Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸಿಎಂ ಸಿದ್ದರಾಮಯ್ಯ 3 ದಿನ ದೆಹಲಿ ಪ್ರವಾಸ

by admin June 26, 2024
written by admin June 26, 2024 0 comments 1 minutes read
0FacebookTwitterPinterestEmail
206

ಕೆಪಿಸಿಸಿ ಅಧ್ಯಕ್ಷರ, ಸಚಿವರ ಖಾತೆ ಮರು ಹಂಚಿಕೆ ಬಗ್ಗೆ ಚರ್ಚೆ

ಬೆಂಗಳೂರು : ಕರ್ನಾಟಕದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ, ಸಚಿವರ ಖಾತೆಗಳ ಮರು ಹಂಚಿಕೆ ಸೇರಿದಂತೆ ಕೆಲವು ರಾಜಕೀಯ ವಿಚಾರಗಳ ಕುರಿತು ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಕೇಂದ್ರದ ಮುಂದೆ ಬಾಕಿ ಉಳಿದಿರುವ ರಾಜ್ಯದ ಯೋಜನೆಗಳಿಗೆ ಚಾಲನೆ, ಕೇಂದ್ರ ಸಂಪುಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ನೂತನ ಸಚಿವರುಗಳಿಗೆ ಅಭಿನಂದನೆ ಮತ್ತು ರಾಜ್ಯದ ಸಂಸದರೊಂದಿಗೆ ಚರ್ಚೆ ನಡೆಸಲು ಈ ಪ್ರವಾಸ ಕೈಗೊಂಡಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ನಾಳೆ ಸಂಜೆ ಸಭೆ ನಡೆಯಲಿದ್ದು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭೆಯ ಎಲ್ಲ ಸದಸ್ಯರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೆ, ತಮ್ಮ ಪ್ರವಾಸ ಕಾಲದಲ್ಲಿ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಲು ಮುಖ್ಯಮಂತ್ರಿಗಳು ಸಮಯ ನಿಗದಿ ಮಾಡಿಕೊಂಡಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಂಡಿರುವ ರಾಹುಲ್ ಗಾಂಧಿ ಅವರನ್ನು ಅಭಿನಂದಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಂಡಿದ್ದಾರೆ. ಇದೇ ಸಮಯ ಬಳಕೆ ಮಾಡಿಕೊಂಡು ತಮ್ಮ ಮಂತ್ರಿಮಂಡಲದಲ್ಲಿ ಕೆಲವು ಸಚಿವರ ಖಾತೆ ಬದಲಾವಣೆ ಹಾಗೂ ಜಿಲ್ಲಾ ಉಸ್ತುವಾರಿಗಳ ಬದಲಾವಣೆಗೆ ಸಂಬಂಧಿಸಿದಂತೆಯೂ ವರಿಷ್ಠರೊಂದಿಗೆ ಚರ್ಚೆ ನಡೆಸಿ, ಹಸಿರು ನಿಶಾನೆ ಪಡೆಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಹೊಸಬರ ನೇಮಕಾತಿ ಸಂಬಂಧ ಆಂತರಿಕವಾಗಿ ಒತ್ತಡ ಹೆಚ್ಚಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ವರಿಷ್ಠರನ್ನು ಮನವಿ ಮಾಡಲಿದ್ದಾರೆ.

ಗಣ್ಯರ ಹನಿಟ್ರ್ಯಾಪ್: ಕೋಟ್ಯಂತರ ರೂ. ವಸೂಲಿ ಯತ್ನ !

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಳ್ಳುವ ವೇಳೆ ಕೆಲವು ನಿಬಂಧನೆಗಳನ್ನು ವಿಧಿಸಲಾಗಿತ್ತು.
ಇದರಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರೆಸುವ ತೀರ್ಮಾನ ಕೈಗೊಳ್ಳಲಾಗಿತ್ತು.

ಅದರಂತೆ ಚುನಾವಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಿವಕುಮಾರ್ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಬೇಕು. ಇಂತಹ ಸಂದರ್ಭದಲ್ಲಿ ಆ ಸ್ಥಾನವನ್ನು ಪರಿಶಿಷ್ಟ ಸಮಾಜ ಇಲ್ಲವೇ ವರ್ಗದ ನಾಯಕರಿಗೆ ನೀಡಬೇಕು ಎಂಬುದು ಬೇಡಿಕೆಯಾಗಿದೆ.

ಇದೇ ಸಂದರ್ಭದಲ್ಲಿ ಕೆಲವು ಸಚಿವರು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ, ಅದನ್ನು ಈಡೇರಿಸುವ ಅವಶ್ಯಕತೆ ಇದೆ. ಇಲ್ಲದಿದ್ದಲ್ಲಿ ಸರ್ಕಾರ ಮತ್ತು ಪಕ್ಷದಲ್ಲಿ ಗೊಂದಲ ಉಂಟಾಗಬಹುದು ಎಂಬ ಮಾಹಿತಿಯನ್ನು ವರಿಷ್ಠರ ಗಮನಕ್ಕೆ ತರಲಿದ್ದಾರೆ.

ಮುಖ್ಯಮಂತ್ರಿ ಅವರು ವರಿಷ್ಠರನ್ನು ಭೇಟಿ ಮಾಡುವುದನ್ನು ಅರಿತ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಸಚಿವರು, ಶಾಸಕರು ವರಿಷ್ಠರನ್ನು ಭೇಟಿ ಮಾಡಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

ಅಲ್ಲದೆ, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಮ್ಮನ್ನು ಮಂತ್ರಿಗಿರಿಯಿಂದ ವಿಮುಕ್ತಿಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನೀಡಿ ಎಂದು ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಅವರು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪರಿಶಿಷ್ಟ ಸಮಯದಾಯಕ್ಕೆ ಕರ್ನಾಟಕ ಕಾಂಗ್ರೆಸ್‌ನ ಹೊಣೆ ವಹಿಸಿ ಎಂದು ಮನವಿ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ChairmanChief MinisterdelhiDISCUSSIONkpccminister portfoliosredistributionSiddaramaiahthree-day trip
0 FacebookTwitterPinterestEmail
admin

previous post
ಗಣ್ಯರ ಹನಿಟ್ರ್ಯಾಪ್: ಕೋಟ್ಯಂತರ ರೂ. ವಸೂಲಿ ಯತ್ನ !
next post
ನಾಡಪ್ರಭು ಕೆಂಪೇಗೌಡರಿಗೆ ಪುಷ್ಪನಮನ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ