Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶಾಸಕರು ಬಾಯಿ ಮುಚ್ಚಿಕೊಂಡಿರಬೇಕು !

by admin June 10, 2024
written by admin June 10, 2024 0 comments 1 minutes read
0FacebookTwitterPinterestEmail
272

ಬೆಂಗಳೂರು:ಲೋಕಸಭಾ ಚುನಾವಣೆ ಸೋಲಿನ ಬಗ್ಗೆ ಶಾಸಕರು ಮಾತನಾಡದೆ ಮರ್ಯಾದೆಯಿಂದ ಬಾಯಿ ಮುಚ್ಚಿಕೊಂಡು ಇರುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಜನರು ತೀರ್ಪು ಕೊಟ್ಟಿದ್ದಾರೆ, ಅದನ್ನು ಸ್ವೀಕರಿಸಲೇಬೇಕು, ತೀರ್ಪಿನ ಮೇಲೆ ಸಾರ್ವಜನಿಕವಾಗಿ ಪರಾಮರ್ಶೆ ಮಾಡುವುದರಿಂದ ಯಾವುದೇ ಲಾಭವಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಶಾಸಕರು ಮತ್ತು ಮುಖಂಡರು ಚುನಾವಣಾ ಫಲಿತಾಂಶದ ಬಗ್ಗೆ ಅನಗತ್ಯ ಹೇಳಿಕೆ ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಸಾರ್ವಜನಿಕವಾಗಿ ಮಾತನಾಡಬಾರದು

ಇನ್ನು ಮುಂದೆ ಈ ವಿಷಯವಾಗಿ ಯಾರೂ ಸಾರ್ವಜನಿಕವಾಗಿ ಮಾತನಾಡಬಾರದೆಂದು ಮನವಿ ಮಾಡಿಕೊಳ್ಳುತ್ತೇನೆ.

ನಾವು ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳ ಪೈಕಿ 14 ರಿಂದ 15 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು, ಆದರೆ ಕಾರಣಾಂತರಗಳಿಂದ ಇದು ಸಾಧ್ಯವಾಗಲಿಲ್ಲ, ಜನ ತೀರ್ಪು ನೀಡಿದ್ದಾರೆ.

ಸೋಲಿನ ಬಗ್ಗೆ ವಿಮರ್ಶೆ ಮಾಡಿ ವರದಿ ನೀಡುವಂತೆ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆದೇಶ ಮಾಡಿದ್ದಾರೆ.

ಪ್ರಜ್ವಲ್‌ 14 ದಿನ ನ್ಯಾಯಾಂಗ ಕಸ್ಟಡಿಗೆ
ಹೊಣೆ ಹೊತ್ತವರಿಂದ ವರದಿ

ಚುನಾವಣೆ ಹೊಣೆ ಹೊತ್ತವರಿಂದ ವರದಿ ಕೇಳುತ್ತೇವೆ, ಅದಕ್ಕಾಗಿ ಒಂದೆರಡು ದಿನದಲ್ಲೇ ಹಿರಿಯ ನಾಯಕರ ಸಭೆ ಕರೆಯಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಎಲ್ಲಿ ಪ್ರಚಂಡ ಜಯ ಗಳಿಸಿದ್ದೆವೋ, ಈ ಚುನಾವಣೆಯಲ್ಲಿ ಆ ಸ್ಥಳಗಳಲ್ಲೇ ಭಾರೀ ಸೋಲು ಕಂಡಿದ್ದೇವೆ.

ಕ್ಷೇತ್ರದ ಚುನಾವಣಾ ಹೊಣೆಗಾರಿಕೆ ವಹಿಸಿಕೊಂಡವರು ಸೋಲಿನ ಕಾರಣಗಳನ್ನು ಕೊಡಬೇಕಿರುವುದು ಅವರ ಜವಾಬ್ದಾರಿ, ಕೊಡುತ್ತಾರೆ.
ಎಲ್ಲಿ ಎಡವಿದ್ದೇವೆ ತಿಳಿಸಬೇಕು

ನಮಗೆ ವರದಿ ನೀಡುವ ಮೊದಲು ಕಾರ್ಯಕರ್ತರು, ಮುಖಂಡರು ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆದು ಎಲ್ಲಿ ಎಡವಿದ್ದೇವೆ ಎಂಬುದನ್ನು ತಿಳಿಸಬೇಕು ಎಂದರು.

ನನ್ನ ಕ್ಷೇತ್ರದ ಕೆಲವು ಮುಖಂಡರ ವ್ಯಾಪ್ತಿಯಲ್ಲೇ ಹಿನ್ನಡೆಯಾಗಿದೆ, ಈಗ ಅದರ ಬಗ್ಗೆ ದೂಷಿಸುತ್ತಾ ಕುಳಿತರೆ ಆಗದು, ಆಗಿರುವ ತಪ್ಪನ್ನು ತಿದ್ದಿಕೊಳ್ಳಬೇಕು, ಅದಕ್ಕಾಗಿಯೇ ವರಿಷ್ಠರು ವರದಿ ಕೇಳಿದ್ದಾರೆ.

ಮುಂದೆ ಜಿಲ್ಲಾ, ತಾಲ್ಲೂಕು ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿವೆ, ಈ ವೇಳೆಗೆ ನಮ್ಮ ತಪ್ಪನ್ನು ನಾವು ತಿದ್ದಿಕೊಳ್ಳಬೇಕು.

ವೃತ್ತಿಪರ ಕೋರ್ಸ್: ವಿಕಲಚೇತನರ ವೈದ್ಯಕೀಯ ತಪಾಸಣೆ ಆರಂಭ
ದೋಷಾರೋಪಣೆಯಿಂದ ಪ್ರಯೋಜನವಿಲ್ಲ

ತಪ್ಪು ತಿದ್ದಿಕೊಳ್ಳುವ ಬದಲು ದೋಷಾರೋಪಣೆ ಮಾಡುವುದರಿಂದ ಏನೂ ಪ್ರಯೋಜನವಿಲ್ಲ, ನನ್ನ ಬಳಿ ಯಾವುದೇ ಮುಖಂಡರು ಚುನಾವಣೆಯಲ್ಲಿ ಹಿನ್ನಡೆ ಆಯಿತು ಎಂದು ಹೇಳಿಲ್ಲ ಮತ್ತು ದೂರು ನೀಡಿಲ್ಲ.

ಆದರೂ ಜನರ ತಿರಸ್ಕಾರಕ್ಕೆ ಕಾರಣ ಏನಿರಬಹುದು ಎಂಬುದನ್ನು ತಿಳಿಯುವುದು ನಮಗೆ ಅಗತ್ಯವಿದೆ, ಅದಕ್ಕಾಗಿ ಉಸ್ತುವಾರಿಗಳು ಪೂರ್ಣ ವರದಿ ನೀಡಬೇಕು ಎಂದರು.

ಮೈಸೂರು ಮೃಗಾಲಯದಲ್ಲಿ ಮತ್ಸ್ಯಾಗಾರ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
asked report from leadershigh command ordered to get reportkpcc president warning to mla'sloka sabha election-2024mla's should not react in public
0 FacebookTwitterPinterestEmail
admin

previous post
ಪ್ರಜ್ವಲ್‌ 14 ದಿನ ನ್ಯಾಯಾಂಗ ಕಸ್ಟಡಿಗೆ
next post
ಹೆಚ್ ಡಿ ಕುಮಾರಸ್ವಾಮಿಗೆ ಬೃಹತ್ ಕೈಗಾರಿಕೆ ಹೊಣೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ