Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಬೆಂಗಳೂರಿಗೆ ಮತ್ತೆ ಹೆಸರಘಟ್ಟ ಕೆರೆಯ ನೀರು

by admin April 14, 2024
written by admin April 14, 2024 0 comments 1 minutes read
0FacebookTwitterPinterestEmail
229
1896ರಲ್ಲಿ ಮೊದಲ ಬಾರಿಗೆ ನೀರು ಹರಿಸಿದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನ

ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896 ರಲ್ಲಿ ಅರ್ಕಾವತಿ ನದಿಯ ನೀರನ್ನು  ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೈಗೊಂಡಿದೆ.

ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು ವ್ಯವಸ್ಥೆಯನ್ನು ಹೊಂದಿದ ಎರಡನೇ ನಗರ ಬೆಂಗಳೂರು. 1873ರಲ್ಲಿ ಮೊದಲ ಬಾರಿಗೆ ಮಿಲ್ಲರ್ಸ್‌ ಟ್ಯಾಂಕ್ಸ್‌ ಎಂದು ಹೆಸರು ಪಡೆದಂತಹ ಹಲವಾರು ಕೆರೆಗಳ ಜಾಲದ ಮೂಲಕ ಬೆಂಗಳೂರು ನಗರಕ್ಕೆ ನೀರು ಪೂರೈಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು.

 1875-77 ರ ಧಾತು ಈಶ್ವರ ಕ್ಷಾಮ (Great Famine of 1875-77) ದಿಂದ ಎರಡೂವರೆ ವರ್ಷಗಳ ಕಾಲ ಮಳೆ ಇಲ್ಲದೆ ಎಲ್ಲಾ ಜಲಮೂಲಗಳೂ ಬತ್ತಿ ಹೋಗಿದ್ದವು.

ಬೆಳೆಯುತ್ತಿರುವ ನಗರದ ನೀರಿನ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅಂದಿನ ಮೈಸೂರು ರಾಜರ ದಿವಾನರಾಗಿದ್ದ ಕೆ. ಶೇಷಾದ್ರಿ ಅಯ್ಯರ್‌ ಅವರು, ಹೆಸರುಘಟ್ಟ ಕೆರೆಯ ಮೂಲಕ ಅರ್ಕಾವತಿ ನದಿಯ ನೀರನ್ನು ಬೆಂಗಳೂರಿಗೆ ಹರಿಸುವ ಚಿಂತನೆ ನಡೆಸಿದರು. ಚಾಮರಾಜೇಂದ್ರ ವಾಟರ್‌ ವರ್ಕ್ಸ್‌ ಎಂದು ಇದಕ್ಕೆ ಹೆಸರಿಡಲಾಗಿತ್ತು.

ಐತಿಹಾಸಿಕ ಕ್ಷಾಮದಿಂದ ಬಳಲಿದ್ದ ನಗರಕ್ಕೆ ನೀರು ಹರಿಸಲು ಸೋಲದೇವನಹಳ್ಳಿಯಲ್ಲಿ 1896 ರಲ್ಲಿ ಸ್ಥಾಪಿತವಾದ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಇಂದಿಗೂ ಇದಕ್ಕೆ ಸಾಕ್ಷಿಭೂತವಾಗಿ ನಿಂತಿದೆ.

ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಪುನಃಶ್ಚೇತನಗೊಳಿಸಲು ಜಲಮಂಡಳಿ ಚಿಂತನೆ

ಭೀಕರ ಕ್ಷಾಮದಿಂದ ಬಳಲಿದ್ದ ಬೆಂಗಳೂರು ನಗರಕ್ಕೆ ನೀರು ಹರಿಸಿದ್ದ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ನಿಂದ 1896 ರಲ್ಲಿ ನೀರು ಹರಿಸಿದಂತೆ ಹೆಸರಘಟ್ಟ ಕೆರೆಯಿಂದ ಮತ್ತೆ ನಗರಕ್ಕೆ ನೀರು ಹರಿಸಲು ಜಲಮಂಡಳಿ ಚಿಂತನೆ ನಡೆಸುತ್ತಿದೆ.

ಸದ್ಯ ಹೆಸರಘಟ್ಟ ಕೆರೆಯಲ್ಲಿ ಸುಮಾರು 0.3 ಟಿಎಂಸಿ ಯಷ್ಟು ನೀರು ಲಭ್ಯವಿದೆ. ಇದಕ್ಕೆ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ನಲ್ಲಿ ಅಗತ್ಯ ಟ್ರೀಟ್‌ಮೆಂಟ್‌ ನೀಡಿ, ಎಂ.ಇ.ಐ ಲೇಔಟ್‌ನಲ್ಲಿರುವ ಜಲಸಂಗ್ರಾಹಾರಕ್ಕೆ ಪಂಪ್‌ ಮಾಡಲಾಗುವುದು. ಇಲ್ಲಿನಿಂದ ಅಗತ್ಯವಿರುವಂತಹ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವುದು ಇದರ ಉದ್ದೇಶವಾಗಿದೆ.

ಏಪ್ರಿಲ್‌ 20 ರ ಒಳಗಾಗಿ ಸಿದ್ದತೆ ಪೂರ್ಣಗೊಳಿಸಲು ಸೂಚನೆ

ಇತ್ತೀಚಿಗೆ ಹೆಸರಘಟ್ಟ ಕೆರೆಗೆ ಹಾಗೂ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಗೆ ಭೇಟಿ ನೀಡಿದ್ದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಡಾ ವಿ ರಾಮ್‌ ಪ್ರಸಾತ್‌ ಮನೋಹರ್‌, 125 ವರ್ಷಗಳ ಹಿಂದಿನ ತಾಂತ್ರಿಕತೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು.

ಈ ಪಂಪಿಂಗ್‌ ಸ್ಟೇಷನ್‌ ನಲ್ಲಿರುವಂತಹ ಅನುಕೂಲತೆಗಳ ಬಗ್ಗೆ ಹಾಗೂ ನೀರು ಸರಬರಾಜಿಗೆ ಇಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಏಪ್ರಿಲ್‌ 20 ರ ಒಳಗಾಗಿ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಗಳು 10 ದಿನ ಎನ್‌ಐಎ ಕಸ್ಟಡಿಗೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
0.3 TMC water1896April 20Bangalore Water Supply and Sewerage BoardCompleteconsumptionfirst pumpedhistoricpreparationPump StationRestorationSoladevanahalli
0 FacebookTwitterPinterestEmail
admin

previous post
ದಿನಭವಿಷ್ಯ : ಭಾನುವಾರ,  14 ಏಪ್ರಿಲ್ 2024
next post
ದೇಹದ ತೂಕದ ಸಮತೋಲನಕ್ಕೆ ಶೂನ್ಯ ಮುದ್ರೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ