Friday, July 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, July 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೇಶ ವಿಭಜನೆಗೆ ಮತ ಬೇಡ!

by admin April 11, 2024
written by admin April 11, 2024 0 comments 2 minutes read
0FacebookTwitterPinterestEmail
172

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೊಡುವ ಮತ ಭ್ರಷ್ಟಾಚಾರಕ್ಕೆ ಮತ್ತು ದೇಶದ ಅಭದ್ರತೆಗೆ ನೀಡುವ ಮತವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಅವರ ಗ್ಯಾರಂಟಿಗೆ ಮತ ನೀಡುವುದರಿಂದ ಸದೃಢ, ಸುರಕ್ಷಿತ ಭಾರತದ ಆರ್ಥಿಕ ಪ್ರಗತಿಗೆ ಹಾಗೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದಿದ್ದಾರೆ.

ಎನ್‌ಡಿಎ ಅಭ್ಯರ್ಥಿಗಳಿಗೆ ಮತ ಹಾಕಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಮತ ನೀಡಿದರೆ ಆಂತರಿಕ ಸುರಕ್ಷತೆಯ ಅಪಾಯಕ್ಕೆ ನಾಂದಿಯಾಗುತ್ತದೆ, ಮತ ನೀಡುವ ಮುನ್ನ ರಾಷ್ಟ್ರದ ಭದ್ರತೆ ಮತ್ತು ಐಕ್ಯತೆಯನ್ನು ಗಮನಲ್ಲಿಟ್ಟುಕೊಂಡು ಎನ್‌ಡಿಎ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಮನವಿ ಮಾಡಿದರು.

ದೇಶ ವಿಭಜನೆಯ ಅಪಸ್ವರ ಎತ್ತುವವರನ್ನು, ಜನರನ್ನು ಭಾಷೆ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಒಡೆಯುವ ಇಂಡಿಯಾ ಮೈತ್ರಿಕೂಟವನ್ನು ಜನತೆ ಸಾರಾಸಗಟಾಗಿ ತಿರಸ್ಕರಿಸುವಂತೆ ಕೋರಿದರು.

ಮೋದಿ ಅವರು ಗ್ಯಾರಂಟಿ ನೀಡಿದರೆ ಅದು ಜಾರಿಗೆ ಬಂದೇ ಬರುತ್ತದೆ, ಪೊಳ್ಳು ಆಶ್ವಾಸನೆ ನೀಡುವ ಪ್ರಶ್ನೆಯೇ ಇಲ್ಲವಾಗಿದೆ ಎಂಬುದನ್ನು ರಾಷ್ಟ್ರದ ಜನತೆ ನಂಬಿದ್ದಾರೆ.

ಕಾಂಗ್ರೆಸ್ ಪಕ್ಷ ಸುಳ್ಳಿನ ಕಂತೆ

ಕಾಂಗ್ರೆಸ್ ಪಕ್ಷ ಸುಳ್ಳಿನ ಕಂತೆಯ ಪ್ರಣಾಳಿಕೆಯಂತೆ, ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದೆ, ಸಿದ್ದರಾಮಯ್ಯ ಸರ್ಕಾರ ಬರೀ ಗ್ಯಾರಂಟಿಯಲ್ಲೇ ಜಪ ಮಾಡಿಕೊಂಡು ಕಳೆದಿದೆ, ಇಂತಹವರಿಗೆ ಮತ ನೀಡಿ ವ್ಯರ್ಥ ಮಾಡಿಕೊಳ್ಳಬೇಡಿ ಎಂದರು.

ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಪದೇ ಪದೆ ಹರಿಹಾಯುತ್ತಲೇ ಬಂದಿದ್ದಾರೆ, ಎರಡು ಕೋಟಿ ಉದ್ಯೋಗ ಕೊಟ್ಟರಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ. 2014ರಿಂದ ಈವರೆಗೂ 7 ಕೋಟಿ ಹೊಸ ಉದ್ಯೋಗ ಸೇರ್ಪಡೆಯಾಗಿದೆ, ಎಂಎಸ್‌ಎಂಇ ಸಂಖ್ಯೆ ಕೂಡ ಹೆಚ್ಚಳವಾಗಿದೆ ಎಂದರು.

ಆರು ವಂದೇ ಭಾರತ್ ರೈಲು

ರಾಷ್ಟ್ರೀಯ ಹೆದ್ದಾರಿ 3,234 ಕಿ.ಮೀ ಬಿಜೆಪಿ ಅವಧಿಯಲ್ಲಿ ಆಗಿದೆ, ಪ್ರತಿ ದಿನ 33 ಕಿ.ಮೀ ರಸ್ತೆ ಮಾಡಲಾಗುತ್ತಿದೆ, ಕರ್ನಾಟಕದಲ್ಲಿ ರೈಲ್ವೇ ಯೋಜನೆಯನ್ನು ವಿದ್ಯುದೀಕರಣ ಮಾಡಲಾಗಿದೆ. ಆರು ವಂದೇ ಭಾರತ್ ರೈಲು ಸಂಚಾರ ಮಾಡುತ್ತಿವೆ.

ರಾಜ್ಯದ 54 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಆರು ಸಾವಿರ ರೂ. ಕೊಡಲಾಗುತ್ತಿದೆ. ಇದರೊಂದಿಗೆ ಬಿಜೆಪಿ ಅಧಿಕಾರದಲ್ಲಿದ್ದಾಗ ಹೆಚ್ಚುವರಿಯಾಗಿ ನಾಲ್ಕು ಸಾವಿರ ರೂ. ರೈತರಿಗೆ ನೀಡುತ್ತಿದ್ದೆವು, ಈಗಿನ ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿದೆ.

ಕೇಂದ್ರದ ಹತ್ತು ವರ್ಷಗಳ ಸಾಧನೆ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ, ವಿಶ್ವದ ಆರ್ಥಿಕ ಅಭಿವೃದ್ಧಿಯಲ್ಲಿ ಐದನೇ ಸ್ಥಾನದಲ್ಲಿ ಭಾರತ ಇದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ.

ಶುಕ್ರವಾರ 2ನೇ ಹಂತದ ರಣಕಹಳೆ
ಸಂವಿಧಾನ ವಿಧಿ 370 ರದ್ದು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಕೇದಾರನಾಥ ಜೀರ್ಣೋದ್ಧಾರ, ಎಕ್ಸ್‌ಪ್ರೆಸ್ ಕಾರಿಡಾರ್, ಸಂವಿಧಾನ ವಿಧಿ 370 ರದ್ದು, 21 ಲಕ್ಷ ನಿವೃತ್ತ ಯೋಧರಿಗೆ ಒಂದು ಶ್ರೇಣಿ ಒಂದು ಪೆನ್ಷನ್.

ಕೇಂದ್ರದಿಂದ ರಾಜ್ಯಕ್ಕೆ 1.85 ಲಕ್ಷ ಕೋಟಿ ರೂ. ತೆರಿಗೆ ಹಣ ಪಾವತಿಯಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಲಕ್ಷಾಂತರ ಮನೆಗೆ ನಲ್ಲಿ ನೀರು ಹರಿಸಲಾಗಿದೆ, ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೆ ತರಲಾಗಿದೆ.

ಗರೀಬ್ ಕಲ್ಯಾಣ ಯೋಜನೆ ಮೂಲಕ 70 ಲಕ್ಷ ಮೆಟ್ರಿಕ್ ಟನ್ ಆಹಾರಧಾನ್ಯ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಐಐಡಿ, ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ತೆರೆಯಲಾಗಿದೆ, ಬೆಂಗಳೂರಿನಲ್ಲಿ ಸ್ಯಾಟಲೈಟ್ ರಿಂಗ್ ರೋಡ್ ನಿರ್ಮಾಣಕ್ಕೆ ಭಾರತ್ ಮಾಲಾ ಯೋಜನೆಯಡಿ ಹಣ ಬಿಡುಗಡೆಗೆ ತಯಾರಿ ನಡೆಯುತ್ತಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್-2 ಕಾರ್ಯಾರಂಭವಾಗಿದೆ ಎಂದು ಯಡಿಯೂರಪ್ಪ ಕೇಂದ್ರದಿಂದ ರಾಜ್ಯಕ್ಕೆ ನೀಡಲಾದ ಕಾರ್ಯಕ್ರಮಗಳ ಪಟ್ಟಿ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
6 vande bharat rail to karnatakabjp blames congresbs yadiyurappamodi is the only guarenty to the nationnda
0 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 11 ಏಪ್ರಿಲ್ 2024
next post
ಶುಕ್ರವಾರ 2ನೇ ಹಂತದ ರಣಕಹಳೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ