Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದಿಗ್ಗಜರ ಭವಿಷ್ಯ ನಾಳೆ ನಿರ್ಧಾರ!

by admin April 25, 2024
written by admin April 25, 2024 0 comments 2 minutes read
0FacebookTwitterPinterestEmail
259

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯುವರಾಜ ಯದುವೀರ ಕೃಷ್ಣದತ್ತ ಒಡೆಯರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ 247 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು ಶುಕ್ರವಾರ ಬರೆಯಲಿದ್ದಾರೆ.

ಹಳೆ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶವಿದೆ.

ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡುಕೊಂಡಿರುವುದಲ್ಲದೆ, ಈಗಾಗಲೇ ಮತಗಟ್ಟೆಗಳಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.

ಅತ್ಯಂತ ಬಿಗಿ ಭದ್ರತೆ

ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಅರೆಸೇನಾ ಪಡೆ, ನೆರೆ ರಾಜ್ಯ ಪೊಲೀಸರು ಜೊತೆಗೆ ನಮ್ಮ ಪೊಲೀಸರು ಹಾಗೂ ಹೋಂಗಾರ್ಡ್ ಸಿಬ್ಬಂದಿಯನ್ನು ಬಳಕೆ ಮಾಡಿಕೊಳ್ಳುತ್ತಿದೆ.

ಆಡಳಿತಾರೂಢ ಕಾಂಗ್ರೆಸ್ ಹಾಗೂ ಎನ್‌ಡಿಎ ಮೈತ್ರಿಕೂಟದ ಬಿಜೆಪಿ-ಜೆಡಿಎಸ್ 14 ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪ್ರತಿನಿಧಿಸುವ ಕ್ಷೇತ್ರಗಳಿಗೂ ಚುನಾವಣೆ ನಡೆಯುತ್ತಿದೆ.

ಹೊಸ ಮುಖಗಳಿಗೆ ಅವಕಾಶ

ಸಿದ್ದರಾಮಯ್ಯ ಪ್ರತಿನಿಧಿಸುವ ಮೈಸೂರು-ಕೊಡಗು, ಶಿವಕುಮಾರ್ ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಬಿಜೆಪಿ ವರಿಷ್ಠರು ಪ್ರತಿಷ್ಠೆಯಾಗಿ ತೆಗೆದುಕೊಂಡು ಎರಡೂ ಕ್ಷೇತ್ರಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದೆ.

ಮೈಸೂರು-ಕೊಡಗಿನಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಬದಲು ರಾಜಮನೆತನದ ಯುವರಾಜನಿಗೆ ಟಿಕೆಟ್ ನೀಡಿದ್ದರೆ, ಬೆಂಗಳೂರು ಗ್ರಾಮಾಂತರದಲ್ಲಿ ಹೃದಯ ತಜ್ಞ ಡಾ.ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆ.

ಈ ಎರಡೂ ಕ್ಷೇತ್ರಗಳು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರುಗಳಿಗೆ ಪ್ರತಿಷ್ಠೆಯಾಗಿದೆ. ಅವರ ಪ್ರತಿಷ್ಠೆಯನ್ನು ಬಿಜೆಪಿಯೂ ತೆಗೆದುಕೊಂಡಿದೆ. ಹೀಗಾಗಿ ರಾಜಕೀಯ ಗಂಧ-ಗಾಳಿ ಅರಿಯದ ಸಮಾಜ ಸೇವೆಯಲ್ಲಿರುವ ಅವರನ್ನು ಕರೆತಂದು ಕಣಕ್ಕಿಳಿಸಿದೆ.

ಬಿಜೆಪಿಯ ಈ ಹೊಸ ಪ್ರಯೋಗಕ್ಕೆ ನಾಳೆ ಮತದಾರರು ಯಾವ ರೀತಿ ಸ್ಪಂದಿಸುತ್ತಾರೋ ಕಾದು ನೋಡಬೇಕು.

ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ
ಕೇಂದ್ರ ರಾಜಕಾರಣಕ್ಕೆ

ರಾಜ್ಯ ರಾಜಕೀಯದಲ್ಲಿ ಇದ್ದ ಕುಮಾರಸ್ವಾಮಿ, ಕೇಂದ್ರ ರಾಜಕಾರಣಕ್ಕೆ ತೆರಳಲು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಉಡುಪಿ-ಚಿಕ್ಕಮಗಳೂರು ಪ್ರತಿನಿಧಿಸುತ್ತಿದ್ದ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರದಿಂದ ಕಣಕ್ಕಿಳಿದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇವರ ಎದುರು ಐಐಎಂನ ಪ್ರೊ.ರಾಜುಗೌಡ ಕಾಂಗ್ರೆಸ್ ಅಭ್ಯರ್ಥಿ.

ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಜಾಪುರದಿಂದ ಚಿತ್ರದುರ್ಗ ಮೀಸಲು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

ಮುಖ್ಯಮಂತ್ರಿ ಪ್ರತಿಷ್ಠೆ ಕ್ಷೇತ್ರ

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಮ್ಮ ಪುತ್ರ ಸುನೀಲ್ ಬೋಸ್ ಅವರನ್ನು ಚಾಮರಾಜನಗರ ಮೀಸಲು ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಇಳಿಸಿದ್ದಾರೆ. ವಿಶೇಷವೆಂದರೆ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರವು ಮೈಸೂರು ಜಿಲ್ಲೆಯಲ್ಲಿದ್ದರೂ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಮುಖ್ಯಮಂತ್ರಿ ಅವರಿಗೆ ಈ ಕ್ಷೇತ್ರವೂ ಪ್ರತಿಷ್ಠೆಯಾಗಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಶಿವಕುಮಾರ್ ತಮ್ಮ ಸಹೋದರ ಸುರೇಶ್ ಅವರನ್ನು ನಾಲ್ಕನೇ ಬಾರಿಗೆ ಮರು ಆಯ್ಕೆ ಬಯಸಿ ಕಣಕ್ಕಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರ ಹೊರತುಪಡಿಸಿ ಕಾಂಗ್ರೆಸ್ ಯಾವುದೂ ಖಾತೆ ತೆರೆದಿರಲಿಲ್ಲ. ಆದ್ದರಿಂದ ಬಿಜೆಪಿ ಈ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಹೊಸ ಪ್ರಯೋಗ ನಡೆಸಿದೆ.

ಇದೇ ಮೊದಲ ಬಾರಿಗೆ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಆಡಳಿತಾರೂಢ ಕಾಂಗ್ರೆಸ್ ಅನ್ನು ನೇರ ಹಣಾಹಣಿಯಲ್ಲಿ ಎದುರಿಸುತ್ತಿದೆ, ಈ ಮೈತ್ರಿಗೆ ಮತದಾರರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ನೇರ ಹಣಾಹಣಿ

ಹದಿನಾಲ್ಕು ಕ್ಷೇತ್ರಗಳಲ್ಲೂ ಮೇಲ್ನೋಟಕ್ಕೆ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ನಡುವೆಯೇ ನೇರ ಹಣಾಹಣಿ ನಡೆದಿದೆ, ಇವರಲ್ಲಿ ಮತದಾರರ ಒಲವು ಯಾರ ಕಡೆ ಇದೆ ಎಂಬುದು ನಾಳೆ ನಿರ್ಧಾರವಾಗಲಿದೆ.

ಈ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದರೂ ಜೂನ್ 4ರವರೆಗೆ ಫಲಿತಾಂಶಕ್ಕೆ ಕಾಯಬೇಕಿದೆ.

ರಾಷ್ಟ್ರೀಯ ಪಕ್ಷಗಳಿಂದ ಕಣಕ್ಕಿಳಿದಿರುವ ಅಭ್ಯರ್ಥಿಗಳ ಪಟ್ಟಿ ಇಂತಿದೆ:-

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
April 26th first phase in karnatakafromt line leadersloka sabha election - 2024political future
0 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 25 ಏಪ್ರಿಲ್ 2024
next post
ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ