ಬೆಂಗಳೂರು: ತಾವು ಬಯಸಿದ ಖಾತೆ ನೀಡಲಿಲ್ಲ ಎಂದು ಅಸಮಾಧಾನಗೊಂಡು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹೈಕಮಾಂಡ್ ಸೇರಿದಂತೆ ಹಲವು ನಾಯಕರ ಸಂಧಾನಕ್ಕೆ ಮಣಿದು ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಸಂಪುಟ …
ಬೆಂಗಳೂರು: ತಾವು ಬಯಸಿದ ಖಾತೆ ನೀಡಲಿಲ್ಲ ಎಂದು ಅಸಮಾಧಾನಗೊಂಡು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹೈಕಮಾಂಡ್ ಸೇರಿದಂತೆ ಹಲವು ನಾಯಕರ ಸಂಧಾನಕ್ಕೆ ಮಣಿದು ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಸಂಪುಟ …
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ ನಿವಾಸವನ್ನಾಗಿ ಕುಮಾರಕೃಪಾ ಅತಿಥಿಗೃಹವನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ಕುಮಾರ ಕೃಪ ಅತಿಥಿ ಗೃಹದ ಹಳೆಯ ಕಟ್ಟಡ ಪ್ರದೇಶ ಸಾಕಷ್ಟು ವಿಶಾಲವಾಗಿದೆ. ಸಾರ್ವಜನಿಕರ ಭೇಟಿ, ಅಧಿಕಾರಿಗಳೊಂದಿಗೆ ಸಭೆ, …
ಬೆಂಗಳೂರು:ಮಾಜಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಗೊಂಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಯಿತು. 25ನೇ …
ಬೆಂಗಳೂರು:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅನ್ನು ಸ್ವತಂತ್ರ ಸಂಸ್ಥೆಯಾದ ರಾಜ್ಯ ಚುನಾವಣಾ ಆಯೋಗದಿಂದಲೇ ನಡೆಸುವ ಸಾಧ್ಯಾಸಾಧ್ಯತೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ತಜ್ಞರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಕೇಂದ್ರ ಚುನಾವಣಾ ಆಯೋಗ …
ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯಸಭೆಗೆ ಕಳುಹಿಸಿ ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರ ಗೊಂದಲಕ್ಕೆ ತೆರೆ ಎಳೆಯಲು ಎಐಸಿಸಿ ಮುಂದಾಗಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಸಲು ಬಿಜೆಪಿ ಮಾಡಿದ ಕಾರ್ಯತಂತ್ರವನ್ನೇ ಕಾಂಗ್ರೆಸ್ ಅನುಸರಿಸಲು ಹೊರಟಿದೆ. …
ಡಿ.3ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರದಾನ
ಬೆದರಿಕೆ ಹಾಕಿದವರ ಪತ್ತೆಗೆ ಪೊಲೀಸರ ಕಾರ್ಯಚರಣೆ: ಡಿಸಿಎಂ
ಹೆಚ್ಐವಿ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು ಟೆಕ್ ಮೇಳದಲ್ಲಿ ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಅಭಿಮತ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ
ಮಹಿಳಾ ಸುರಕ್ಷತೆಗಾಗಿ ಬಿಎಂಟಿಸಿ ಬಸ್, ನಿಲ್ದಾಣದಲ್ಲಿ ಪ್ಯಾನಿಕ್ ಬಟನ್
ಆತಂಕಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್
ಯುಜಿ ಆಯುಷ್ ನೋಂದಣಿ, ಪ್ರವೇಶ
ನ.30ರಂದು ಕೊನೆ ಅವಕಾಶ: ಕೆಇಎ
ಬೆಂಗಳೂರು: ಬಾಕಿ ಉಳಿದಿರುವ ಯುಜಿ ಆಯುಷ್ ಸೀಟುಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೊನೆ ಅವಕಾಶ ನೀಡಿದ್ದು, ಅರ್ಹರು ನ.30ರಂದು ನಿಗದಿತ ಶುಲ್ಕದ ಡಿ.ಡಿ ಸಮೇತ ಕೆಇಎ ಕಚೇರಿಗೆ ಬಂದು ಪ್ರವೇಶ ಪಡೆಯಬಹದು.
ವಿಸ್ತರಿತ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಂತರ ಉಳಿದಿರುವ ಸೀಟುಗಳ ಸಂಖ್ಯೆಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರಿಗೆ ಈ ಸೀಟುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯುಜಿನೀಟ್ ಅರ್ಹತೆಯ ಅಂಕಗಳನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಹಾಗೂ ಇಲ್ಲಿಯವರೆಗೂ ನೋಂದಣಿ ಮಾಡದಿರುವ ಅರ್ಹ ಅಭ್ಯರ್ಥಿಗಳು ಸಹ ಸದರಿ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಇದ್ದಲ್ಲಿ ಅಂತಹವರು ಕೂಡ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೋಂದಣಿ ಮತ್ತು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೆಇಎ ಪೋರ್ಟಲ್ ನಲ್ಲಿ ನ.30ರ ಬೆಳಿಗ್ಗೆ 10ರಿಂದ 11ರವರೆಗೆ ಅವಕಾಶ ಇರುತ್ತದೆ.
ಹೊಸದಾಗಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಅಂದು ಬೆಳಿಗ್ಗೆ 11ರಿಂದ 11.30ರವೆಗೆ ನಡೆಯಲಿದೆ. ನಂತರ ಡಿ.ಡಿ ಸಲ್ಲಿಸಿದ ಅರ್ಹರಿಗೆ ಮಧ್ಯಾಹ್ನ 2 ಗಂಟೆವರೆಗೆ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗುತ್ತದೆ. ಸಂಜೆ 4 ಗಂಟೆಗೆ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ.
ಪಿಜಿ ನೀಟ್ ಡಿಡಿ ಸಲ್ಲಿಸಲು ಮತ್ತೊಂದು ದಿನ ಅವಕಾಶ
ಪಿಜಿ ವೈದ್ಯಕೀಯ/ದಂತ ವೈದ್ಯಕೀಯ ಸೀಟುಗಳ ಭರ್ತಿಗೆ ನಡೆಸುವ ವಿಶೇಷ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅರ್ಹರಿಗೆ ಡಿ.ಡಿ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ನ.30ರ ಬೆಳಿಗ್ಗೆ 11ಗಂಟೆವರೆಗೆ ವಿಸ್ತರಿಸಲಾಗಿದೆ.
ಇದಾದ ನಂತರ ಮಧ್ಯಾಹ್ನ 12ರವರೆಗೆ ಆಪ್ಷನ್ ಎಂಟ್ರಿ ಮಾಡಬಹುದು. 3ಗಂಟೆಗೆ ಫಲಿತಾಂಶ ಪ್ರಕಟ. ನಂತರ ಮೂಲ ದಾಖಲೆ ಸಲ್ಲಿಸಲು 4 ಗಂಟೆವರೆಗೆ ಅವಕಾಶ ಇರುತ್ತದೆ ಎಂದು ರಮ್ಯಾ ತಿಳಿಸಿದ್ದಾರೆ.

