Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಘಟಾನುಘಟಿಗಳ ಹಣೆಬರಹ ನಾಳೆ ನಿರ್ಧಾರ

by admin May 6, 2024
written by admin May 6, 2024 0 comments 2 minutes read
0FacebookTwitterPinterestEmail
189

ಬೆಂಗಳೂರು:ಕೇಂದ್ರದ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಸಚಿವರ ಕುಟುಂಬದ ಸದಸ್ಯರು ಕಣದಲ್ಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಾಗೂ ಅಂತಿಮ ಹಂತದ ಮತದಾನ ಮಂಗಳವಾರ (ಮೇ 7) ಜರುಗಲಿದೆ.

ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಕೇಂದ್ರದ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದ್ದು, ಹಳೆ ಮೈಸೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಅರೆಸೇನಾ ಪಡೆ ಹಾಗೂ ಹೊರ ರಾಜ್ಯದ ಪೊಲೀಸ್ ಸಿಬ್ಬಂದಿಯನ್ನು ನಾಳೆ ನಡೆಯಲಿರುವ ಲೋಕಸಭಾ ಕ್ಷೇತ್ರಗಳಿಗೆ ಸ್ಥಳಾಂತರಿಸಿದೆ.

ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಳಗಾವಿ, ಚಿಕ್ಕೋಡಿ, ವಿಜಾಪುರ, ಬಾಗಲಕೋಟೆ, ಗುಲ್ಬರ್ಗ, ಬೀದರ್, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ತಾಪಮಾನ ಕ್ಷೇತ್ರಗಳು

ಮಲೆನಾಡು ಮತ್ತು ಕರಾವಳಿ ತೀರದ ಎರಡು-ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳು ಅತಿ ತಾಪಮಾನ ಹೊಂದಿರುವ ಕ್ಷೇತ್ರಗಳಾಗಿವೆ.

ತಾಪಮಾನದ ಭಯ ಆಯೋಗಕ್ಕೂ ಕಾಡಿದೆ, ಮತದಾರರ ಅನುಕೂಲಕ್ಕಾಗಿ ಮತದಾನ ಸಮಯವನ್ನು ಒಂದು ಗಂಟೆ ವಿಸ್ತರಿಸಿ ಅನುಕೂಲ ಮಾಡಿಕೊಂಡಬೇಕೆಂಬ ಚಿಂತನೆಯಲ್ಲಿದೆ, ಆದರೆ ಇನ್ನೂ ನಿರ್ಧಾರವಾಗಿಲ್ಲ.

ಹಳೆ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಏಪ್ರಿಲ್ 26ರಂದು ಮತದಾನ ಮುಗಿಯುತ್ತಿದ್ದಂತೆ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಇತ್ತ ಗಮನ ಹರಿಸಿದರು.

ಈ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಆಡಳತಾರೂಢ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆದಿದೆ.

ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ
ಮತದಾರರ ಮನ ಗೆಲ್ಲುವ ಪ್ರಯತ್ನ

ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಅಭಿವೃದ್ಧಿ ಹಾಗೂ ಹಿಂದೂತ್ವ ಮುಂದಿಟ್ಟುಕೊಂಡು ಬಿಜೆಪಿ ಬಿರುಸಿನ ಪ್ರಚಾರ ಮಾಡಿ ಮತದಾರರ ಓಲೈಕೆಗೆ ಮುಂದಾಗಿದ್ದರೆ, ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ತಮ್ಮ ಐದು ಗ್ಯಾರಂಟಿಗಳನ್ನು ಬದಿಗಿಟ್ಟು ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಗರಣ ಹಾಗೂ ಪ್ರಧಾನಿ ಅವರನ್ನು ನಿಂದಿಸುವ ಅಸ್ತ್ರವಾಗಿಟ್ಟುಕೊಂಡು ಕಾಂಗ್ರೆಸ್ ಮತದಾರರ ಮನ ಗೆಲ್ಲುವ ಪ್ರಯತ್ನ ಮಾಡಿದೆ.

ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲುವಿನ ದಡ ಮುಟ್ಟಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ, ರಾಜ್ಯ ನಾಯಕರ ಜೊತೆಗೂಡಿ ಬಿರಿಸಿನ ಪ್ರಚಾರ ನಡೆಸಿದರು.

ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಭಗವಂತ ಖೂಬಾ ಮರು ಆಯ್ಕೆ ಬಯಸಿ ಧಾರವಾಡ ಹಾಗೂ ಬೀದರ್ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಕಮಲದ ಚಿನ್ಹೆಯಡಿ ಬೆಳಗಾವಿ ಮತ್ತು ಹಾವೇರಿಯಿಂದ ಸ್ಪರ್ಧಿಸಿದ್ದಾರೆ.

ಪ್ರಜ್ವಲ್ ಸಂಪರ್ಕ ಕಡಿತ !
ಮಕ್ಕಳ ಅದೃಷ್ಟ ಪರೀಕ್ಷೆ

ಸಿದ್ದರಾಮಯ್ಯ ಸಂಪುಟದಲ್ಲಿರುವ ಎಸ್.ಎಸ್.ಮಲ್ಲಿಕರ್ಜುನ್ ತಮ್ಮ ಪತ್ನಿಯನ್ನು ದಾವಣಗೆರೆಯಿಂದ ಕಣಕ್ಕಿಳಿಸಿದ್ದರೆ, ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ಈಶ್ವರ್ ಖಂಡ್ರೆ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಮಕ್ಕಳನ್ನು ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆ ನಡೆಸಿದ್ದಾರೆ.

ರಾಜ್ಯ ಮೊದಲ ಹಂತಕ್ಕಿಂತ ಎರಡನೇ ಹಂತದಲ್ಲಿ ಘಟಾನುಘಟಿಗಳು ಕಣದಲ್ಲಿರುವುದರಿಂದ ಹೆಚ್ಚು ಮತದಾನ ಆಗುವ ನಿರೀಕ್ಷೆ ಇದೆ. ಆದರೆ ಸುಡು ಬಿಸಿಲು ಇದಕ್ಕೆ ಹೇಗೆ ಅವಕಾಶ ಮಾಡಿಕೊಡುತ್ತದೆ ಎಂದು ಕಾದು ನೋಡಬೇಕು.

ಘಟಾನುಘಟಿಗಳೂ ಸೇರಿದಂತೆ ಒಟ್ಟು 227 ಮಂದಿ ಕಣದಲ್ಲಿದ್ದು ಇವರ ರಾಜಕೀಯ ಭವಿಷ್ಯವನ್ನು 2,59,17,493 ಮತದಾರರು ನಿರ್ಧರಿಸಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
karnataka second phaseloka sabha election 2024May 7th votingvoters will decide the political future of the candidates
0 FacebookTwitterPinterestEmail
admin

previous post
ಸಿದ್ದು ಕಿವಿಗೆ ಬಿದ್ದ ರಹಸ್ಯವೇನು?
next post
ಪ್ರಜ್ವಲ್ ಸಂಪರ್ಕ ಕಡಿತ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ