Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬರ ನಿರ್ವಹಣೆ: ಅಧಿಕಾರಿಗಳ ಜೊತೆ ಅನೌಪಚಾರಿಕ ಸಭೆ

by KM Shivaraju May 16, 2024
written by KM Shivaraju May 16, 2024 0 comments 1 minutes read
0FacebookTwitterPinterestEmail
452

ಬೆಂಗಳೂರು:ಬರ ನಿರ್ವಹಣೆ ಹಾಗೂ ಕಾನೂನು ಪರಿಸ್ಥಿತಿ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅನೌಪಚಾರಿಕ ಸಭೆ ಕರೆದಿದ್ದಾರೆ.

ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಅಡಿ ಮುಖ್ಯಮಂತ್ರಿ ಅವರು, ಯಾವುದೇ ಸರ್ಕಾರಿ ಮಟ್ಟದ ಸಭೆ ಕರೆಯಲಾಗದ ಕಾರಣ ಮುಖ್ಯಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಈ ಅನೌಪಚಾರಿಕ ಸಭೆ ಕರೆದಿದ್ದಾರೆ.

ಮುಂಗಾರು ಮಳೆ ತಡ

ಮುಂಗಾರು ಮಳೆ ತಡವಾಗಿರುವುದರಿಂದ ರಾಜ್ಯದೆಲ್ಲೆಡೆ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಅಗಾಧವಾಗಿ ಕಾಡಿದೆ.

ಮತ್ತೊಂದೆಡೆ ಸಣ್ಣ-ಪುಟ್ಟ ಕಾರಣಗಳಿಗಾಗಿ ಹೆಣ್ಣು ಮಕ್ಕಳ ಕೊಲೆ ನಡೆಯುತ್ತಿದೆ, ಚುನಾವಣಾ ನೆಪ ಮುಂದೊಡ್ಡಿ ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳದಿರುವುದರಿಂದ ಸಮಸ್ಯೆಗಳು ದಿನೇ ದಿನೇ ಉಲ್ಬಣಗೊಳ್ಳುತ್ತಿವೆ.

ಬರ ಪರಿಹಾರ ನಿರ್ವಹಣೆ ಹಾಗೂ ತುರ್ತು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಅವರು ಚುನಾವಣಾ ಆಯೋಗಕ್ಕೆ ಬರೆದ ಪತ್ರಕ್ಕೆ ಸಮ್ಮತಿ ದೊರೆತಿಲ್ಲ.

ಮುಖ್ಯಕಾರ್ಯದರ್ಶಿ ಅಧ್ಯಕ್ಷತೆ ಸಭೆ

ಈ ಕಾರಣಕ್ಕಾಗಿ ಮುಖ್ಯಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲೇ ವಿಧಾನಸೌಧದಲ್ಲಿ ಇಲಾಖಾ ಪ್ರಧಾನಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಆಯ್ದ ಸಚಿವರ ಸಭೆಯನ್ನು ಕರೆಯಲಾಗಿದೆ.

ಬರ ಹಾಗೂ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸಲಹೆ ನೀಡುವ ಮುಖ್ಯಮಂತ್ರಿ ಅವರು, ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಲಿದ್ದಾರೆ.

ಪ್ರಸಕ್ತ ಮುಂಗಾರು ಮೇ 30ರಂದು ಕೇರಳ ಪ್ರವೇಶಸಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

ಇನ್ನು 15 ದಿನಗಳ ಕಾಲ ಮಳೆ ಬೀಳದಿದ್ದರೆ ಕುಡಿಯುವ ನೀರು ಹಾಗೂ ಮೇವಿಗೆ ಭಾರೀ ತೊಂದರೆಯಾಗುತ್ತದೆ, ಇತ್ತ ಗಮನ ಹರಿಸಿ ಎಂದು ತಿಳಿಸಲಿದ್ದಾರೆ.

ಕೈಗೆ ಬಂದ ತುತ್ತು ರೈತನ ಬಾಯಿಗಿಲ್ಲ
ಕಾನೂನು ಸುವ್ಯವಸ್ಥೆಗೆ ಬಿಗಿ ಕ್ರಮ

ಕಾನೂನು ಸುವ್ಯವಸ್ಥೆ ಬಗ್ಗೆ ಬಿಗಿ ಕ್ರಮ ಕೈಗೊಳ್ಳಿ, ಸಣ್ಣ-ಪುಟ್ಟ ಕಾರಣಗಳಿಗೆ ಕೊಲೆಗಳು ನಡೆಯುತ್ತಿವೆ, ಇದನ್ನು ಹತ್ತಿಕ್ಕಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ.

ಕಳೆದ ಮುಂಗಡಪತ್ರದಲ್ಲಿ ಪ್ರಕಟಗೊಂಡಿರುವ ಕಾರ್ಯಕ್ರಮಗಳ ಅನುಷ್ಟಾನಕ್ಕೆ ಸಿದ್ಧತೆ ಮಾಡಿಕೊಳ್ಳಿ, ಚುನಾವಣಾ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಆದೇಶಗಳು ಹೊರಬಂದು ಯುದ್ಧೋಪಾದಿಯಲ್ಲಿ ಕೆಲಸ ಮಾಡಲು ಸಜ್ಜಾಗಿ ಎಂದು ಹಿರಿಯ ಅಧಿಕಾರಿಗಳಿಗೆ ತಿಳಿಸಲಿದ್ದಾರೆ.

ನಾವು ಯಾವುದೇ ಆದೇಶ ಮತ್ತು ಸಲಹೆಗಳನ್ನು ಈ ಸಮಯದಲ್ಲಿ ನೀಡಲು ಸಾಧ್ಯವಿಲ್ಲ, ಆದರೆ, ನೀವು, ನಿಮ್ಮ ಇತಿಮಿತಿಯಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಲು ಅವಕಾಶವಿದೆ.

ಬರದಿಂದ ತತ್ತರಿಸಿರುವ ಗ್ರಾಮೀಣ ಭಾಗದ ಕಡೆ ಗಮನ ಹರಿಸಿ, ಕೇಂದ್ರದಿಂದ ಬಿಡುಗಡೆಯಾಗಿರುವ ಬೆಳೆ ಪರಿಹಾರದ ಹಣ ಎಲ್ಲಾ ರೈತರ ಖಾತೆಗೆ ತಲುಪಿದೆಯೇ ಎಂಬ ಮಾಹಿತಿ ಪಡೆದುಕೊಳ್ಳುವಂತೆಯೂ ಸೂಚಿಸಲಿದ್ದಾರೆ.

ನಾಳಿನ ಸಭೆಗೆ ಅಧಿಕಾರಿಗಳಲ್ಲದೆ, ಕಂದಾಯ, ಕೃಷಿ, ಪೌರಾಡಳಿತ, ಗೃಹ, ನಗರಾಭಿವೃದ್ಧಿ, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವರಲ್ಲದೆ, ಸಂಪುಟದ ಹಿರಿಯ ಸಹೋದ್ಯೋಗಿಗಳಿಗೂ ಬರುವಂತೆ ಆಹ್ವಾನಿಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
drinking water and fodder croplaw and ordermonsoon delay - officers meetsiddaramaiah calls officers meeting
0 FacebookTwitterPinterestEmail
KM Shivaraju

previous post
ಕೈಗೆ ಬಂದ ತುತ್ತು ರೈತನ ಬಾಯಿಗಿಲ್ಲ
next post
ಪದೇ ಪದೇ ಕೊಲೆಗಳಿಂದ ಆತಂಕ ಸೃಷ್ಠಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ