Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಾಲುಗಟ್ಟಿ ನಿಂತ ಸಚಿವ ಆಕಾಂಕ್ಷಿಗಳು

by KM Shivaraju June 5, 2024
written by KM Shivaraju June 5, 2024 0 comments 1 minutes read
0FacebookTwitterPinterestEmail
284

ಬೆಂಗಳೂರು:ನರೇಂದ್ರ ಮೋದಿ ಹೊಸ ಸರ್ಕಾರ ರಚನೆಗೆ ಮುಂದಾಗಿರುವ ಬೆನ್ನಲ್ಲೇ ಅವರ ಸಂಪುಟ ಸೇರ್ಪಡೆಗೆ ರಾಜ್ಯದ ಎನ್‌ಡಿಎ ಸಂಸದರು ಸಾಲುಗಟ್ಟಿ ನಿಂತಿದ್ದಾರೆ.

ಕರ್ನಾಟಕದಿಂದ ಇಬ್ಬರು ಜೆಡಿಎಸ್ ಸದಸ್ಯರು ಸೇರಿ ಎನ್‌ಡಿಎನ 19 ಸದಸ್ಯರು ಆಯ್ಕೆಗೊಂಡಿದ್ದಾರೆ.

ಇವರಲ್ಲಿ ಇಬ್ಬರು ಕೇಂದ್ರ ಸಚಿವರು, ಮೂವರು ಮಾಜಿ ಮುಖ್ಯಮಂತ್ರಿಗಳು, ಏಳನೇ ಬಾರಿಗೆ ಲೋಕಸಭೆ ಪ್ರವೇಶಿಸಿರುವ ರಮೇಶ್ ಜಿಗಜಿಣಗಿ ಹಾಗೂ ಸತತ ನಾಲ್ಕು ಭಾರಿ ಸಂಸತ್ ಪ್ರವೇಶಿಸಿದವರು ನಾಲ್ಕು ಮಂದಿ ಇದ್ದಾರೆ.

ಮತ್ತೆ ಸಚಿವರಾಗುವರೇ

ಪ್ರಲ್ಹಾದ್ ಜೋಷಿ ಮತ್ತು ಶೋಭಾ ಕರಂದ್ಲಾಜೆ ಅವರು, ಮೋದಿ ಅವರ ಹಾಲಿ ಸಂಪುಟದಲ್ಲಿ ಇದ್ದವರು, ಅವರು ಮತ್ತೆ ಸಚಿವರಾಗಿ ಮುಂದುವರೆಯಲು ಬಯಸುತ್ತಾರೆ.

ಕೇಂದ್ರದಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಮೂರರಿಂದ ನಾಲ್ಕು ಸ್ಥಾನ ಸಿಗುತ್ತಾ ಬಂದಿದೆ.

ಆದರೆ ಈ ಬಾರಿ ಬಿಜೆಪಿ, ಕಳೆದ ಬಾರಿಗಿಂತ 60 ಸ್ಥಾನ ಕಡಿಮೆ ಇದೆ, ಅಲ್ಲದೆ, ಎನ್‌ಡಿಎ ಕೂಟಕ್ಕೆ ಎರಡು ಪ್ರಬಲ ಪಕ್ಷಗಳು ಕೈಜೋಡಿಸಿರುವುದರಿಂದ ಪ್ರಧಾನಿ ಅವರು, ಕೂಟದ ಮಿತ್ರರಿಗೆ ಅವಕಾಶ ಮಾಡಿಕೊಡಬೇಕಾಗುತ್ತದೆ.

ಎನ್‌ಡಿಎ ಸರ್ಕಾರ ರಚನೆ ಕಸರತ್ತು
ಮಾಜಿ ಮುಖ್ಯಮಂತ್ರಿಗಳು

ಸಹಜವಾಗಿ ಬಿಜೆಪಿಯಿಂದ ಆಯ್ಕೆಗೊಂಡಿರುವ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಮಂತ್ರಿಯಾಗಲು ಆಸಕ್ತಿ ಹೊಂದಿದ್ದಾರೆ.

ಇದರ ಜೊತೆಗೆ ತಮ್ಮ ಮಿತ್ರ ಪಕ್ಷವಾದ ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಒಂದು ಅವಕಾಶ ಕಲ್ಪಿಸಬಹುದು.

ಇದಲ್ಲದೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ, ಪಿ.ಸಿ.ಗದ್ದಿಗೌಡರ್, ಪಿ.ಸಿ.ಮೋಹನ್ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.

ಬಂಧನ ಭೀತಿಯಲ್ಲಿ ಸಚಿವ ನಾಗೇಂದ್ರ
ಜಿಗಜಿಣಗಿ ಏಳನೇ ಬಾರಿ ಆಯ್ಕೆ

ಇನ್ನು ಜಿಗಜಿಣಗಿ ಸತತವಾಗಿ ಏಳನೇ ಬಾರಿಗೆ ವಿಜಾಪುರ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡಿದ್ದಾರೆ.

ಡಾ.ಮಂಜುನಾಥ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮುನ್ನ ಅವರಿಗೆ ಒಳ್ಳೆ ಉತ್ತಮ ಸ್ಥಾನ ನೀಡುವುದಾಗಿ ಪ್ರಧಾನಿ ಅವರೇ ಭರವಸೆ ನೀಡಿದ್ದರಂತೆ.

ಇದರ ನಡುವೆ ಪಕ್ಷದ ಹಿರಿಯ ನಾಯಕ ವಿ.ಸೋಮಣ್ಣ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ್ ಮಂತ್ರಿಯಾಗುವ ಇಚ್ಛೆ ಹೊಂದಿದ್ದಾರೆ.

ಸ್ಥಳೀಯ ನಾಯಕರ ಪ್ರತಿಷ್ಠೆಯಿಂದ ಸೋತಿದ್ದೇವೆ
ಅರ್ಹತೆ ಇರುವವರು ಮಂತ್ರಿ

ಯಾರು ಎಷ್ಟೇ ಪ್ರಯತ್ನ ಮಾಡಿದರೂ ರಾಜ್ಯ ಬಿಜೆಪಿ ಘಟಕ, ಸಂಘ ಪರಿವಾರ ಹಾಗೂ ಅವರ ಹಿನ್ನೆಲೆಯನ್ನು ಗಮನಿಸಿ, ಅರ್ಹತೆ ಇರುವವರಿಗೆ ಮಂತ್ರಿ ಮಾಡುತ್ತಾರೆ.

ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಸರ್ಕಾರ ರಚನೆಗೆ ಎನ್‌ಡಿಎ ಮೈತ್ರಿಕೂಟ ಸಭೆ ಸೇರಿ ಸಿದ್ಧತೆ ಮಾಡಿಕೊಂಡಿದೆ.

ಎನ್‌ಡಿಎ ಕೂಟದ ಸಭೆಗೂ ಮುನ್ನ ಮೋದಿ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಹೊಸ ಸರ್ಕಾರ ರಚನೆಗೆ ಕಾರ್ಯತಂತ್ರ ನಡೆಸುತ್ತಿರುವ ಬೆನ್ನಲ್ಲೇ ಸಚಿವರಾಗಲು ರಾಜ್ಯದ ಬಿಜೆಪಿ ಸದಸ್ಯರು ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central cabinet aspirantsnarendra modi will chooseNDA loka sabha members from karnataka
0 FacebookTwitterPinterestEmail
KM Shivaraju

previous post
ಬಂಧನ ಭೀತಿಯಲ್ಲಿ ಸಚಿವ ನಾಗೇಂದ್ರ
next post
ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆಗ್ರಹ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ