Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ಕೊನೆಗೂ ರಾಷ್ಟ್ರಕ್ಕೆ ವಾಪಸ್

by admin May 30, 2024
written by admin May 30, 2024 0 comments 2 minutes read
0FacebookTwitterPinterestEmail
255

ಬೆಂಗಳೂರು:ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ರಾಷ್ಟ್ರಕ್ಕೆ ಹಿಂತಿರುಗಲಿದ್ದಾರೆ.

ಜರ್ಮನಿಯ ಮ್ಯೂನಿಚ್‌ನಿಂದ ಭಾರತೀಯ ಕಾಲಮಾನ 4 ಗಂಟೆ 30 ನಿಮಿಷಕ್ಕೆ ಲುಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್ ಹೊರಟು ನೇರವಾಗಿ ಮುಂಜಾನೆ 00.30ಕ್ಕೆ ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ನ್ಯಾಯಾಧೀಶರ ಮುಂದೆ ಹಾಜರಿ

ನಗರಕ್ಕೆ ಧಾವಿಸುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು, ವೈದ್ಯಕೀಯ ತಪಾಸಣೆ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ರಾಜ್ಯದಲ್ಲಿ ನಡೆದ ಮೊದಲ ಹಂತದ ಹಾಸನ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೂ ಆಗಿರುವ ಪ್ರಜ್ವಲ್ ಮತದಾನ ಮುಗಿಸಿಕೊಂಡು ಅಂದು ರಾತ್ರಿಯೇ ವಿದೇಶಕ್ಕೆ ತೆರಳಿದ್ದರು.

ಅವರು ವಿದೇಶಕ್ಕೆ ತೆರಳಿದ ಎರಡು ದಿನಗಳ ನಂತರ ಲೈಂಗಿಕ ದೌರ್ಜನ್ಯ, ಅಪಹರಣ, ಬೆದರಿಕೆ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಎಸ್‌ಐಟಿ ರಚನೆ ಮಾಡಲಾಯಿತು.

ಪ್ರಜ್ವಲ್ ಬಂಧನಕ್ಕೆ ಜನಪರ ಸಂಘಟನೆಗಳ ಆಗ್ರಹ
ರಾಷ್ಟ್ರಾದ್ಯಂತ ತಲ್ಲಣ

ಇದೇ ವೇಳೆಗೆ ಅವರ ಲೈಂಗಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೆನ್‌ಡ್ರೈವ್ ಹಾಗೂ ಸಿಡಿಗಳು ಇಡೀ ಹಾಸನ ಜಿಲ್ಲೆಯಾದ್ಯಂತ ಹರಿದಾಡಿ ರಾಜ್ಯವಷ್ಟೇ ಅಲ್ಲದೆ ರಾಷ್ಟ್ರಾದ್ಯಂತ ತಲ್ಲಣ ಉಂಟು ಮಾಡಿತ್ತು.

ಎಸ್‌ಐಟಿ ನೋಟಿಸ್ ಜಾರಿಗೊಳಿಸಿದ ನಂತರ ತಮ್ಮ ವಕೀಲರ ಮೂಲಕ ಉತ್ತರ ನೀಡಿದ್ದರಾದರೂ, ಅದರ ಮುಂದೆ ಅವರು ಹಾಜರಾಗಲಿಲ್ಲ.

ತಾತ, ದೇವೇಗೌಡರು, ಮಾಡಿದ ಮನವಿ ಹಾಗೂ ವಕೀಲರ ಸಲಹೆಯಂತೆ ಪ್ರಜ್ವಲ್ ರಾಷ್ಟ್ರಕ್ಕೆ ಹಿಂತಿರುಗುವ ಹಾಗೂ ಎಸ್‌ಐಟಿ ಮುಂದೆ ಹಾಜರಾಗುವ ತೀರ್ಮಾನವನ್ನು ವಿಡಿಯೊ ಸಂದೇಶದ ಮೂಲಕ ತಿಳಿಸಿದರು.

ನಿರೀಕ್ಷಣಾ ಜಾಮೀನಿಗೆ ಅರ್ಜಿ

ರಾಷ್ಟ್ರಕ್ಕೆ ಹಿಂತಿರುಗುತ್ತಿದ್ದಂತೆ ತಮ್ಮನ್ನು ಬಂಧಿಸಬಹುದೆಂಬ ಆಲೋಚನೆಯಿಂದ ಪ್ರಜ್ವಲ್, ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಪ್ರಜ್ವಲ್ ಪರ ವಕೀಲರು ಬುಧವಾರವೇ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ಮನವಿ ಮಾಡಿದರೂ ನ್ಯಾಯಾಲಯ ಮೇ 31ಕ್ಕೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಪ್ರಜ್ವಲ್ 36 ದಿನಗಳ ನಂತರ ನಗರಕ್ಕೆ ಹಿಂತಿರುಗುತ್ತಿದ್ದಾರೆ.

ಪ್ರಜ್ವಲ್ ಬಂಧನಕ್ಕಾಗಿ ಎಸ್‌ಐಟಿ ಎಲ್ಲಾ ರೀತಿಯ ಕಾನೂನನ್ನು ಬಳಕೆ ಮಾಡಿದ್ದರೂ ಅವರನ್ನು ಗುರುತಿಸಿ ಕರೆತರಲು ಸಾಧ್ಯವಾಗಿರಲಿಲ್ಲ.

ಸ್ವತಃ ಮುಖ್ಯಮಂತ್ರಿ ಅವರೇ ಪ್ರಧಾನಿ ಅವರಿಗೆ ಎರಡು ಬಾರಿ ಪತ್ರ ಬರೆದು ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸುವಂತೆ ಮನವಿ ಮಾಡಿದ್ದರು.

ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಗಡುವು
ವಿದೇಶಾಂಗ ಇಲಾಖೆಗೆ ಪತ್ರ

ಇದಕ್ಕೆ ಪ್ರಧಾನಿ ಕಾರ್ಯಾಲಯ ಸ್ಪಂದಿಸಲಿಲ್ಲ, ಕಾನೂನು ರೀತ್ಯಾ ತನಿಖಾಧಿಕಾರಿಗಳು ವಿದೇಶಾಂಗ ಇಲಾಖೆಗೆ ಪತ್ರ ಬರೆದ ನಂತರವೇ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭಗೊಂಡಿತು.

ಪ್ರಜ್ವಲ್ ಅವರ ಪ್ರಸಕ್ತ ಲೋಕಸಭಾ ಅವಧಿ ಪೂರ್ಣಗೊಳ್ಳುವ ಸಮಯ ಬಂದಿದ್ದರಿಂದ ಅವರಿಗೆ ನೀಡಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ಕೂಡ ರದ್ದಾಗುತ್ತಿತ್ತು.

ಇದೆಲ್ಲವನ್ನು ಅರಿತ ಪ್ರಜ್ವಲ್ ಕಡೆಗೂ ದೇಶಕ್ಕೆ ಹಿಂತಿರುಗಿ ಎಸ್‌ಐಟಿಗೆ ಶರಣಾಗಿ ಕಾನೂನು ಹೋರಾಟ ಮಾಡುವ ತೀರ್ಮಾನ ಕೈಗೊಂಡರು.

ಮುಖ್ಯಮಂತ್ರಿ ಮನೆಗೆ ಬಿಜೆಪಿ ಮುತ್ತಿಗೆ ಯತ್ನ
ಹಿರಿಯ ಅಧಿಕಾರಿಗಳ ಸಮಾಲೋಚನೆ

ಪ್ರಜ್ವಲ್ ನಗರಕ್ಕೆ ಹಿಂತಿರುಗುವುದು ಖಚಿತವಾಗುತ್ತಿದ್ದಂತೆ ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಸಮಾಲೋಚನಾ ಸಭೆ ಮುಗಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳ ತಂಡ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟು, ವಿಮಾನ ನಿಲ್ದಾಣದ ಅಧಿಕಾರಿಗಳು, ಭದ್ರತಾ ಹಾಗೂ ವಲಸೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.

ಪ್ರಜ್ವಲ್ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿಕೊಂಡು ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಈಗಾಗಲೇ ರಾಷ್ಟ್ರದ ಎಲ್ಲಾ ವಿಮಾನ ನಿಲ್ದಾಣಗಳಿಗೆ ಸಂದೇಶ ರವಾನೆ ಮಾಡಿತ್ತು.

ಸಂದೇಶದ ರವಾನೆ ಹಿನ್ನೆಲೆಯಲ್ಲಿ ಪ್ರಜ್ವಲ್ ರಾಷ್ಟ್ರದ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೂ ಅವರನ್ನು ವಲಸೆ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯಲಿದ್ದಾರೆ.

ಆದರೆ, ಪ್ರಜ್ವಲ್ ಮ್ಯೂನಿಚ್‌ನಿಂದ ನೇರವಾಗಿ ನಗರಕ್ಕೆ ಧಾವಿಸುತ್ತಿರುವುದರಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್‌ಐಟಿ ತನ್ನ ವಶಕ್ಕೆ ಪಡೆಯಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
36 day drama overprajval coming back to INDIASIT will take over him
0 FacebookTwitterPinterestEmail
admin

previous post
ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಗಡುವು
next post
ವಾಲ್ಮೀಕಿ ನಿಗಮ ಹಣ ಅಕ್ರಮ ವರ್ಗಾವಣೆ ಸಿಬಿಐ ತನಿಖೆಗೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ