ಬೆಂಗಳೂರು:ಮಾಜಿ ಸಚಿವರಾದ ಬಿ.ನಾಗೇಂದ್ರ, ಗಾಲಿ ಜನಾರ್ದನ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಬಹಿರಂಗ ಪಡಿಸಿದ್ದಾರೆ. ಆಡಳಿತ ಪಕ್ಷದ ಸದಸ್ಯರಷ್ಟೇ ಅಲ್ಲ, ಪ್ರತಿಪಕ್ಷ …
ಬೆಂಗಳೂರು:ಮಾಜಿ ಸಚಿವರಾದ ಬಿ.ನಾಗೇಂದ್ರ, ಗಾಲಿ ಜನಾರ್ದನ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಬಹಿರಂಗ ಪಡಿಸಿದ್ದಾರೆ. ಆಡಳಿತ ಪಕ್ಷದ ಸದಸ್ಯರಷ್ಟೇ ಅಲ್ಲ, ಪ್ರತಿಪಕ್ಷ …
ನಾಗೇಂದ್ರ ಕಣ್ಣೀರಿಗೆ ಬಿಜೆಪಿ ಕಾರಣವಲ್ಲ, ಕಾಂಗ್ರೆಸ್ ಕಾರಣ ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು …
ಬೆಂಗಳೂರು : ಸಚಿವ ಬಿ. ನಾಗೇಂದ್ರ ಅವರಷ್ಟೇ ಅಲ್ಲದೆ, ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಗಣಿಧಣಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಅವರ ವಿರುದ್ಧ ತನಿಖೆಗೆ …
ಬೆಂಗಳೂರು:ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಡಿ.ಕೆ.ಶಿವಕುಮಾರ್ ಸದನ ಪ್ರವೇಶಿಸುವ ಮುನ್ನ ಮುಖ್ಯದ್ವಾರ ಹಾಗೂ ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿ ನಮಸ್ಕರಿಸಿದರು. ಕಳೆದ ಮೂರು-ನಾಲ್ಕು ದಶಕಗಳಿಂದ ನಿರಂತರವಾಗಿ ಸದನದ ಸದಸ್ಯರಾಗಿರುವ ಶಿವಕುಮಾರ್, …
ಬೆಂಗಳೂರು:ಡಬಲ್ ಬಿಲ್, ನಕಲಿ ಬಿಲ್ ಮಾಡುವ ಅಧಿಕಾರಿಗಳನ್ನು ಬಡಿದುಹಾಕುವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಸಿದ್ದಾರೆ. ಭಷ್ಟಾಚಾರ ವಿಷಯದಲ್ಲಿ ರಾಜೀ ಇಲ್ಲ, ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ, ನೀವು ಪ್ರತೀ ಫಲಾನುಭವಿಯ ಮಾಹಿತಿ ಇಟ್ಟುಕೊಳ್ಳಬೇಕು, …
ಡಿ.3ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರದಾನ
ಬೆದರಿಕೆ ಹಾಕಿದವರ ಪತ್ತೆಗೆ ಪೊಲೀಸರ ಕಾರ್ಯಚರಣೆ: ಡಿಸಿಎಂ
ಹೆಚ್ಐವಿ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು ಟೆಕ್ ಮೇಳದಲ್ಲಿ ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಅಭಿಮತ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ
ಮಹಿಳಾ ಸುರಕ್ಷತೆಗಾಗಿ ಬಿಎಂಟಿಸಿ ಬಸ್, ನಿಲ್ದಾಣದಲ್ಲಿ ಪ್ಯಾನಿಕ್ ಬಟನ್
ಆತಂಕಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್
ಯುಜಿ ಆಯುಷ್ ನೋಂದಣಿ, ಪ್ರವೇಶ
ನ.30ರಂದು ಕೊನೆ ಅವಕಾಶ: ಕೆಇಎ
ಬೆಂಗಳೂರು: ಬಾಕಿ ಉಳಿದಿರುವ ಯುಜಿ ಆಯುಷ್ ಸೀಟುಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೊನೆ ಅವಕಾಶ ನೀಡಿದ್ದು, ಅರ್ಹರು ನ.30ರಂದು ನಿಗದಿತ ಶುಲ್ಕದ ಡಿ.ಡಿ ಸಮೇತ ಕೆಇಎ ಕಚೇರಿಗೆ ಬಂದು ಪ್ರವೇಶ ಪಡೆಯಬಹದು.
ವಿಸ್ತರಿತ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಂತರ ಉಳಿದಿರುವ ಸೀಟುಗಳ ಸಂಖ್ಯೆಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರಿಗೆ ಈ ಸೀಟುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯುಜಿನೀಟ್ ಅರ್ಹತೆಯ ಅಂಕಗಳನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಹಾಗೂ ಇಲ್ಲಿಯವರೆಗೂ ನೋಂದಣಿ ಮಾಡದಿರುವ ಅರ್ಹ ಅಭ್ಯರ್ಥಿಗಳು ಸಹ ಸದರಿ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಇದ್ದಲ್ಲಿ ಅಂತಹವರು ಕೂಡ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೋಂದಣಿ ಮತ್ತು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೆಇಎ ಪೋರ್ಟಲ್ ನಲ್ಲಿ ನ.30ರ ಬೆಳಿಗ್ಗೆ 10ರಿಂದ 11ರವರೆಗೆ ಅವಕಾಶ ಇರುತ್ತದೆ.
ಹೊಸದಾಗಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಅಂದು ಬೆಳಿಗ್ಗೆ 11ರಿಂದ 11.30ರವೆಗೆ ನಡೆಯಲಿದೆ. ನಂತರ ಡಿ.ಡಿ ಸಲ್ಲಿಸಿದ ಅರ್ಹರಿಗೆ ಮಧ್ಯಾಹ್ನ 2 ಗಂಟೆವರೆಗೆ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗುತ್ತದೆ. ಸಂಜೆ 4 ಗಂಟೆಗೆ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ.
ಪಿಜಿ ನೀಟ್ ಡಿಡಿ ಸಲ್ಲಿಸಲು ಮತ್ತೊಂದು ದಿನ ಅವಕಾಶ
ಪಿಜಿ ವೈದ್ಯಕೀಯ/ದಂತ ವೈದ್ಯಕೀಯ ಸೀಟುಗಳ ಭರ್ತಿಗೆ ನಡೆಸುವ ವಿಶೇಷ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅರ್ಹರಿಗೆ ಡಿ.ಡಿ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ನ.30ರ ಬೆಳಿಗ್ಗೆ 11ಗಂಟೆವರೆಗೆ ವಿಸ್ತರಿಸಲಾಗಿದೆ.
ಇದಾದ ನಂತರ ಮಧ್ಯಾಹ್ನ 12ರವರೆಗೆ ಆಪ್ಷನ್ ಎಂಟ್ರಿ ಮಾಡಬಹುದು. 3ಗಂಟೆಗೆ ಫಲಿತಾಂಶ ಪ್ರಕಟ. ನಂತರ ಮೂಲ ದಾಖಲೆ ಸಲ್ಲಿಸಲು 4 ಗಂಟೆವರೆಗೆ ಅವಕಾಶ ಇರುತ್ತದೆ ಎಂದು ರಮ್ಯಾ ತಿಳಿಸಿದ್ದಾರೆ.

