ಎನ್‌ಡಿಎ ಮೈತ್ರಿಕೂಟದ ಬಿಜೆಪಿ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಮೂರು ಕ್ಷೇತ್ರಗಳನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್ ನೇರ ಹಣಾಹಣಿ ನಡೆಸಲಿದೆ.

ಬಿರುಸಿನ ಪ್ರಚಾರ

ಈಗಾಗಲೇ ಮೂರೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಇವರುಗಳಿಗೆ ಬೆನ್ನೆಲುಬಾಗಿ ಪಕ್ಷದ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ರೋಡ್ ಶೋ ಮತ್ತು ಸಭೆಗಳನ್ನು ನಡೆಸಿ ಮತದಾರರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತ್ರ ಬೆಂಗಳೂರು ಗ್ರಾಮಾಂತರದಲ್ಲಿ ಸ್ಫರ್ಧಿಸಿರುವ ಅಭ್ಯರ್ಥಿ ಡಾ.ಮಂಜುನಾಥ್ ಪರ ಬೃಹತ್ ರೋಡ್ ಶೋ ನಡೆಸಿದ್ದನ್ನು ಹೊರತುಪಡಿಸಿದರೆ, ಉಳಿದ ಯಾವುದೇ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಇನ್ನೂ ಚುನಾವಣಾ ಪ್ರಚಾರ ಕೈಗೊಂಡಿಲ್ಲ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜವಂಶದ ಯದುವೀರ್ ಕೃಷ್ಣದತ್ತ ಒಡೆಯರ್, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ವಿರುದ್ಧ ಬಿಜೆಪಿಯಿಂದ ಡಾ.ಮಂಜುನಾಥ್ ಕಣಕ್ಕಿಳಿದಿರುವುದರಿಂದ ಇವುಗಳು ಮೊದಲ ಹಂತದ ಚುನಾವಣೆಯ ಪ್ರತಿಷ್ಠೆಯ ಕ್ಷೇತ್ರಗಳಾಗಿವೆ.

11 ಸಾಮಾನ್ಯ ಕ್ಷೇತ್ರಗಳು

ಚಾಮರಾಜನಗರ, ಕೋಲಾರ ಹಾಗೂ ಚಿತ್ರದುರ್ಗ ಮೀಸಲು ಕ್ಷೇತ್ರಗಳಾಗಿದ್ದು, ಉಳಿದ 11 ಸಾಮಾನ್ಯ ಕ್ಷೇತ್ರಗಳಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದಲ್ಲಿರುವ ಪ್ರಭಾವೀ ಮಂತ್ರಿಗಳು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಒಳಪಟ್ಟಿವೆ.

ಸಿದ್ದರಾಮಯ್ಯ ಅವರಿಗೆ ತಮ್ಮ ವರುಣ ಕ್ಷೇತ್ರ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬಂದರೂ ಅವರು ಮೈಸೂರು-ಕೊಡಗು ಕ್ಷೇತ್ರವನ್ನೂ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಏಪ್ರಿಲ್ 2ನೇ ವಾರ ದ್ವಿತೀಯ ಪಿಯು ಫಲಿತಾಂಶ
ಬಿರುಸಿನ ರೋಡ್ ಶೋ

ಈಗಾಗಲೇ ಅವರು ಈ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಬಿಜೆಪಿ ಮುಷ್ಠಿಯಲ್ಲಿರುವ ಬೆಂಗಳೂರು ಕ್ಷೇತ್ರಗಳನ್ನೂ ತಮ್ಮದಾಗಿಸಿಕೊಳ್ಳಲು ಕಳೆದ ಎರಡು ದಿನಗಳಿಂದ ಬಿರುಸಿನ ರೋಡ್ ಶೋ ನಡೆಸಿದ್ದಾರೆ.

ಮತದಾನಕ್ಕೆ ಇನ್ನು ಕೇವಲ 20 ದಿನ, ಆದರೆ ಪ್ರಚಾರಕ್ಕೆ ಉಳಿದಿರುವುದೇ 18 ದಿನಗಳು. ಇಷ್ಟರಲ್ಲಿ ಮತದಾರರನ್ನು ಯಾರು ಓಲೈಸಿಕೊಳ್ಳುವರೋ ಅವರು ಜಯದ ಮಾಲೆ ಧರಿಸುತ್ತಾರೆ.

ರಾಜ್ಯದ ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಚುನಾವಣೆ ನಡೆಯಲಿದ್ದು, ಅತ್ತ ಕಡೆಗೆ ಪಕ್ಷದ ಮುಖಂಡರುಗಳು ಇನ್ನೂ ಗಮನ ಹರಿಸಿಲ್ಲ, ಎಲ್ಲರೂ ಮೊದಲ ಹಂತದ ಕಡೆಯೇ ಹೆಚ್ಚು ಗಮನ ಕೇಂದ್ರೀಕರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp - jdscongresfirst phase election in karnatakaloka sabha election - 2024nda v/s congres
1 FacebookTwitterPinterestEmail
KM Shivaraju

previous post
ಏಪ್ರಿಲ್ 2ನೇ ವಾರ ದ್ವಿತೀಯ ಪಿಯು ಫಲಿತಾಂಶ
next post
ದಿನ ಭವಿಷ್ಯ : ಮಂಗಳವಾರ, 09 ಏಪ್ರಿಲ್ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ