Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮೂರು ಉಪ ಮುಖ್ಯಮಂತ್ರಿಗಳ ಬೇಡಿಕೆ ಮತ್ತೆ ಮುನ್ನೆಲೆಗೆ

by admin June 21, 2024
written by admin June 21, 2024 0 comments 1 minutes read
0FacebookTwitterPinterestEmail
285

ಲೋಕಸಭಾ ಚುನಾವಣಾ ಹಿನ್ನಡೆ ಡಿ.ಕೆ.ಶಿವಕುಮಾರ್ ಹೆಗಲಿಗೆ

ಬೆಂಗಳೂರು : ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಮೂರು ಉಪ ಮುಖ್ಯಮಂತ್ರಿಗಳ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ.

ಕರ್ನಾಟಕದಲ್ಲಿ ಪಕ್ಷ ಅಧಿಕಾರದಲ್ಲಿದ್ದರೂ ಲೋಕಸಭಾ ಚುನಾವಣೆಯಲ್ಲಿ ಆದ ಹಿನ್ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಗಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಹಾಕಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಅಗತ್ಯವಿದೆ ಎಂದಿದ್ದಾರೆ.

ಈ ಬಗ್ಗೆ ಪಕ್ಷದ ವರಿಷ್ಠರು, ಮುಖ್ಯಮಂತ್ರಿ ಹಾಗೂ ಸಾರ್ವಜನಿಕವಾಗಿ ಚರ್ಚೆಯ ಅಗತ್ಯವಿದೆ. ಚುನಾವಣಾ ಸೋಲಿನಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಯಕತ್ವದ ಬಗ್ಗೆಯೂ ಅಪಸ್ವರ ಇಲ್ಲ.

ಆದರೆ, ಕೆಪಿಸಿಸಿಯಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಸತೀಶ್ ಒತ್ತಿ ಹೇಳುವುದರ ಮೂಲಕ ಶಿವಕುಮಾರ್ ಅಧಿಕಾರವನ್ನು ಮೊಟಕುಗೊಳಿಸಬೇಕೆಂಬ ಪರೋಕ್ಷ ಸಂದೇಶವನ್ನು ವರಿಷ್ಠರಿಗೆ ನೀಡಿದ್ದಾರೆ.

ಚುನಾವಣೆಯಲ್ಲಿ ಸೋತಿದ್ದನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಏಕೆ ಸೋತಿದ್ದೇವೆ ಎಂಬುದು ಜನರಿಗೆ ಹಾಗೂ ಕಾರ್ಯಕರ್ತರಿಗೂ ಗೊತ್ತಾಗಬೇಕು.
ಚುನಾವಣೆಗೂ ಮುನ್ನವೇ ಪರಿಶಿಷ್ಟ ಜಾತಿ, ವರ್ಗ, ವೀರಶೈವರಿಗೆ ಒಂದೊಂದು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬಡ್ತಿ ಅಥವಾ ನೇಮಕಾತಿ ಮಾಡಿದ್ದರೆ ನಮಗೆ ಹೆಚ್ಚು ಸ್ಥಾನ ಬರುತ್ತಿತ್ತು.

ಪಕ್ಷದ ಹಿತದ ಉದ್ದೇಶದಿಂದಲೇ ನಾವುಗಳು ಉಪ ಮುಖ್ಯಮಂತ್ರಿ ಸ್ಥಾನಗಳ ಬೇಡಿಕೆಯನ್ನು ಇಟ್ಟಿದ್ದೆವು. ಈಗಲಾದರೂ ವರಿಷ್ಠರು ಹೆಚ್ಚು ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ವಿಶ್ರಾಂತಿ ಕೊಠಡಿಯಿಂದ ಲಾಕಪ್‌ಗೆ ದರ್ಶನ್ ಶಿಫ್ಟ್ !

ನಮ್ಮ ಬೇಡಿಕೆಗಳ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯಲಿ. ಒಬ್ಬರಿಗೇ ಎಲ್ಲಾ ಹುದ್ದೆಗಳನ್ನು ನೀಡಿದರೆ, ಪಕ್ಷಕ್ಕೆ ದುಡಿದ ಬೇರೆ ನಾಯಕರ ಗತಿಯೇನು ಎಂದು ಪ್ರಶ್ನಿಸಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಶಿವಕುಮಾರ್ ಕಣಕ್ಕಿಳಿಯುವ ಬಗ್ಗೆ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ ಸಚಿವರು, ಅಲ್ಲಿಯೂ ನಮ್ಮ ಒಳ್ಳೆಯ ಕಾರ್ಯಕರ್ತರಿರುತ್ತಾರೆ. ಅಂತಹವರನ್ನು ಹುಡುಕಿ ಕಣಕ್ಕಿಳಿಸಬೇಕು.

ಉಪ ಚುನಾವಣೆಗೆ ಇನ್ನೂ ಆರು ತಿಂಗಳ ಸಮಯಾವಕಾಶ ಇದೆ. ಕಾದು ನೋಡೋಣ. ಆದರೆ, ಸಮರ್ಥ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಸ್ಥಳೀಯವಾಗಿ ಈಗಿನಿಂದಲೇ ನಡೆಯಬೇಕು ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಮೂರು ತಿಂಗಳು ಮುಗಿಯುತ್ತಿದ್ದಂತೆ ಅವರ ಸಹೋದ್ಯೋಗಿಗಳಾದ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್ ಹಾಗೂ ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು.

ಅಷ್ಟೇ ಅಲ್ಲ ಸಿದ್ದರಾಮಯ್ಯ ಅವರು ಪೂರ್ಣಾವಧಿ ಅಧಿಕಾರದಲ್ಲಿರುತ್ತಾರೆ ಎಂಬ ವಿಚಾರವನ್ನು ಬಹಿರಂಗವಾಗೇ ಚರ್ಚಿಸಿ, ಶಿವಕುಮಾರ್ ನಾಯಕತ್ವಕ್ಕೆ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಹೀನಾಯ ಸೋಲು ಅನುಭವಿಸಿದ ನಂತರ ಸಿದ್ದರಾಮಯ್ಯ ಬಣ ಮತ್ತೆ ಮುನ್ನೆಲೆಗೆ ಬಂದಿದೆ. ತಮ್ಮ ಹಳೇ ಬೇಡಿಕೆಗಳನ್ನು ಮತ್ತೆ ಮುಂದಿಡುವ ಜೊತೆಗೆ ಪಕ್ಷದಲ್ಲೂ ಬದಲಾವಣೆಗೆ ಆಗ್ರಹ ಪಡಿಸಿದೆ.

ಜೂನ್ 22 ರಿಂದ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
againdemanddk shivakumarLok Sabha Electionsetbackshouldersthree Deputy Chief Ministers
0 FacebookTwitterPinterestEmail
admin

previous post
ವಿಶ್ರಾಂತಿ ಕೊಠಡಿಯಿಂದ ಲಾಕಪ್‌ಗೆ ದರ್ಶನ್ ಶಿಫ್ಟ್ !
next post
ರಾಜ್ಯದ 94 ಯುವಜನರಿಗೆ ಸ್ಲೊವಾಕಿಯಾದಲ್ಲಿ ಉದ್ಯೋಗ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ