Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹೊಸತೊಡಕು: ಎಚ್‌ಡಿಕೆ-ಡಿಕೆಶಿ ಮಾತಿನ ಕಾಳಗ!

by admin April 10, 2024
written by admin April 10, 2024 0 comments 3 minutes read
0FacebookTwitterPinterestEmail
181

ಬೆಂಗಳೂರು:ಯುಗಾದಿ ಹೊಸತೊಡಕು ಸಂಭ್ರಮಕ್ಕೆ ಅಡ್ಡಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಹಿಂದೂ ಸಂಸ್ಕೃತಿಯ ಮೇಲೆ ತನ್ನ ’ಕಾಕ’ ದೃಷ್ಟಿ ಬೀರಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಕಿಡಿಕಾರಿದ್ದಾರೆ.

ಹೊಸತಡಕು ದಿನದಂದು ತಮ್ಮ ಸ್ನೇಹಿತರಿಗೆ ಏರ್ಪಡಿಸಿದ್ದ ಔತಣಕೂಟವನ್ನು ಕಾಂಗ್ರೆಸ್ ನಾಯಕರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ನಮ್ಮ ಹಿಂದೂ ಆಚರಣೆಯನ್ನೇ ತಡೆದಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಡದಿ ಮನೆ ವಿಷಯ

ಬಿಡದಿ ಮನೆಯ ವಿಷಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ಅವರ ನಡುವೆ ಮಾತಿನ ಕಾಳಗಕ್ಕೆ ಎಡೆ ಮಾಡಿದ್ದು, ಇದರ ಭರದಲ್ಲಿ ಒಕ್ಕಲಿಗ ಹಾಗೂ ಸಮುದಾಯದ ಮಠಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂಬ ಮಾತುಗಳೂ ಕೇಳಿಬಂದಿದೆ.

ಬಿಡದಿ ತೋಟವನ್ನು ಕುಮಾರಸ್ವಾಮಿ, ಹೆಡ್ ಕ್ವಾರ್ಟರ‍್ಸ್ ಮಾಡಿಕೊಂಡಿದ್ದಾರೆ ಎಂಬ ಆ ಪಕ್ಷದ ನಾಯಕರ ಹೇಳಿಕೆಗೆ ಕೆಂಡಾಮಂಡಲವಾಗಿರುವ ಕುಮಾರಸ್ವಾಮಿ, ಕಾಂಗ್ರೆಸ್ ಆಫೀಸ್ ಅನ್ನು ನಾನು ಹೆಡ್ ಆಫೀಸ್ ಮಾಡಿಕೊಳ್ಳಲು ಆಗುತ್ತದೆಯೇ ಎಂದು ತಿರುಗೇಟು ನೀಡಿದ್ದಾರೆ.

ನನ್ನ ತೋಟ, ನನ್ನ ಮನೆ, ಅಲ್ಲಿ ಹಿಂದೂ ಸಂಸ್ಕೃತಿಯಂತೆ ಹಬ್ಬ ಆಚರಿಸುತ್ತಿದ್ದೇನೆ, ಮೇಕೆ ದಾಟು ಪಾದಯಾತ್ರೆಯಲ್ಲಿ ತೂರಾಡಿದಂತೆ ನಾವೇನು ಇಲ್ಲಿ ತೂರಾಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ನನ್ನ ತೋಟವೇ ನನ್ನ ಹೆಡ್ಡಾಫೀಸ್

ಬಿಜೆಪಿಗೆ ಕೇಶವ ಕೃಪ ಹೇಗೋ, ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆ, ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್, ಅದರಲ್ಲಿ ತಪ್ಪೇನಿದೆ, ನಾನು ಪಕ್ಷದ ಅಧ್ಯಕ್ಷನಿದ್ದೇನೆ, ಅಲ್ಲಿ ನಾನು, ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ, ಅಲ್ಲದೆ, ನನ್ನ ತೋಟದಲ್ಲಿ 120 ಜನ ಈಗಲೂ ಕೆಲಸ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಮಾಡಿದ್ದೆವು, ಮಾಡಬಾರದು ಅನ್ನೋಕೆ ಅದೇನು ಕಾಂಗ್ರೆಸ್ ಹೆಡ್ಡಾಫೀಸಾ, ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು.

ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಮೊದಲು ಮೇಕೆದಾಟು ಪಾದಯಾತ್ರೆ ಮಾಡಿದ್ದರು, ಪಾದಯಾತ್ರೆಯಲ್ಲಿ ತೂರಾಡಿದ್ದು ಯಾರು, ನಾನು ತೂರಾಡಿದ್ನಾ, ನನಗೂ ಏನು ಮಾಡಬೇಕು, ಏನು ಮಾಡಬಾರದು ಎಂದು ಗೊತ್ತಿದೆ, ಅಲ್ಲಿನ ತಹಶಿಲ್ದಾರ್ ಅವರಿಗೆ ಪದೇ ಪದೇ ಫೋನ್ ಕರೆ ಮಾಡಿ ಒತ್ತಡ ಹೇರಿದ್ದಾರೆ, ಏನು ಸಿಕ್ಕಿಲ್ಲ ಅಲ್ಲಿ, ಇಷ್ಟು ಚುನಾವಣೆ ಮಾಡಿದವನಿಗೆ ಏನು ಮಾಡಬೇಕು ಅನ್ನೋದು ಗೊತ್ತಿಲ್ಲವಾ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ನಾವು ಬಿಡದಿ ತೋಟದಲ್ಲಿ ಗ್ಲಾಸ್ ಇಟ್ಟು ಪಾರ್ಟಿ ಮಾಡ್ತಿಲ್ಲ, ಹಾಗೆ ಮಾಡೋದು ಕಾಂಗ್ರೆಸ್ ಸಂಸ್ಕೃತಿ, ಅಂತಹ ಕೆಲಸವನ್ನು ಕಾಂಗ್ರೆಸ್ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು ಅವರು ಆರೋಪ ಮಾಡಿದರು.

ನಾನು ಅಧಿಕಾರದಲ್ಲಿದ್ದಾಗ ಎಂದೂ ಸಹಾ, ನಮ್ಮ ಸಮುದಾಯದ ಸ್ವಾಮೀಜಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಕೆಲಸ ಮಾಡಿಲ್ಲ, ನಾನು ಎಂದೂ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ, ಜಾತ್ಯತೀತ ಅಂತ ಹೇಳೋರು, ಪ್ರತೀ ದಿನ ಜಾತಿ ಬಗ್ಗೆಯೇ ಮಾತಾಡ್ತಾರೆ, ನಮ್ಮ ಸಮಾಜದ ಜನ ದಡ್ಡರಲ್ಲ, ಇವರು ನಡೆಸುತ್ತಿರುವ ರಾಜಕೀಯ ಎಲ್ಲರಿಗೂ ಅರ್ಥ ಆಗುತ್ತಿದೆ ಎಂದು ಅವರು ಕಿಡಿಕಾರಿದರು.

ಪರಮಪೂಜ್ಯ ಶ್ರೀಗಳನ್ನು ಭೇಟಿ ಮಾಡಿ ಅವರನ್ನು ಬಳಸಿಕೊಳ್ಳುವ ಪ್ರಯತ್ನ ಮೊನ್ನೆ ಕಾಂಗ್ರೆಸ್ ಮಾಡಿದೆ, ರಾಜಕೀಯಕ್ಕೂ ಧರ್ಮಕ್ಕೂ ಏನ್ ಸಂಬಂಧ, ಧಾರ್ಮಿಕವಾಗಿ ನಾಡಿಗೆ ಮಾರ್ಗದರ್ಶನ ಮಾಡುತ್ತಿರುವ ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಬಾಲಕಿಯರೇ ಮುಂದು

ಕುಮಾರಸ್ವಾಮಿ ಯಾರನ್ನ ಟೀಕೆ ಮಾಡಿಲ್ಲ

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಶಿವಕುಮಾರ್, “ಕುಮಾರಸ್ವಾಮಿ ಅವರು ಯಾರನ್ನ ಟೀಕೆ ಮಾಡಿಲ್ಲ ಹೇಳಿ, ಪ್ರಣಾಳಿಕೆ ಬಿಡಿ, ಕುಮಾರಸ್ವಾಮಿ ಅವರು ನಮ್ಮ ಪ್ರತಿ ವಿಚಾರವನ್ನೂ ಟೀಕೆ ಮಾಡುತ್ತಾರೆ, ಮೇಕೆದಾಟು ಪಾದಯಾತ್ರೆ ಟೀಕೆ ಮಾಡಿದ್ದವರು ಈಗ ಮೇಕೆದಾಟು ಯೋಜನೆ ಜಾರಿಗೆ ಶಪಥ ಮಾಡುವುದಾಗಿ ಹೇಳಿದ್ದಾರೆ.

ಮಠದ ಸ್ವಾಮೀಗಳನ್ನೂ ಬಿಟ್ಟಿಲ್ಲ, ಎರಡು ಮಠ ಮಾಡಿದ್ದಾರೆ, ಈಗ ದಿನಬೆಳಗಾದರೆ ಮಠಕ್ಕೆ ಹೋಗಿ ಭೇಟಿ ಮಾಡುತ್ತಾರೆ, ಅವರು ತಮ್ಮ ಮಾತಿಗೆ ಎಂದಿಗೂ ಬದ್ಧರಾಗಿರುವುದಿಲ್ಲ, ಹೀಗಾಗಿ ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದರು.

“ಒಕ್ಕಲಿಗರು ಮತ್ತು ಸ್ವಾಮೀಜಿಗಳು ದಡ್ಡರಲ್ಲ, ಸ್ವಾಮೀಜಿಗಳ ಬಳಿ ಬರುವವರಿಗೆ ವಿಭೂತಿ, ಹೂವಿನ ಹಾರ ಹಾಕಿ ಕಳಿಸುತ್ತಾರೆ, ಅವರು ನಮ್ಮ ಪರ, ಅವರ ಪರ, ಇಬ್ಬರ ಪರವೂ ಮಾಡುವುದಿಲ್ಲ, ಸ್ವಾಮೀಜಿಗಳು ಬುದ್ಧಿವಂತರು, ರಾಜಕೀಯದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಮಠವನ್ನು ಇಬ್ಭಾಗ ಮಾಡಿದವರು

ಈ ಹಿಂದೆ ಜನತಾದಳದವರು ಮಠವನ್ನು ಇಬ್ಭಾಗ ಮಾಡಿದ ಬಗ್ಗೆ ಸ್ವಾಮೀಜಿಗಳಿಗೆ ಅರಿವಿದೆ, ನಮ್ಮ ಜನ ಕೂಡ ಇದನ್ನು ಗಮನಿಸುತ್ತಾರೆ, ಮೈತ್ರಿ ಸರ್ಕಾರ ಪತನವಾದ ಬಳಿಕ ನಮ್ಮ ಸಮಾಜದ ಮುಖ್ಯಮಂತ್ರಿ ಅವರನ್ನು ಇಳಿಸಿ ಬಿಟ್ಟಿರಲ್ಲ ಎಂದು ಸ್ವಾಮೀಜಿಗಳು ಬಿಜೆಪಿಯರನ್ನು ಪ್ರಶ್ನಿಸಬಹುದಿತ್ತಲ್ಲವೇ, ಇದನ್ನು ಕೇಳುವ ಶಕ್ತಿ ಸ್ವಾಮೀಜಿಗಳಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ, ಒಕ್ಕಲಿಗ ಮುಖ್ಯಮಂತ್ರಿಯನ್ನು ಕೆಳಗಿಳಿಸಿದವರನ್ನೇ ಇಂದು ಸ್ವಾಮೀಜಿಯವರ ಬಳಿ ಕರೆದುಕೊಂಡು ಹೋಗಿ ಆಶೀರ್ವಾದ ಪಡೆಯುತ್ತಿದ್ದಾರಲ್ಲವೇ ಎಂದು ವ್ಯಂಗ್ಯವಾಡಿದರು.

ಪಾದಯಾತ್ರೆ ಮಾಡಿದ್ದರೆ ಗೊತ್ತಾಗುತ್ತಿತ್ತು

ಮೇಕೆದಾಟು ಪಾದಯಾತ್ರೆ ವೇಳೆ ನಾನು ತೂರಾಡಿದ್ದೇನೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, “ಅವರು ಏನಾದರೂ ಹೇಳಿಕೊಳ್ಳಲಿ, ಜನಕ್ಕೆ ಎಲ್ಲವೂ ಗೊತ್ತಿದೆ, ನಾನು ಪಾದಯಾತ್ರೆ ಮಾಡಿದ್ದೇನೆ ತಾನೆ, ಅವರೂ ಮಾಡಲಿ.

ನಾನು ಕುಡಿದು ತೂರಾಡಿದ್ದೇನೆಯೇ, ನಾನು ಪಾದಯಾತ್ರೆಯಲ್ಲಿ ನಡೆದು ಸುಸ್ತಾಗಿ ತೂರಾಡಿದ್ದೇನೆ, ಕುಮಾರಸ್ವಾಮಿ ಅವರು ಅಲ್ಲಿ ನಡೆದಿದ್ದರೆ ಅವರಿಗೆ ಗೊತ್ತಾಗುತ್ತಿತ್ತು, ಈ ನಾಡು, ಕಾವೇರಿ ಜಲಾನಯನ ಪ್ರದೇಶದ ಜನರಿಗಾಗಿ ಈ ಹೋರಾಟ ಮಾಡಿದ್ದೇನೆ, ನಾನು ಈ ವಿಚಾರದಲ್ಲಿ ಅವರಿಗೆ ಸವಾಲು ಹಾಕುವುದಿಲ್ಲ, ನಾನು ಸವಾಲು ಹಾಕಿ ಅವರ ಆರೋಗ್ಯ ಹೆಚ್ಚುಕಮ್ಮಿ ಆದರೆ, ನಾನು ಜವಾಬ್ದಾರಿ ತೆಗುಕೊಳ್ಳುವುದಿಲ್ಲ, ಅವರು ಧೈರ್ಯವಾಗಿ ಚುನಾವಣೆ ಮಾಡುತ್ತಿದ್ದಾರೆ, ಅದಕ್ಕೆ ಶುಭ ಕೋರುತ್ತೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
allegation on one anotherbidadihdk - dksnew year fightpeople knows all
0 FacebookTwitterPinterestEmail
admin

previous post
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಬಾಲಕಿಯರೇ ಮುಂದು
next post
ದಿನ ಭವಿಷ್ಯ : ಗುರುವಾರ, 11 ಏಪ್ರಿಲ್ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ