Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಪಂಚಾಯತ್, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಿರ್ಧಾರ

by admin May 23, 2024
written by admin May 23, 2024 0 comments 2 minutes read
0FacebookTwitterPinterestEmail
426

ಸಚಿವರ ಔತಣಕೂಟ ಸಭೆಯಲ್ಲಿ ಪಂಚಾಯತ್ ಮೀಸಲಾತಿ ಬಗ್ಗೆ ಚರ್ಚೆ

ಬೆಂಗಳೂರು: ಭಕ್ತವತ್ಸಲ ಹಾಗೂ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ವರದಿಯ ಆಧಾರದ ಮೇಲೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಮೀಸಲಾತಿ ನಿಗದಿಪಡಿಸಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ತಮ್ಮ ಮನೆಯಲ್ಲಿ ಸಚಿವರುಗಳಿಗೆ ಏರ್ಪಡಿಸಿದ್ದ ಔತಣಕೂಟದ ಸಭೆಯಲ್ಲಿ ಈ ತೀರ್ಮಾನಕ್ಕೆ ಬಂದಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರುಗಳು ನೀಡಿರುವ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಚುನಾವಣೆಗೆ ಅನುಮತಿ ಕೋರುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಸೇರಿದಂತೆ ಉಳಿದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ ಪಕ್ಷವನ್ನು ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲು ಸಭೆ ತೀರ್ಮಾನಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ನಂತರದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆ ಚರ್ಚೆ ಮಾಡಿದೆ.
ಪೆನ್‌ಡ್ರೈವ್ ಹಾಗೂ ಪ್ರಜ್ವಲ್ ವಿಷಯದಲ್ಲಿ ಕೇಂದ್ರ, ರಾಜ್ಯವನ್ನು ಇಕ್ಕಟ್ಟಿಗೆ ಸಿಲುಕಿಸಬಹುದು ಈ ಬಗ್ಗೆ ಎಚ್ಚರದಿಂದ ನಡೆ ಇಡಬೇಕು.
ಪೆನ್‌ಡ್ರೈವ್ ಸರ್ಕಾರಕ್ಕೆ ಇರುಸು-ಮುರುಸು ಉಂಟು ಮಾಡಿದೆ ಎಂಬ ಕೆಲವು ಸಚಿವರ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಉಪಮುಖ್ಯಮಂತ್ರಿ, ಯಾರೋ ಮಾಡಿದ್ದಕ್ಕೂ ನಮಗೂ ಸಂಬಂಧವಿಲ್ಲ.
ಮುಳುಗಿ ಹೋಗಿದ್ದ ಜೆಡಿಎಸ್ ಪೆನ್‌ಡ್ರೈವ್ ಮುಂದಿಟ್ಟುಕೊಂಡು ಮತ್ತೆ ತನ್ನ ಸ್ಥಾನ ಉಳಿಸಿಕೊಳ್ಳಲು ಹೊರಟಿದೆ. ಆದರೆ ನಾವು ಪ್ರಜ್ವಲ್ ಪ್ರಕರಣವನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲೇಬೇಕು, ಆತನಿಗೆ ಶಿಕ್ಷೆ ಕೊಡಿಸಲೇಬೇಕು.
ಎಚ್.ಡಿ.ಕುಮಾರಸ್ವಾಮಿ ಪೆನ್‌ಡ್ರೈವ್ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದು, ಇದನ್ನು ನಾವು ನಿರ್ಲಕ್ಷ್ಯ ಮಾಡಬಾರದು. ಬಹಳ ಎಚ್ಚರಿಕೆಯಿಂದ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಲವು ಸಚಿವರು ಕಿವಿಮಾತು ಹೇಳಿದ್ದಾರೆ.
ಇತ್ತೀಚೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಬಗ್ಗೆ ಅವಲೋಕನ ಮಾಡಿರುವ ಸಭೆ ಕನಿಷ್ಠ 15 ರಿಂದ 18 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ.
ಗ್ಯಾರಂಟಿ ನಮಗೆ ಕೈಹಿಡಿದಿರುವ ಜೊತೆಗೆ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗ, ಅದರಲ್ಲೂ ಮಹಿಳೆಯರು ನಮ್ಮ ಪಕ್ಷಕ್ಕೆ ಒಲವು ತೋರಿರುವುದರಿಂದ ನಮಗೆ 18 ಸ್ಥಾನ ಲಭ್ಯವಾಗಲಿದೆ ಎಂಬ ಮಾಹಿತಿ ಇದೆ ಎಂದು ಸಿದ್ದರಾಮಯ್ಯ ಸಭೆಗೆ ತಿಳಿಸಿದ್ದಾರೆ.
ಅಷ್ಟೇ ಅಲ್ಲ, ಯಾವ ಯಾವ ಕ್ಷೇತ್ರಗಳು ನಮ್ಮ ಪಾಲಿಗೆ ದೊರೆಯಲಿವೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ, ಬಹುತೇಕ ಬೇರೆಲ್ಲಾ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಸಚಿವರು ತಮ್ಮ ತಮ್ಮ ಕ್ಷೇತ್ರಗಳ ವರದಿಯನ್ನು ನೀಡಿದ್ದಾರೆ. ಜತೆಗೆ ಬಿಜೆಪಿ-ಜೆಡಿಎಸ್ ಚುನಾವಣೆಯಲ್ಲಿ ಹೇಗೆ ಸಂಘಟಿತ ಹೋರಾಟ ನಡೆಸಿತು ಎಂಬ ಮಾಹಿತಿಯನ್ನೂ ಮುಖ್ಯಮಂತ್ರಿ ಅವರು ಪಡೆದುಕೊಂಡರು.
ಫಲಿತಾಂಶ ಹೊರಬಂದ ನಂತರ ಉಳಿದ ಎಲ್ಲಾ ನಿಗಮ-ಮಂಡಳಿಗಳಿಗೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ನೇಮಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗೋಣ ಎಂದಿದ್ದಾರೆ.
ಇನ್ನು ವಿಧಾನಸಭೆಯಿಂದ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಕುರಿತಂತೆ ಪ್ರಾಥಮಿಕ ಚರ್ಚೆ ನಡೆದಿದೆ.
ಪಕ್ಷಕ್ಕೆ 11 ರಲ್ಲಿ ಏಳು ಸ್ಥಾನಗಳು, ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಂದ ತೆರವಾದ ಮತ್ತೊಂದು ಸ್ಥಾನ ದೊರೆಯಲಿದ್ದು, ಇವಕ್ಕೆ ಪಕ್ಷ ಸಂಘಟನೆಗೆ ದುಡಿದವರು ಹಾಗೂ ಹೊರಗಿದ್ದುಕೊಂಡು ಪಕ್ಷಕ್ಕೆ ದುಡಿದವರಿಗೆ ಅವಕಾಶ ಮಾಡಿಕೊಡೋಣ ಎಂದಿದ್ದಾರೆ.
ಚರ್ಚೆ ಸಂದರ್ಭದಲ್ಲಿ ಇಂತಹವರಿಗೆ ಅವಕಾಶ ಕೊಡಲೇಬೇಕೆಂಬ ಒಮ್ಮತದ ಧ್ವನಿಯೂ ಕೇಳಿಬಂದಿದೆ.
ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಶಿವಕುಮಾರ್, ರಾಜ್ಯ ಉಸ್ತುವಾರಿ ಹೊಣೆ ಹೊತ್ತ ರಣದೀಪ್ ಸಿಂಗ್ ಸುರ್ಜೇವಾಲ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಭೆ ಕರೆದಿದ್ದಾರೆ.
ಪಕ್ಷದ ಮುಖಂಡರುಗಳು ಅಂದಿನ ಸಭೆಯಲ್ಲಿ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ವರಿಷ್ಠರ ಅನುಮೋದನೆಗೆ ಕಳುಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
decisionelections Discussionlocal bodyministerial dinner meetingPanchayatpanchayat reservation
0 FacebookTwitterPinterestEmail
admin

previous post
ಪರಿಷತ್ ಚುನಾವಣೆ ಟಿಕೆಟ್‌ಗೆ ಭಾರೀ ಪೈಪೋಟಿ
next post
ಸಾಂಕ್ರಾಮಿಕ ಕಾಣಿಸಿಕೊಂಡರೆ ಅಧಿಕಾರಿಗಳೇ ಜವಾಬ್ದಾರಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ